TOP STORIES:

FOLLOW US

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?


ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ.

ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದತಾಟೆಎಂಬ ಕಂಬಳ ಕೋಣದ ಯಶಸ್ಸಿನನಾಗಲೋಟವೂ ಮುಂದುವರಿದಿದೆ. ಕಳೆದ ಎರಡು ಕಂಬಳದಲ್ಲೂ ಅಡ್ಡಹಲಗೆ ವಿಭಾಗದಲ್ಲಿತಾಟೆಕೋಣ ಪ್ರಥಮಸ್ಥಾನವನ್ನು ಪಡೆದಿದೆ.

ಕ್ರಿಕೆಟ್ ಲೋಕದ ದಿ ಬೆಸ್ಟ್ ಫಿನಿಷರ್ ಮಹೇಂದ್ರ ಸಿಂಗ್ ಧೋನಿಯಾದರೆ ಕಂಬಳ ಕ್ಷೇತ್ರದ ದಿ ಬೆಸ್ಟ್ ಫಿನೀಶರ್ ತಾಟೆಕೋಣ ಎನ್ನುವುದು ಕಂಬಳ ಕೂಟದ ಲಕ್ಷಾಂತರ ಮಂದಿ ಕಂಬಳ ಕೂಟದ ಅಭಿಮಾನಿಗಳ ಮಾತಾಗಿದೆ.


ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಮಾರಾಟವಾಗಿದ್ದ ತಾಟೆ

ಕೊನೆಯ ಹತ್ತು ಮೀಟರ್ ದೂರದಲ್ಲಿ ಗಾಳಿಯನ್ನು ಸೀಳಿ ಮುನ್ನುಗ್ಗುವ ತಾಟೆ ಎಲ್ಲರ ಹುಬ್ಬೇರಿಸುವಂತೆ ವಿಜಯದ ಗುರಿತಲುಪುತ್ತದೆ. ಇದೇ ಮಾದರಿಯಲ್ಲಿ ನೂರಾರು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಕಂಬಳ ಕ್ಷೇತ್ರಕ್ಕೆ ಹಗ್ಗ ಕಿರಿಯವಿಭಾಗದಲ್ಲಿ ಕಾಲಿಟ್ಟ ತಾಟೆ ಬಳಿಕ ಹಿಂದೆ ತಿರುಗಿ ನೋಡಲೇ ಇಲ್ಲ. ಹಗ್ಗ ಕಿರಿಯ ವಿಭಾಗದಲ್ಲಿ ನೂರಾರು ಪದಕಗಳನ್ನುಸಂಪಾದಿಸಿದ ಬಳಿಕ ನೇಗಿಲು ಹಿರಿಯ ವಿಭಾಗಕ್ಕೆ ಕಾಲಿಟ್ಟಾಗ ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಕಂಬಳದ ಪ್ರಸಿದ್ಧಕೋಣಗಳ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿಯವರ ಮಡಿಲು ಸೇರಿದೆ. ಇಷ್ಟು ದೊಡ್ಡ ಮೊತ್ತದಲ್ಲಿ ಕೋಣಮಾರಾಟವಾಗಿದ್ದು ಕಂಬಳ ಕ್ಷೇತ್ರದಲ್ಲೇ ಭಾರಿ ಸಂಚಲನ ಮೂಡಿಸಿತ್ತು.

ಕಂಬಳದಲ್ಲಿ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಮೋಡಿ

ಇರುವೈಲುಗೆ ಬಂದ ಬಳಿಕ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಕಂಬಳ ಪ್ರೇಮಿಗಳನ್ನು ಮೋಡಿ ಮಾಡಿದೆ. ಹಲವುವರ್ಷಗಳ ಕಾಲ ಕೋಣಗಳ ಜೋಡಿ ಕಂಬಳ ಕೂಟದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿದೆ. 2019ರಲ್ಲಿ ಮಂಗಳೂರಿನಐಕಳದಲ್ಲಿ ನಡೆದ ಕಾಂತಾಭಾರೆ ಬೂಧಭಾರೆ ಜೋಡುಕರೆ ಕಂಬಳಕೂಟದಲ್ಲಿ ಕಂಬಳ ಇತಿಹಾಸದ ಅತೀ ವೇಗದ ಓಟ ಓಡಿದಖ್ಯಾತ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರ ಅಂದಿನ ಸಾಧನೆಗೆ ಕಾರಣ ಇದೇ ತಾಟೆ ಎನ್ನುವುದು ಕೂಡವಿಶೇಷವಾಗಿದೆ.

ತಾಟೆಯ ಓಟವನ್ನು ನೋಡಲೆಂದೇ ಕಂಬಳಕ್ಕೆ ಜನ ಸಾಗರ

ಕಂಬಳ ಕೂಟದಲ್ಲಿ ಎಲ್ಲರ ಕಣ್ಮನ ಸೆಳೆಯುವ ತಾಟೆ ಕೋಣ ಓಡುವ ರೀತಿಯೇ ಬಹಳ ವಿಶಿಷ್ಠವಾಗಿದೆ. ತಲೆ ಎತ್ತಿ ಓಡುವತಾಟೆ ವಿಜಯದ ಗುರಿಗೆ ಹಾರಿ ರೇಸ್‌ ಅನ್ನು ಅಂತಿಮ ಮಾಡುವುದೇ ವಿಶೇಷವಾಗಿದೆ. ಇಂದಿಗೂ ಜನ ಕಂಬಳಕ್ಕೆ ತಾಟೆಯಓಟವನ್ನು ನೋಡಲೆಂದೇ ಬರುವುದು. ಸದ್ಯ ನಾರಾವಿ ಯುವರಾಜ ಜೈನ್ ಅವರ ಯಜಮಾನಿಕೆಯ ತಂಡದಲ್ಲಿರುವ ತಾಟೆ, ಅಡ್ಡ ಹಲಗೆ ವಿಭಾಗದಲ್ಲಿ ಎರಡೂ ಕಂಬಳ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ಯಜಮಾನನ ನಂಬಿಕೆ ಉಳಿಸಿದೆ.

ತಾಟೆ ಓಟ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಒಟ್ಟಿನಲ್ಲಿ ಕರಾವಳಿಯಲ್ಲಿ ಕಂಬಳ ರಂಗು ಹೆಚ್ಚಾಗಿದೆ. ಓಟಗಾರನ ಪ್ರಸಿದ್ಧಿಗೆ ಓಡುವ ಕೋಣದ ಪ್ರಸಿದ್ಧಿಯೇಜಗದಗಲವಾಗಿದ್ದು ಕಂಬಳದ ಮೇಲಿರುವ ಜನರ ಪ್ರೀತಿಗೆ ಸಾಕ್ಷಿಯಾಗಿದೆ. ತಾಟೆಯ ಓಟದ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ, ರೀಲ್ಸ್‌ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಚಿಗರೆಯ ಓಟದ ತಾಟೆಯನ್ನು ಅಭಿಮಾನಿಗಳು ಪ್ರೀತಿಯಿಂದಕಿಂಗ್ ತಾಟೆ ಎಂದು ಬಿರುದು ನೀಡಿ ಅಭಿಮಾನ ತೋರಿಸಿದ್ದಾರೆ.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »