TOP STORIES:

ಕಂಚಿನ ಕಂಠದ ತುಳು ನಿರೂಪಕ, ತುಳುನಾಡ ಸ್ವರ ತುಡರ್, ತುಳು ಭಾಷೆಯ ಅಭಿಮಾನಿ; ಸಚೇಂದ್ರ ಅಂಬಾಗಿಲು


ಯಾವುದೇ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಮುಖ್ಯ ಕಾರಣ ನಿರೂಪಣೆ, ಹೀಗೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಂಚಿನ ಕಂಠದ ತುಳು ನಿರೂಪಕ ಉಡುಪಿ ಅಂಬಾಗಿಲಿನ ಸಚೇಂದ್ರ ಅಂಬಾಗಿಲು ರಮೇಶ್ ಸಾಲಿಯಾನ್ ಮತ್ತು ಶ್ರೀಮತಿ ಲೀಲಾ ದಂಪತಿಗಳ ಪ್ರೀತಿಯ ಮಗ, ಸಣ್ಣ ಪ್ರಾಯದಲ್ಲಿಯೇ ತುಳು ಭಾಷೆಯಲ್ಲಿ ಎಲ್ಲಿ ಇಲ್ಲದ ಅಭಿಮಾನ.

ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಗಿಸಿದ ಇವರು ಐಟಿಐ ಟ್ರಿನಿಟಿ ಕಾಲೇಜ್ ಉದ್ಯಾವರ ಇಲ್ಲಿ ಎಮ್. ಆರ್. ಎ. ಸಿ ಮುಗಿಸಿ ನಂತರ ಕದ್ರಿ ಹಿಲ್ಸ್ ಐ.ಟಿ. ಐ ಮಂಗಳೂರ ಮತ್ತು ಎನ್. ಎ. ಸಿ ಯನ್ನು ಕೆ. ಎಮ್. ಎಫ್ ನಲ್ಲಿ ಮುಗಿಸಿದ ಇವರು ಪ್ರಸ್ತುತ ಟ್ರಿನಿಟಿ ಐ.ಟಿ.ಐ ಕಾಲೇಜ್ ಉದ್ಯಾವರದಲ್ಲಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರು ಶ್ರೀ ಜನತಾ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಅಂಬಾಗಿಲು ಶ್ರೀ ವೀರಾಂಜನೇಯ ಗುಡಿ ಸಮಿತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಹಾಗೆಯೇ ಎ. ಆರ್ ಫ್ರೆಂಡ್ ಅಂಬಾಗಿಲು 10 ವರ್ಷದಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಉಡುಪಿ, ಮಂಗಳೂರು, ಚಿಕ್ಕಮಂಗಳೂರ, ಶಿವಮೊಗ್ಗ ಹೀಗೆಯೇ ವಿವಿಧ ಕಡೆಗಳಲ್ಲಿ ತಮ್ಮ ನಿರೂಪಣೆಯ ಸೊಗಡುನ್ನು ತೋರಿಸಿದ್ದಾರೆ. ತುಳುಭಾಷೆಯ ಮೇಲೆ ಇದ್ದ ಅಭಿಮಾನಕ್ಕೆ ಮತ್ತು ವಾಕ್ ಚಾತುರ್ಯಕ್ಕೆ ಶ್ರೀ ಕ್ಷೇತ್ರ ಕಾಣಿಯೂರ್ ಸ್ವಾಮಿ ಇವರಿಗೆ ತುಳುನಾಡ ಸ್ವರ ತುಡರ್ ಎನ್ನುವ ಬಿರುದನ್ನು ನೀಡಿದ್ದಾರೆ. ಮಕ್ಕಿ ಮನೆ ಕಲಾವೃಂದ ಸಂಭ್ರಮ 2019ರಲ್ಲಿ ಗೌರವ ಪುರಸ್ಕಾರ ನೀಡಿ ಗೌರವಿಸಿತ್ತು ಮತ್ತು ಹಳೆ ವಿದ್ಯಾರ್ಥಿಗಳ ಸಂಘ ನಿಟ್ಟೂರ್ ಇಲ್ಲಿಯೂ ಅಭಿನಂದನ ಪತ್ರ ನೀಡಿ ಗೌರವಿಸಿದರು.

ತುಳುಭಾಷೆಯ ಸಂಸ್ಕೃತಿಯನ್ನು ತಮ್ಮ ನಿರೂಪಣೆಯಲ್ಲಿ ಬಿತ್ತರಿಸಿದ ಇವರ ಮೊದಲು ವೀರಾಂಜನೇಯ_ಗುಡಿ ಅಂಬಾಗಿಲುಯಲ್ಲಿ ಹನುಮಾನ್ ಜಯಂತಿ ದಿನ ತುಳು ವಾಕ್ ಚಾತುರ್ಯಕ್ಕೆ ಎಲ್ಲರ ಮನ ಗೆದ್ದ ಇವರು ತನ್ನದೇ ಅಭಿಮಾನಿ ಬಳಗ ಹೊಂದಿದ್ದಾರೆ.

ಕುಡ್ಲ ಚಾನಲ್ ಕಂಬಳ ಹೀಗೆ ಅನೇಕ ಸಾಂಸ್ಕ್ರಿತಿಕ ಕಾರ್ಯಕ್ರಮದಲ್ಲಿ ತನ್ನ ಮಾತಿನ ಚತುರತೆಯನ್ನು ತೋರಿಸಿದ್ದಾರೆ. ಹೀಗೆ ನಿರೂಪಣೆ ಅಲ್ಲದೆ ತಾಲೀಮ್ ನಲ್ಲಿ ತನ್ನ ಪ್ರತಿಭೆ ಯನ್ನು ತೋರಿಸಿ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ 5ವರ್ಷ ದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ತುಳು ಭಾಷೆ, ಸಂಸ್ಕೃತಿಯನ್ನು ಜನರ ಮನಮುಟ್ಟುವಂತೆ ಮಾಡಿದ ಇವರು ಅನೇಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಇವರಿಗೆ ಇನ್ನಷ್ಟು ಅವಕಾಶಗಳು ಒದಗಿ ಬರಲಿ
ನಿರೂಪಣೆ ಇವರಿಗೆ ಇನ್ನಷ್ಟು ಹೆಸರು ತರಲಿ ತುಳು ಭಾಷೆ ಸಂಸ್ಕೃತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ತುಳುನಾಡ ದೈವ ದೇವರುಗಳ ಆಶೀರ್ವಾದ ಸದಾ ಇರಲಿ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುವ.

By: ಪ್ರಶಾಂತ್ ಅಂಚನ್ ಮಸ್ಕತ್ತ್

Email us: billavaswarriors@gmail.com

 


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »