TOP STORIES:

ಕಂಚಿನ ಕಂಠದ ತುಳು ನಿರೂಪಕ, ತುಳುನಾಡ ಸ್ವರ ತುಡರ್, ತುಳು ಭಾಷೆಯ ಅಭಿಮಾನಿ; ಸಚೇಂದ್ರ ಅಂಬಾಗಿಲು


ಯಾವುದೇ ಕಾರ್ಯಕ್ರಮ ಚೆನ್ನಾಗಿ ಮೂಡಿಬರಲು ಮುಖ್ಯ ಕಾರಣ ನಿರೂಪಣೆ, ಹೀಗೆ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಕಂಚಿನ ಕಂಠದ ತುಳು ನಿರೂಪಕ ಉಡುಪಿ ಅಂಬಾಗಿಲಿನ ಸಚೇಂದ್ರ ಅಂಬಾಗಿಲು ರಮೇಶ್ ಸಾಲಿಯಾನ್ ಮತ್ತು ಶ್ರೀಮತಿ ಲೀಲಾ ದಂಪತಿಗಳ ಪ್ರೀತಿಯ ಮಗ, ಸಣ್ಣ ಪ್ರಾಯದಲ್ಲಿಯೇ ತುಳು ಭಾಷೆಯಲ್ಲಿ ಎಲ್ಲಿ ಇಲ್ಲದ ಅಭಿಮಾನ.

ಪ್ರಾಥಮಿಕ ಶಿಕ್ಷಣವನ್ನು ಆದಿ ಉಡುಪಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಗಿಸಿದ ಇವರು ಐಟಿಐ ಟ್ರಿನಿಟಿ ಕಾಲೇಜ್ ಉದ್ಯಾವರ ಇಲ್ಲಿ ಎಮ್. ಆರ್. ಎ. ಸಿ ಮುಗಿಸಿ ನಂತರ ಕದ್ರಿ ಹಿಲ್ಸ್ ಐ.ಟಿ. ಐ ಮಂಗಳೂರ ಮತ್ತು ಎನ್. ಎ. ಸಿ ಯನ್ನು ಕೆ. ಎಮ್. ಎಫ್ ನಲ್ಲಿ ಮುಗಿಸಿದ ಇವರು ಪ್ರಸ್ತುತ ಟ್ರಿನಿಟಿ ಐ.ಟಿ.ಐ ಕಾಲೇಜ್ ಉದ್ಯಾವರದಲ್ಲಿ ಉಪನ್ಯಾಸಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಇವರು ಶ್ರೀ ಜನತಾ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಅಂಬಾಗಿಲು ಶ್ರೀ ವೀರಾಂಜನೇಯ ಗುಡಿ ಸಮಿತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಹಾಗೆಯೇ ಎ. ಆರ್ ಫ್ರೆಂಡ್ ಅಂಬಾಗಿಲು 10 ವರ್ಷದಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಉಡುಪಿ, ಮಂಗಳೂರು, ಚಿಕ್ಕಮಂಗಳೂರ, ಶಿವಮೊಗ್ಗ ಹೀಗೆಯೇ ವಿವಿಧ ಕಡೆಗಳಲ್ಲಿ ತಮ್ಮ ನಿರೂಪಣೆಯ ಸೊಗಡುನ್ನು ತೋರಿಸಿದ್ದಾರೆ. ತುಳುಭಾಷೆಯ ಮೇಲೆ ಇದ್ದ ಅಭಿಮಾನಕ್ಕೆ ಮತ್ತು ವಾಕ್ ಚಾತುರ್ಯಕ್ಕೆ ಶ್ರೀ ಕ್ಷೇತ್ರ ಕಾಣಿಯೂರ್ ಸ್ವಾಮಿ ಇವರಿಗೆ ತುಳುನಾಡ ಸ್ವರ ತುಡರ್ ಎನ್ನುವ ಬಿರುದನ್ನು ನೀಡಿದ್ದಾರೆ. ಮಕ್ಕಿ ಮನೆ ಕಲಾವೃಂದ ಸಂಭ್ರಮ 2019ರಲ್ಲಿ ಗೌರವ ಪುರಸ್ಕಾರ ನೀಡಿ ಗೌರವಿಸಿತ್ತು ಮತ್ತು ಹಳೆ ವಿದ್ಯಾರ್ಥಿಗಳ ಸಂಘ ನಿಟ್ಟೂರ್ ಇಲ್ಲಿಯೂ ಅಭಿನಂದನ ಪತ್ರ ನೀಡಿ ಗೌರವಿಸಿದರು.

ತುಳುಭಾಷೆಯ ಸಂಸ್ಕೃತಿಯನ್ನು ತಮ್ಮ ನಿರೂಪಣೆಯಲ್ಲಿ ಬಿತ್ತರಿಸಿದ ಇವರ ಮೊದಲು ವೀರಾಂಜನೇಯ_ಗುಡಿ ಅಂಬಾಗಿಲುಯಲ್ಲಿ ಹನುಮಾನ್ ಜಯಂತಿ ದಿನ ತುಳು ವಾಕ್ ಚಾತುರ್ಯಕ್ಕೆ ಎಲ್ಲರ ಮನ ಗೆದ್ದ ಇವರು ತನ್ನದೇ ಅಭಿಮಾನಿ ಬಳಗ ಹೊಂದಿದ್ದಾರೆ.

ಕುಡ್ಲ ಚಾನಲ್ ಕಂಬಳ ಹೀಗೆ ಅನೇಕ ಸಾಂಸ್ಕ್ರಿತಿಕ ಕಾರ್ಯಕ್ರಮದಲ್ಲಿ ತನ್ನ ಮಾತಿನ ಚತುರತೆಯನ್ನು ತೋರಿಸಿದ್ದಾರೆ. ಹೀಗೆ ನಿರೂಪಣೆ ಅಲ್ಲದೆ ತಾಲೀಮ್ ನಲ್ಲಿ ತನ್ನ ಪ್ರತಿಭೆ ಯನ್ನು ತೋರಿಸಿ ವ್ಯಾಯಾಮ ಶಾಲೆ ಅಂಬಾಗಿಲು ಇಲ್ಲಿ 5ವರ್ಷ ದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ತುಳು ಭಾಷೆ, ಸಂಸ್ಕೃತಿಯನ್ನು ಜನರ ಮನಮುಟ್ಟುವಂತೆ ಮಾಡಿದ ಇವರು ಅನೇಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಇವರಿಗೆ ಇನ್ನಷ್ಟು ಅವಕಾಶಗಳು ಒದಗಿ ಬರಲಿ
ನಿರೂಪಣೆ ಇವರಿಗೆ ಇನ್ನಷ್ಟು ಹೆಸರು ತರಲಿ ತುಳು ಭಾಷೆ ಸಂಸ್ಕೃತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ, ತುಳುನಾಡ ದೈವ ದೇವರುಗಳ ಆಶೀರ್ವಾದ ಸದಾ ಇರಲಿ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುವ.

By: ಪ್ರಶಾಂತ್ ಅಂಚನ್ ಮಸ್ಕತ್ತ್

Email us: billavaswarriors@gmail.com

 


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »