TOP STORIES:

ಒಂದು ಗೌರವಯುತ ವಿದಾಯದ ವೇದಿಕೆಯತ್ತ…ಜನಾರ್ಧನ ಪೂಜಾರಿ


“ಒಂದು ಗೌರವಯುತ ವಿದಾಯದ ವೇದಿಕೆಯತ್ತ”

“ಸಾಲ ಮೇಳದ ಸಂಗ್ರಾಮ”

“ಜನಾರ್ಧನ ಪೂಜಾರಿ”

ಇದು ಕರಾವಳಿಯ ಮಾನವೀಯತೆಯ ಪ್ರಶ್ನೆ…!!

 

ಬಹು ದಿನಗಳಿಂದ ಸಾಮಾಜಿಕ ಜಾಲತಾಣದ ವೇದಿಕೆಯತ್ತ ಒಂದು ವಿಚಾರದ ಕುರಿತು ತಡಬಡಿಸುತ್ತಲೇ ಇದ್ದೇ. ಜನಾರ್ಧನ ಪೂಜಾರಿಯವರ ಸ್ವ ಪಕ್ಷಿಯವರಿಂದ ಒಂದು ಮಾತನ್ನು ನಿರೀಕ್ಷಿಸುತ್ತಿದ್ದೆ..!! ಆದರೆ ಅಲ್ಲಿಂದ ಉತ್ತರವೇ ಬರಲಿಲ್ಲ.ಕಾಯುವಿಕೆ ಸಾಕಿನ್ನು ಎಂದು ಪೂಜಾರಿಯವರ ಪಕ್ಷದ ಕಾರ್ಯಕರ್ತನಲ್ಲದಿದ್ದರು, ಭಾ.ಜ.ಪಾ. ದ ಕಾರ್ಯಕರ್ತನಾಗಿದ್ದುಕೊಂಡೆ ಈ ಬರಹವನ್ನು ನಿಮ್ಮ ಮುಂದೆ ತರಲೇಬೇಕಿತ್ತು ಅಂತನಿಸಿತು..!

ಜನಾರ್ಧನ ಪೂಜಾರಿ ದೇಶ ಕಂಡ ಭ್ರಷ್ಟಾಚಾರ ರಹಿತ ರಾಜಕಾರಣಿ ಎಂದು ನಾನು ಪುನಃ ಹೇಳುವ ಅಗತ್ಯವಿಲ್ಲವೆಂದು ಭಾವಿಸುತ್ತೇನೆ.ಅದು ಎಲ್ಲಾ ಪಕ್ಷದವರಿಗೂ ತಿಳಿದ ವಿಷಯವೇ ಆಗಿದೆ.

ಬಡ ಜನರು ಬ್ಯಾಂಕಿನ ಒಂದಿಷ್ಟು ಜ್ಞಾನವನ್ನು , ಸಾಲವನ್ನು ಎಲ್ಲರಿಗೂ ಕೊಡುವಂತೆ ಮಾಡಿದ್ದೇ ಈ ಜನಾರ್ಧನ ಪೂಜಾರಿಯವರು..!!

ಅಂದಿನ ಸರಕಾರದಲ್ಲಿ ಕೇಂದ್ರದ ಸಚಿವನಾಗಿ ಅನೇಕ ಜವಾಬ್ದಾರಿಗಳನ್ನು ಜವಾಬ್ದಾರಿಯುತವಾಗಿ ನಿಭಾಯಿಸಿ,ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸ್ಥಾನವನ್ನು ಪ್ರೀತಿಯಿಂದ ತಿರಸ್ಕರಿಸಿದ ವ್ಯಕ್ತಿ ಇವರು..!

ಈಗಿನ ರಾಜಕೀಯದಲ್ಲಿ ಪಂಚಾಯತಿನ ಸದಸ್ಯನಾದವನು ಕೂಡ ಮಹಡಿಯ ಮೇಲೆ ಇನ್ನೊಂದು ಮನೆ ಮಾಡುವ ತನಕ ದುಡಿಯುವ ಕಾಯಕ ಯೋಗಿಗಳು ನಮ್ಮ ಮುಂದೆ ಇದ್ದಾರೆ,ಅಲ್ಲವೇ..!? ಆದರೆ ಪೂಜಾರಿಯವರು…!??

ದಶಕಗಳ ಕಾಲ ರಾಜಕೀಯದಲ್ಲಿ ಅಭಿಶಕ್ತ ದೊರೆಯಾಗಿ ವಿಜೃಂಭಿಸಿದವರು,ಇಂದು ಅವರ ಕೈಯಲ್ಲಿ ಇರೋದು ಹಳೆಯ ಮನೆ ಮಾತ್ರ..! ಬಂದ ಗೌರವ ಧನ ಯಾವುದೋ ಅನಾಥಾಶ್ರಮ,ಬಡವರ ಮನೆಯ ದಾರಿಯನ್ನು ಕೇಳಿಕೊಂಡು ಸಾಗುತ್ತಿದೆ.!

ಇವರ ಬಗ್ಗೆ ತುಂಬಾ ಬರೆಯಬೇಕೆನ್ನಿಲ್ಲ..! ಯಾಕೆಂದರೆ ಎಲ್ಲಾ ರಾಜಕೀಯ ಪ್ರಮುಖರಿಗೆ ಇಂದು ಇವರ ಕುರಿತು ಒಂದು ಗೌರವಯುತ ಗೌರವ ಇದ್ದೆ ಇದೇ ಎಂದೇ ಹೇಳಬಹುದು.! ಚುನಾವಣೆ ಬಂದಾಗ ಇವರ ಆಶೀರ್ವಾದದ ಅಭಯಕ್ಕಾದರು ಮನೆಯ ಕಡೆ ದಾರಿಯನ್ನು ನೋಡುತ್ತಾರೆ..!

ಇಂದಿನ ರಾಜಕೀಯದಲ್ಲಿ ಪೂಜಾರಿಯವರಿಗೆ ಸರಿ ಸಮಾನವಾಗಿ ನಿಲ್ಲುವ ರಾಜಕಾರಣಿ ಹುಡುಕಿದರೂ ಸಿಗಲಾರರು.!

“ಇರಲಿ ಬಿಡಿ ವಿಷಯಕ್ಕೆ ಬರೋಣ..”

ಜನಾರ್ಧನ ಪೂಜಾರಿ ಎಂಬ ಸಹೃದಯಿ ಮನಸ್ಸಿಗೆ ಗೌರವಯುತ ವಿದಾಯದ ವೇದಿಕೆಯನ್ನು ನಿರ್ಮಿಸುವ ಜವಾಬ್ದಾರಿ ನಮ್ಮ ಮೇಲಿದೆ.!
ಇದು ಕರಾವಳಿಯ ಮೇಲೆ ಬೆಟ್ಟದಷ್ಟಿದೆ..!
ಮಂಗಳೂರಿನ ಒಂದು ದೊಡ್ಡ ವೇದಿಕೆಯಲ್ಲಿ ಜನಾರ್ಧನ ಪೂಜಾರಿರವರಿಗೆ,ಕರಾವಳಿಯ ಎಲ್ಲಾ ರಾಜಕೀಯ ಪಕ್ಷದ ನಾಯಕರು,ಜಾತಿ-ಭೇದವನ್ನು ಮೀರಿ ಅದರಲ್ಲೂ ಧರ್ಮ, ಜಾತಿ ಎಂಬ ಅನ್ವರ್ಥ ನಾಮವನ್ನು ಬದಿಗೊತ್ತಿ ಗೌರವಿಸಬೇಕು,ಈ ಸಂಭ್ರಮದಲ್ಲಿ ಎಲ್ಲರೂ ಭಾಗಿಯಾಗಬೇಕು.

ಕರಾವಳಿಯಲ್ಲಿ ಧರ್ಮ ಧರ್ಮದ ನಡುವೆ ಆಳವಾದ ಕಂದಕವೇ ನಿರ್ಮಾಣವಾಗಿದೆ.! ದಿನೇ ದಿನೇ ಅದು ಬಿಗಡಾಯಿಸುತ್ತಲೇ ಇದೆ. ಇದನ್ನು ಸ್ವಲ್ಪವಾದರೂ,ಒಂದು ದಿನಕ್ಕಾದರು ಪೂಜಾರಿಯವರ ಗೌರವಯುತ ವೇದಿಕೆಯ ನಡುವೆ ಸಹಬದಿಗೆ ತರೋಣ..!!

ಜನಾರ್ಧನ ಪೂಜಾರಿಯವರಿಗೆ ಅಂದು ನಡೆಯುವ ಅಭಿಮಾನದ ಬೃಹತ್ ಕಾರ್ಯಕ್ರಮಕ್ಕೆ ಮಂಗಳೂರಿಗೆ ಮಂಗಳೂರೇ ನವ ವಧುವಿನಂತೆ ಶೃಂಗಾರಗೊಳ್ಳಬೇಕು.!
ಕರಾವಳಿ ಇಂತಹ ಕಾರ್ಯಕ್ರಮವನ್ನು ಇಷ್ಟರವರೆಗೆ ನೋಡಿರಲು ಸಾಧ್ಯವಿರಬಾರದು.ಅಂತಹ ಕಾರ್ಯ ಯೋಜನೆ ಸಿದ್ಧವಾಗಬೇಕು.ಜಾತಿ,ಮತ, ಧರ್ಮ ಮತ್ತು ಪಕ್ಷವನ್ನು ಬದಿಗೆ ಸರಿಸಿ ಸಾಮಾನ್ಯ ವ್ಯಕ್ತಿಯಾಗಿ ಆ ಸಂಭ್ರಮದಲ್ಲಿ ಭಾಗಿಯಾಗಬೇಕು. ಕಾರ್ಯಕ್ರಮದಲ್ಲಿ “ಪೂಜಾರಿಯವರೇ ಕೇಂದ್ರ ಬಿಂದು”ಆಗಿದ್ದು,ರಾಜ್ಯದ ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಮತ್ತು ಕೇಂದ್ರದ ಉನ್ನತ ಸಚಿವರು ಭಾಗಿಯಾಗಬೇಕು.ಅದರ ಜೊತೆಗೆ 100 ಸಾಧಕರಿಗೆ ವಿಶೇಷ ಸನ್ಮಾನವನ್ನು ಏರ್ಪಡಿಸಬೇಕು.ಬಡತನದಿಂದ ಮೇಲೆದ್ದು ಬಂದ ಸಾಧಕರಾಗಿರಬೇಕು.

ಕಾರ್ಯಕ್ರಮದ ಪೂರ್ಣ ಜವಾಬ್ದಾರಿಯನ್ನು ” ಬಿಲ್ಲವ ಸಂಘಟನೆಗಳು” ಹೊರಬೇಕು.(ಇದು ಬಿಲ್ಲವ ಸಂಘಟನೆಗಳ ಅಸ್ಥಿತ್ವದ ಪ್ರಶ್ನೆ.) ಬಿಲ್ಲವ ಸಂಘಟನೆಗಳೇ ಹೊರಲೇಬೇಕು..!! ಅಷ್ಟೇ..
ನಿಮ್ಮ ಜೊತೆ ಎಲ್ಲಾ ಸಂಘಟನೆಗಳನ್ನು ಜೊತೆ ಸೇರಿಸಿಕೊಂಡು ಸಾಗಬೇಕು.(ದೇಶ ವಿದೇಶದಲ್ಲಿರುವ ಸಾವಿರಾರು ಸಂಘಟನೆಗಳು ಬಿಲ್ಲವರಲ್ಲಿ ಇದೆ.)

ಒಂದು ರಾಜಕೀಯ ರಹಿತ ಉತ್ತಮ ವ್ಯಕ್ತಿ ಇದರ ಮೇಲ್ವಿಚಾರಣೆಯನ್ನು ನಡೆಸಬೇಕು.

ಕರಾವಳಿ ಒಮ್ಮತ ನೀಡುವುದರಲ್ಲಿ ಸಂದೇಹವಿಲ್ಲ ..!! ಒಂದು ಉತ್ತಮ ದಿನವನ್ನು ಆಯ್ಕೆ ಮಾಡಿ ಮುಂದಿನ ದಿನಗಳಲ್ಲಿ ಕಾರ್ಯ ಪ್ರವೃತ್ತರಾಗುವುದು ಒಳ್ಳೆಯದು.. ಆದಷ್ಟು ಬೇಗ..!!

ಮುಂದೊಂದು ದಿನ ಕಣ್ಣೀರಿನ ದಾರಿಯಲ್ಲಿ ನೆನೆಯುವುದು ಬೇಡ.. ಅಲ್ಲವೇ…

wwww.billavaswarriors.com

✍️ ವಿಜೇತ್ ಪೂಜಾರಿ ಶಿಬಾಜೆ


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »