TOP STORIES:

FOLLOW US

ಕಂಬಳ ಲೋಕದ ಕಿಂಗ್‌ ‘ತಾಟೆ’: ₹ 8 ಲಕ್ಷಕ್ಕೂ ಅಧಿಕ ದರಕ್ಕೆ ಮಾರಾಟವಾಗಿದ್ದ ಕೋಣದ ಸಾಧನೆ ಏನು..?


ಮಂಗಳೂರು, ನವೆಂಬರ್‌ 6: ಕರಾವಳಿಯಲ್ಲಿ ಕಂಬಳ ಕಲರವ ಆರಂಭವಾಗಿದೆ. ಋತುವಿನ ಆರಂಭದ ಎರಡೂಕಂಬಳಗಳು ಭರ್ಜರಿ ಯಶಸ್ಸುಗಳಿಸಿದೆ.

ಜೊತೆಗೆ ಕಂಬಳ ಕ್ಷೇತ್ರದ ಅತೀ ವೇಗದ ಓಟದ ಕೋಣ ಎಂಬ ಬಿರುದು ಪಡೆದತಾಟೆಎಂಬ ಕಂಬಳ ಕೋಣದ ಯಶಸ್ಸಿನನಾಗಲೋಟವೂ ಮುಂದುವರಿದಿದೆ. ಕಳೆದ ಎರಡು ಕಂಬಳದಲ್ಲೂ ಅಡ್ಡಹಲಗೆ ವಿಭಾಗದಲ್ಲಿತಾಟೆಕೋಣ ಪ್ರಥಮಸ್ಥಾನವನ್ನು ಪಡೆದಿದೆ.

ಕ್ರಿಕೆಟ್ ಲೋಕದ ದಿ ಬೆಸ್ಟ್ ಫಿನಿಷರ್ ಮಹೇಂದ್ರ ಸಿಂಗ್ ಧೋನಿಯಾದರೆ ಕಂಬಳ ಕ್ಷೇತ್ರದ ದಿ ಬೆಸ್ಟ್ ಫಿನೀಶರ್ ತಾಟೆಕೋಣ ಎನ್ನುವುದು ಕಂಬಳ ಕೂಟದ ಲಕ್ಷಾಂತರ ಮಂದಿ ಕಂಬಳ ಕೂಟದ ಅಭಿಮಾನಿಗಳ ಮಾತಾಗಿದೆ.


ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಮಾರಾಟವಾಗಿದ್ದ ತಾಟೆ

ಕೊನೆಯ ಹತ್ತು ಮೀಟರ್ ದೂರದಲ್ಲಿ ಗಾಳಿಯನ್ನು ಸೀಳಿ ಮುನ್ನುಗ್ಗುವ ತಾಟೆ ಎಲ್ಲರ ಹುಬ್ಬೇರಿಸುವಂತೆ ವಿಜಯದ ಗುರಿತಲುಪುತ್ತದೆ. ಇದೇ ಮಾದರಿಯಲ್ಲಿ ನೂರಾರು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಕಂಬಳ ಕ್ಷೇತ್ರಕ್ಕೆ ಹಗ್ಗ ಕಿರಿಯವಿಭಾಗದಲ್ಲಿ ಕಾಲಿಟ್ಟ ತಾಟೆ ಬಳಿಕ ಹಿಂದೆ ತಿರುಗಿ ನೋಡಲೇ ಇಲ್ಲ. ಹಗ್ಗ ಕಿರಿಯ ವಿಭಾಗದಲ್ಲಿ ನೂರಾರು ಪದಕಗಳನ್ನುಸಂಪಾದಿಸಿದ ಬಳಿಕ ನೇಗಿಲು ಹಿರಿಯ ವಿಭಾಗಕ್ಕೆ ಕಾಲಿಟ್ಟಾಗ ಎಂಟೂ ಮುಕ್ಕಾಲು ಲಕ್ಷ ರೂಪಾಯಿಗೆ ಕಂಬಳದ ಪ್ರಸಿದ್ಧಕೋಣಗಳ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿಯವರ ಮಡಿಲು ಸೇರಿದೆ. ಇಷ್ಟು ದೊಡ್ಡ ಮೊತ್ತದಲ್ಲಿ ಕೋಣಮಾರಾಟವಾಗಿದ್ದು ಕಂಬಳ ಕ್ಷೇತ್ರದಲ್ಲೇ ಭಾರಿ ಸಂಚಲನ ಮೂಡಿಸಿತ್ತು.

ಕಂಬಳದಲ್ಲಿ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಮೋಡಿ

ಇರುವೈಲುಗೆ ಬಂದ ಬಳಿಕ ಬೊಟ್ಟಿಮಾರ್ ಮತ್ತು ತಾಟೆ ಕೋಣಗಳ ಜೋಡಿ ಕಂಬಳ ಪ್ರೇಮಿಗಳನ್ನು ಮೋಡಿ ಮಾಡಿದೆ. ಹಲವುವರ್ಷಗಳ ಕಾಲ ಕೋಣಗಳ ಜೋಡಿ ಕಂಬಳ ಕೂಟದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬಾಚಿದೆ. 2019ರಲ್ಲಿ ಮಂಗಳೂರಿನಐಕಳದಲ್ಲಿ ನಡೆದ ಕಾಂತಾಭಾರೆ ಬೂಧಭಾರೆ ಜೋಡುಕರೆ ಕಂಬಳಕೂಟದಲ್ಲಿ ಕಂಬಳ ಇತಿಹಾಸದ ಅತೀ ವೇಗದ ಓಟ ಓಡಿದಖ್ಯಾತ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡರ ಅಂದಿನ ಸಾಧನೆಗೆ ಕಾರಣ ಇದೇ ತಾಟೆ ಎನ್ನುವುದು ಕೂಡವಿಶೇಷವಾಗಿದೆ.

ತಾಟೆಯ ಓಟವನ್ನು ನೋಡಲೆಂದೇ ಕಂಬಳಕ್ಕೆ ಜನ ಸಾಗರ

ಕಂಬಳ ಕೂಟದಲ್ಲಿ ಎಲ್ಲರ ಕಣ್ಮನ ಸೆಳೆಯುವ ತಾಟೆ ಕೋಣ ಓಡುವ ರೀತಿಯೇ ಬಹಳ ವಿಶಿಷ್ಠವಾಗಿದೆ. ತಲೆ ಎತ್ತಿ ಓಡುವತಾಟೆ ವಿಜಯದ ಗುರಿಗೆ ಹಾರಿ ರೇಸ್‌ ಅನ್ನು ಅಂತಿಮ ಮಾಡುವುದೇ ವಿಶೇಷವಾಗಿದೆ. ಇಂದಿಗೂ ಜನ ಕಂಬಳಕ್ಕೆ ತಾಟೆಯಓಟವನ್ನು ನೋಡಲೆಂದೇ ಬರುವುದು. ಸದ್ಯ ನಾರಾವಿ ಯುವರಾಜ ಜೈನ್ ಅವರ ಯಜಮಾನಿಕೆಯ ತಂಡದಲ್ಲಿರುವ ತಾಟೆ, ಅಡ್ಡ ಹಲಗೆ ವಿಭಾಗದಲ್ಲಿ ಎರಡೂ ಕಂಬಳ ಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿ ಯಜಮಾನನ ನಂಬಿಕೆ ಉಳಿಸಿದೆ.

ತಾಟೆ ಓಟ ಸಾಮಾಜಿಕ ಜಾಲತಾಣದಲ್ಲಿ ವೈರಲ್‌

ಒಟ್ಟಿನಲ್ಲಿ ಕರಾವಳಿಯಲ್ಲಿ ಕಂಬಳ ರಂಗು ಹೆಚ್ಚಾಗಿದೆ. ಓಟಗಾರನ ಪ್ರಸಿದ್ಧಿಗೆ ಓಡುವ ಕೋಣದ ಪ್ರಸಿದ್ಧಿಯೇಜಗದಗಲವಾಗಿದ್ದು ಕಂಬಳದ ಮೇಲಿರುವ ಜನರ ಪ್ರೀತಿಗೆ ಸಾಕ್ಷಿಯಾಗಿದೆ. ತಾಟೆಯ ಓಟದ ವಿಡಿಯೋಗಳು ಸಾಮಾಜಿಕಜಾಲತಾಣದಲ್ಲಿ, ರೀಲ್ಸ್‌ ಮೂಲಕ ಜನಪ್ರಿಯತೆ ಪಡೆಯುತ್ತಿದೆ. ಚಿಗರೆಯ ಓಟದ ತಾಟೆಯನ್ನು ಅಭಿಮಾನಿಗಳು ಪ್ರೀತಿಯಿಂದಕಿಂಗ್ ತಾಟೆ ಎಂದು ಬಿರುದು ನೀಡಿ ಅಭಿಮಾನ ತೋರಿಸಿದ್ದಾರೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »