TOP STORIES:

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?


ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ.

ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದತಾಟೆಎಂಬ ಕಂಬಳ ಕೋಣದ ಯಶಸ್ಸಿನನಾಗಲೋಟವೂ ಮುಂದುವರಿದಿದೆ. ಕಳೆದ ಎರಡು ಕಂಬಳದಲ್ಲೂ ಅಡ್ಡಹಲಗೆ ವಿಭಾಗದಲ್ಲಿತಾಟೆಕೋಣ ಪ್ರಥಮಸ್ಥಾನವನ್ನು ಪಡೆದಿದೆ.

ಕ್ರಿಕೆಟ್ ಲೋಕದ ದಿ ಬೆಸ್ಟ್ ಫಿನಿಷರ್ ಮಹೇಂದ್ರ ಸಿಂಗ್ ಧೋನಿಯಾದರೆ ಕಂಬಳ ಕ್ಷೇತ್ರದ ದಿ ಬೆಸ್ಟ್ ಫಿನೀಶರ್ ತಾಟೆಕೋಣ ಎನ್ನುವುದು ಕಂಬಳ ಕೂಟದ ಲಕ್ಷಾಂತರ ಮಂದಿ ಕಂಬಳ ಕೂಟದ ಅಭಿಮಾನಿಗಳ ಮಾತಾಗಿದೆ.


ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಮಾರಾಟವಾಗಿದ್ದ ತಾಟೆ

ಕೊನೆಯ ಹತ್ತು ಮೀಟರ್ ದೂರದಲ್ಲಿ ಗಾಳಿಯನ್ನು ಸೀಳಿ ಮುನ್ನುಗ್ಗುವ ತಾಟೆ ಎಲ್ಲರ ಹುಬ್ಬೇರಿಸುವಂತೆ ವಿಜಯದ ಗುರಿತಲುಪುತ್ತದೆ. ಇದೇ ಮಾದರಿಯಲ್ಲಿ ನೂರಾರು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಕಂಬಳ ಕ್ಷೇತ್ರಕ್ಕೆ ಹಗ್ಗ ಕಿರಿಯವಿಭಾಗದಲ್ಲಿ ಕಾಲಿಟ್ಟ ತಾಟೆ ಬಳಿಕ ಹಿಂದೆ ತಿರುಗಿ ನೋಡಲೇ ಇಲ್ಲ. ಹಗ್ಗ ಕಿರಿಯ ವಿಭಾಗದಲ್ಲಿ ನೂರಾರು ಪದಕಗಳನ್ನುಸಂಪಾದಿಸಿದ ಬಳಿಕ ನೇಗಿಲು ಹಿರಿಯ ವಿಭಾಗಕ್ಕೆ ಕಾಲಿಟ್ಟಾಗ ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಕಂಬಳದ ಪ್ರಸಿದ್ಧಕೋಣಗಳ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿಯವರ ಮಡಿಲು ಸೇರಿದೆ. ಇಷ್ಟು ದೊಡ್ಡ ಮೊತ್ತದಲ್ಲಿ ಕೋಣಮಾರಾಟವಾಗಿದ್ದು ಕಂಬಳ ಕ್ಷೇತ್ರದಲ್ಲೇ ಭಾರಿ ಸಂಚಲನ ಮೂಡಿಸಿತ್ತು.

ಕಂಬಳದಲ್ಲಿ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಮೋಡಿ

ಇರುವೈಲುಗೆ ಬಂದ ಬಳಿಕ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಕಂಬಳ ಪ್ರೇಮಿಗಳನ್ನು ಮೋಡಿ ಮಾಡಿದೆ. ಹಲವುವರ್ಷಗಳ ಕಾಲ ಕೋಣಗಳ ಜೋಡಿ ಕಂಬಳ ಕೂಟದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿದೆ. 2019ರಲ್ಲಿ ಮಂಗಳೂರಿನಐಕಳದಲ್ಲಿ ನಡೆದ ಕಾಂತಾಭಾರೆ ಬೂಧಭಾರೆ ಜೋಡುಕರೆ ಕಂಬಳಕೂಟದಲ್ಲಿ ಕಂಬಳ ಇತಿಹಾಸದ ಅತೀ ವೇಗದ ಓಟ ಓಡಿದಖ್ಯಾತ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರ ಅಂದಿನ ಸಾಧನೆಗೆ ಕಾರಣ ಇದೇ ತಾಟೆ ಎನ್ನುವುದು ಕೂಡವಿಶೇಷವಾಗಿದೆ.

ತಾಟೆಯ ಓಟವನ್ನು ನೋಡಲೆಂದೇ ಕಂಬಳಕ್ಕೆ ಜನ ಸಾಗರ

ಕಂಬಳ ಕೂಟದಲ್ಲಿ ಎಲ್ಲರ ಕಣ್ಮನ ಸೆಳೆಯುವ ತಾಟೆ ಕೋಣ ಓಡುವ ರೀತಿಯೇ ಬಹಳ ವಿಶಿಷ್ಠವಾಗಿದೆ. ತಲೆ ಎತ್ತಿ ಓಡುವತಾಟೆ ವಿಜಯದ ಗುರಿಗೆ ಹಾರಿ ರೇಸ್‌ ಅನ್ನು ಅಂತಿಮ ಮಾಡುವುದೇ ವಿಶೇಷವಾಗಿದೆ. ಇಂದಿಗೂ ಜನ ಕಂಬಳಕ್ಕೆ ತಾಟೆಯಓಟವನ್ನು ನೋಡಲೆಂದೇ ಬರುವುದು. ಸದ್ಯ ನಾರಾವಿ ಯುವರಾಜ ಜೈನ್ ಅವರ ಯಜಮಾನಿಕೆಯ ತಂಡದಲ್ಲಿರುವ ತಾಟೆ, ಅಡ್ಡ ಹಲಗೆ ವಿಭಾಗದಲ್ಲಿ ಎರಡೂ ಕಂಬಳ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ಯಜಮಾನನ ನಂಬಿಕೆ ಉಳಿಸಿದೆ.

ತಾಟೆ ಓಟ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಒಟ್ಟಿನಲ್ಲಿ ಕರಾವಳಿಯಲ್ಲಿ ಕಂಬಳ ರಂಗು ಹೆಚ್ಚಾಗಿದೆ. ಓಟಗಾರನ ಪ್ರಸಿದ್ಧಿಗೆ ಓಡುವ ಕೋಣದ ಪ್ರಸಿದ್ಧಿಯೇಜಗದಗಲವಾಗಿದ್ದು ಕಂಬಳದ ಮೇಲಿರುವ ಜನರ ಪ್ರೀತಿಗೆ ಸಾಕ್ಷಿಯಾಗಿದೆ. ತಾಟೆಯ ಓಟದ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ, ರೀಲ್ಸ್‌ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಚಿಗರೆಯ ಓಟದ ತಾಟೆಯನ್ನು ಅಭಿಮಾನಿಗಳು ಪ್ರೀತಿಯಿಂದಕಿಂಗ್ ತಾಟೆ ಎಂದು ಬಿರುದು ನೀಡಿ ಅಭಿಮಾನ ತೋರಿಸಿದ್ದಾರೆ.


Related Posts

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »