TOP STORIES:

FOLLOW US

ಒಂದು ಗೌರವಯುತ ವಿದಾಯದ ವೇದಿಕೆಯತ್ತ…ಜನಾರ್ಧನ ಪೂಜಾರಿ


“ಒಂದು ಗೌರವಯುತ ವಿದಾಯದ ವೇದಿಕೆಯತ್ತ”

“ಸಾಲ ಮೇಳದ ಸಂಗ್ರಾಮ”

“ಜನಾರ್ಧನ ಪೂಜಾರಿ”

ಇದು ಕರಾವಳಿಯ ಮಾನವೀಯತೆಯ ಪ್ರಶ್ನೆ…!!

 

ಬಹು ದಿನಗಳಿಂದ ಸಾಮಾಜಿಕ ಜಾಲತಾಣದ ವೇದಿಕೆಯತ್ತ ಒಂದು ವಿಚಾರದ ಕುರಿತು ತಡಬಡಿಸುತ್ತಲೇ ಇದ್ದೇ. ಜನಾರ್ಧನ ಪೂಜಾರಿಯವರ ಸ್ವ ಪಕ್ಷಿಯವರಿಂದ ಒಂದು ಮಾತನ್ನು ನಿರೀಕ್ಷಿಸುತ್ತಿದ್ದೆ..!! ಆದರೆ ಅಲ್ಲಿಂದ ಉತ್ತರವೇ ಬರಲಿಲ್ಲ.ಕಾಯುವಿಕೆ ಸಾಕಿನ್ನು ಎಂದು ಪೂಜಾರಿಯವರ ಪಕ್ಷದ ಕಾರ್ಯಕರ್ತನಲ್ಲದಿದ್ದರು, ಭಾ.ಜ.ಪಾ. ದ ಕಾರ್ಯಕರ್ತನಾಗಿದ್ದುಕೊಂಡೆ ಈ ಬರಹವನ್ನು ನಿಮ್ಮ ಮುಂದೆ ತರಲೇಬೇಕಿತ್ತು ಅಂತನಿಸಿತು..!

ಜನಾರ್ಧನ ಪೂಜಾರಿ ದೇಶ ಕಂಡ ಭ್ರಷ್ಟಾಚಾರ ರಹಿತ ರಾಜಕಾರಣಿ ಎಂದು ನಾನು ಪುನಃ ಹೇಳುವ ಅಗತ್ಯವಿಲ್ಲವೆಂದು ಭಾವಿಸುತ್ತೇನೆ.ಅದು ಎಲ್ಲಾ ಪಕ್ಷದವರಿಗೂ ತಿಳಿದ ವಿಷಯವೇ ಆಗಿದೆ.

ಬಡ ಜನರು ಬ್ಯಾಂಕಿನ ಒಂದಿಷ್ಟು ಜ್ಞಾನವನ್ನು , ಸಾಲವನ್ನು ಎಲ್ಲರಿಗೂ ಕೊಡುವಂತೆ ಮಾಡಿದ್ದೇ ಈ ಜನಾರ್ಧನ ಪೂಜಾರಿಯವರು..!!

ಅಂದಿನ ಸರಕಾರದಲ್ಲಿ ಕೇಂದ್ರದ ಸಚಿವನಾಗಿ ಅನೇಕ ಜವಾಬ್ದಾರಿಗಳನ್ನು ಜವಾಬ್ದಾರಿಯುತವಾಗಿ ನಿಭಾಯಿಸಿ,ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸ್ಥಾನವನ್ನು ಪ್ರೀತಿಯಿಂದ ತಿರಸ್ಕರಿಸಿದ ವ್ಯಕ್ತಿ ಇವರು..!

ಈಗಿನ ರಾಜಕೀಯದಲ್ಲಿ ಪಂಚಾಯತಿನ ಸದಸ್ಯನಾದವನು ಕೂಡ ಮಹಡಿಯ ಮೇಲೆ ಇನ್ನೊಂದು ಮನೆ ಮಾಡುವ ತನಕ ದುಡಿಯುವ ಕಾಯಕ ಯೋಗಿಗಳು ನಮ್ಮ ಮುಂದೆ ಇದ್ದಾರೆ,ಅಲ್ಲವೇ..!? ಆದರೆ ಪೂಜಾರಿಯವರು…!??

ದಶಕಗಳ ಕಾಲ ರಾಜಕೀಯದಲ್ಲಿ ಅಭಿಶಕ್ತ ದೊರೆಯಾಗಿ ವಿಜೃಂಭಿಸಿದವರು,ಇಂದು ಅವರ ಕೈಯಲ್ಲಿ ಇರೋದು ಹಳೆಯ ಮನೆ ಮಾತ್ರ..! ಬಂದ ಗೌರವ ಧನ ಯಾವುದೋ ಅನಾಥಾಶ್ರಮ,ಬಡವರ ಮನೆಯ ದಾರಿಯನ್ನು ಕೇಳಿಕೊಂಡು ಸಾಗುತ್ತಿದೆ.!

ಇವರ ಬಗ್ಗೆ ತುಂಬಾ ಬರೆಯಬೇಕೆನ್ನಿಲ್ಲ..! ಯಾಕೆಂದರೆ ಎಲ್ಲಾ ರಾಜಕೀಯ ಪ್ರಮುಖರಿಗೆ ಇಂದು ಇವರ ಕುರಿತು ಒಂದು ಗೌರವಯುತ ಗೌರವ ಇದ್ದೆ ಇದೇ ಎಂದೇ ಹೇಳಬಹುದು.! ಚುನಾವಣೆ ಬಂದಾಗ ಇವರ ಆಶೀರ್ವಾದದ ಅಭಯಕ್ಕಾದರು ಮನೆಯ ಕಡೆ ದಾರಿಯನ್ನು ನೋಡುತ್ತಾರೆ..!

ಇಂದಿನ ರಾಜಕೀಯದಲ್ಲಿ ಪೂಜಾರಿಯವರಿಗೆ ಸರಿ ಸಮಾನವಾಗಿ ನಿಲ್ಲುವ ರಾಜಕಾರಣಿ ಹುಡುಕಿದರೂ ಸಿಗಲಾರರು.!

“ಇರಲಿ ಬಿಡಿ ವಿಷಯಕ್ಕೆ ಬರೋಣ..”

ಜನಾರ್ಧನ ಪೂಜಾರಿ ಎಂಬ ಸಹೃದಯಿ ಮನಸ್ಸಿಗೆ ಗೌರವಯುತ ವಿದಾಯದ ವೇದಿಕೆಯನ್ನು ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ.!
ಇದು ಕರಾವಳಿಯ ಮೇಲೆ ಬೆಟ್ಟದಷ್ಟಿದೆ..!
ಮಂಗಳೂರಿನ ಒಂದು ದೊಡ್ಡ ವೇದಿಕೆಯಲ್ಲಿ ಜನಾರ್ಧನ ಪೂಜಾರಿರವರಿಗೆ,ಕರಾವಳಿಯ ಎಲ್ಲಾ ರಾಜಕೀಯ ಪಕ್ಷದ ನಾಯಕರು,ಜಾತಿ-ಭೇದವನ್ನು ಮೀರಿ ಅದರಲ್ಲೂ ಧರ್ಮ, ಜಾತಿ ಎಂಬ ಅನ್ವರ್ಥ ನಾಮವನ್ನು ಬದಿಗೊತ್ತಿ ಗೌರವಿಸಬೇಕು,ಈ ಸಂಭ್ರಮದಲ್ಲಿ ಎಲ್ಲರೂ ಭಾಗಿಯಾಗಬೇಕು.

ಕರಾವಳಿಯಲ್ಲಿ ಧರ್ಮ ಧರ್ಮದ ನಡುವೆ ಆಳವಾದ ಕಂದಕವೇ ನಿರ್ಮಾಣವಾಗಿದೆ.! ದಿನೇ ದಿನೇ ಅದು ಬಿಗಡಾಯಿಸುತ್ತಲೇ ಇದೆ. ಇದನ್ನು ಸ್ವಲ್ಪವಾದರೂ,ಒಂದು ದಿನಕ್ಕಾದರು ಪೂಜಾರಿಯವರ ಗೌರವಯುತ ವೇದಿಕೆಯ ನಡುವೆ ಸಹಬದಿಗೆ ತರೋಣ..!!

ಜನಾರ್ಧನ ಪೂಜಾರಿಯವರಿಗೆ ಅಂದು ನಡೆಯುವ ಅಭಿಮಾನದ ಬೃಹತ್ ಕಾರ್ಯಕ್ರಮಕ್ಕೆ ಮಂಗಳೂರಿಗೆ ಮಂಗಳೂರೇ ನವ ವಧುವಿನಂತೆ ಶೃಂಗಾರಗೊಳ್ಳಬೇಕು.!
ಕರಾವಳಿ ಇಂತಹ ಕಾರ್ಯಕ್ರಮವನ್ನು ಇಷ್ಟರವರೆಗೆ ನೋಡಿರಲು ಸಾಧ್ಯವಿರಬಾರದು.ಅಂತಹ ಕಾರ್ಯ ಯೋಜನೆ ಸಿದ್ಧವಾಗಬೇಕು.ಜಾತಿ,ಮತ, ಧರ್ಮ ಮತ್ತು ಪಕ್ಷವನ್ನು ಬದಿಗೆ ಸರಿಸಿ ಸಾಮಾನ್ಯ ವ್ಯಕ್ತಿಯಾಗಿ ಆ ಸಂಭ್ರಮದಲ್ಲಿ ಭಾಗಿಯಾಗಬೇಕು. ಕಾರ್ಯಕ್ರಮದಲ್ಲಿ “ಪೂಜಾರಿಯವರೇ ಕೇಂದ್ರ ಬಿಂದು”ಆಗಿದ್ದು,ರಾಜ್ಯದ ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಮತ್ತು ಕೇಂದ್ರದ ಉನ್ನತ ಸಚಿವರು ಭಾಗಿಯಾಗಬೇಕು.ಅದರ ಜೊತೆಗೆ 100 ಸಾಧಕರಿಗೆ ವಿಶೇಷ ಸನ್ಮಾನವನ್ನು ಏರ್ಪಡಿಸಬೇಕು.ಬಡತನದಿಂದ ಮೇಲೆದ್ದು ಬಂದ ಸಾಧಕರಾಗಿರಬೇಕು.

ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ” ಬಿಲ್ಲವ ಸಂಘಟನೆಗಳು” ಹೊರಬೇಕು.(ಇದು ಬಿಲ್ಲವ ಸಂಘಟನೆಗಳ ಅಸ್ಥಿತ್ವದ ಪ್ರಶ್ನೆ.) ಬಿಲ್ಲವ ಸಂಘಟನೆಗಳೇ ಹೊರಲೇಬೇಕು..!! ಅಷ್ಟೇ..
ನಿಮ್ಮ ಜೊತೆ ಎಲ್ಲಾ ಸಂಘಟನೆಗಳನ್ನು ಜೊತೆ ಸೇರಿಸಿಕೊಂಡು ಸಾಗಬೇಕು.(ದೇಶ ವಿದೇಶದಲ್ಲಿರುವ ಸಾವಿರಾರು ಸಂಘಟನೆಗಳು ಬಿಲ್ಲವರಲ್ಲಿ ಇದೆ.)

ಒಂದು ರಾಜಕೀಯ ರಹಿತ ಉತ್ತಮ ವ್ಯಕ್ತಿ ಇದರ ಮೇಲ್ವಿಚಾರಣೆಯನ್ನು ನಡೆಸಬೇಕು.

ಕರಾವಳಿ ಒಮ್ಮತ ನೀಡುವುದರಲ್ಲಿ ಸಂದೇಹವಿಲ್ಲ ..!! ಒಂದು ಉತ್ತಮ ದಿನವನ್ನು ಆಯ್ಕೆ ಮಾಡಿ ಮುಂದಿನ ದಿನಗಳಲ್ಲಿ ಕಾರ್ಯ ಪ್ರವೃತ್ತರಾಗುವುದು ಒಳ್ಳೆಯದು.. ಆದಷ್ಟು ಬೇಗ..!!

ಮುಂದೊಂದು ದಿನ ಕಣ್ಣೀರಿನ ದಾರಿಯಲ್ಲಿ ನೆನೆಯುವುದು ಬೇಡ.. ಅಲ್ಲವೇ…

wwww.billavaswarriors.com

✍️ ವಿಜೇತ್ ಪೂಜಾರಿ ಶಿಬಾಜೆ


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »