TOP STORIES:

ಕಂಚಿನ ಕಂಠದ ತುಳು ನಿರೂಪಕ, ತುಳುನಾಡ ಸ್ವರ ತುಡರ್, ತುಳು ಭಾಷೆಯ ಅಭಿಮಾನಿ; ಸಚೇಂದ್ರ ಅಂಬಾಗಿಲು


ಯಾವುದೇ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಮುಖ್ಯ ಕಾರಣ ನಿರೂಪಣೆ, ಹೀಗೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಂಚಿನ ಕಂಠದ ತುಳು ನಿರೂಪಕ ಉಡುಪಿ ಅಂಬಾಗಿಲಿನ ಸಚೇಂದ್ರ ಅಂಬಾಗಿಲು ರಮೇಶ್ ಸಾಲಿಯಾನ್ ಮತ್ತು ಶ್ರೀಮತಿ ಲೀಲಾ ದಂಪತಿಗಳ ಪ್ರೀತಿಯ ಮಗ, ಸಣ್ಣ ಪ್ರಾಯದಲ್ಲಿಯೇ ತುಳು ಭಾಷೆಯಲ್ಲಿ ಎಲ್ಲಿ ಇಲ್ಲದ ಅಭಿಮಾನ.

ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಗಿಸಿದ ಇವರು ಐಟಿಐ ಟ್ರಿನಿಟಿ ಕಾಲೇಜ್ ಉದ್ಯಾವರ ಇಲ್ಲಿ ಎಮ್. ಆರ್. ಎ. ಸಿ ಮುಗಿಸಿ ನಂತರ ಕದ್ರಿ ಹಿಲ್ಸ್ ಐ.ಟಿ. ಐ ಮಂಗಳೂರ ಮತ್ತು ಎನ್. ಎ. ಸಿ ಯನ್ನು ಕೆ. ಎಮ್. ಎಫ್ ನಲ್ಲಿ ಮುಗಿಸಿದ ಇವರು ಪ್ರಸ್ತುತ ಟ್ರಿನಿಟಿ ಐ.ಟಿ.ಐ ಕಾಲೇಜ್ ಉದ್ಯಾವರದಲ್ಲಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರು ಶ್ರೀ ಜನತಾ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಅಂಬಾಗಿಲು ಶ್ರೀ ವೀರಾಂಜನೇಯ ಗುಡಿ ಸಮಿತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಹಾಗೆಯೇ ಎ. ಆರ್ ಫ್ರೆಂಡ್ ಅಂಬಾಗಿಲು 10 ವರ್ಷದಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಉಡುಪಿ, ಮಂಗಳೂರು, ಚಿಕ್ಕಮಂಗಳೂರ, ಶಿವಮೊಗ್ಗ ಹೀಗೆಯೇ ವಿವಿಧ ಕಡೆಗಳಲ್ಲಿ ತಮ್ಮ ನಿರೂಪಣೆಯ ಸೊಗಡುನ್ನು ತೋರಿಸಿದ್ದಾರೆ. ತುಳುಭಾಷೆಯ ಮೇಲೆ ಇದ್ದ ಅಭಿಮಾನಕ್ಕೆ ಮತ್ತು ವಾಕ್ ಚಾತುರ್ಯಕ್ಕೆ ಶ್ರೀ ಕ್ಷೇತ್ರ ಕಾಣಿಯೂರ್ ಸ್ವಾಮಿ ಇವರಿಗೆ ತುಳುನಾಡ ಸ್ವರ ತುಡರ್ ಎನ್ನುವ ಬಿರುದನ್ನು ನೀಡಿದ್ದಾರೆ. ಮಕ್ಕಿ ಮನೆ ಕಲಾವೃಂದ ಸಂಭ್ರಮ 2019ರಲ್ಲಿ ಗೌರವ ಪುರಸ್ಕಾರ ನೀಡಿ ಗೌರವಿಸಿತ್ತು ಮತ್ತು ಹಳೆ ವಿದ್ಯಾರ್ಥಿಗಳ ಸಂಘ ನಿಟ್ಟೂರ್ ಇಲ್ಲಿಯೂ ಅಭಿನಂದನ ಪತ್ರ ನೀಡಿ ಗೌರವಿಸಿದರು.

ತುಳುಭಾಷೆಯ ಸಂಸ್ಕೃತಿಯನ್ನು ತಮ್ಮ ನಿರೂಪಣೆಯಲ್ಲಿ ಬಿತ್ತರಿಸಿದ ಇವರ ಮೊದಲು ವೀರಾಂಜನೇಯ_ಗುಡಿ ಅಂಬಾಗಿಲುಯಲ್ಲಿ ಹನುಮಾನ್ ಜಯಂತಿ ದಿನ ತುಳು ವಾಕ್ ಚಾತುರ್ಯಕ್ಕೆ ಎಲ್ಲರ ಮನ ಗೆದ್ದ ಇವರು ತನ್ನದೇ ಅಭಿಮಾನಿ ಬಳಗ ಹೊಂದಿದ್ದಾರೆ.

ಕುಡ್ಲ ಚಾನಲ್ ಕಂಬಳ ಹೀಗೆ ಅನೇಕ ಸಾಂಸ್ಕ್ರಿತಿಕ ಕಾರ್ಯಕ್ರಮದಲ್ಲಿ ತನ್ನ ಮಾತಿನ ಚತುರತೆಯನ್ನು ತೋರಿಸಿದ್ದಾರೆ. ಹೀಗೆ ನಿರೂಪಣೆ ಅಲ್ಲದೆ ತಾಲೀಮ್ ನಲ್ಲಿ ತನ್ನ ಪ್ರತಿಭೆ ಯನ್ನು ತೋರಿಸಿ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ 5ವರ್ಷ ದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ತುಳು ಭಾಷೆ, ಸಂಸ್ಕೃತಿಯನ್ನು ಜನರ ಮನಮುಟ್ಟುವಂತೆ ಮಾಡಿದ ಇವರು ಅನೇಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಇವರಿಗೆ ಇನ್ನಷ್ಟು ಅವಕಾಶಗಳು ಒದಗಿ ಬರಲಿ
ನಿರೂಪಣೆ ಇವರಿಗೆ ಇನ್ನಷ್ಟು ಹೆಸರು ತರಲಿ ತುಳು ಭಾಷೆ ಸಂಸ್ಕೃತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ತುಳುನಾಡ ದೈವ ದೇವರುಗಳ ಆಶೀರ್ವಾದ ಸದಾ ಇರಲಿ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುವ.

By: ಪ್ರಶಾಂತ್ ಅಂಚನ್ ಮಸ್ಕತ್ತ್

Email us: billavaswarriors@gmail.com

 


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »