TOP STORIES:

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದ ವಾಸಿಯಾಗಿದ್ದಾರೆ..ಹರಿಣಿ ನಿಲೇಶ್ ಪೂಜಾರಿ


ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದವಾಸಿಯಾಗಿದ್ದಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಮುಂದೆ ಆಳ್ವಾಸ್ ಕಾಲೇಜು ಮೂಡಬಿದ್ರೆಯಲ್ಲಿ M. Com ಪದವಿದರೆಯಾದ ಹರಿಣಿ  ಅಲ್ಲಿಂದ ನೇರಾ ಹೊರಟಿದ್ದು ಕಲಾಜಗತ್ತಿಗೆ.. ಆವತ್ತಿನ ನಂಬರ್ ಒನ್ ಕನ್ನಡ ಕಾಮಿಡಿ ಸೀರಿಯಲ್ ಪಂಚರಂಗಿ ಪೊಂ ಪೊಂ ಸಾವಿರ ಸಂಚಿಕೆಗಳಲ್ಲಿ ಅಭಿನಯಿಸಿದ ಕೀರ್ತಿಹರಿಣಿಗಿದೆ.. ಅಲ್ಲಿಂದ ಮುಂದೆ ಹರ ಹರ ಮಹಾದೇವ ಧಾರಾವಾಹಿಯಲ್ಲಿ ಇವರು ಮಾಡಿದ ಸರಸ್ವತಿ ದೇವಿಯ ಪಾತ್ರದಿಂದಜನಮಾನಸದಲ್ಲಿ ಹರಿಣಿ ಅಚ್ಚಳಿಯದೆ ಉಳಿದರು..ಮದುಬಾಲ, ಲಕ್ಷ್ಮಿ ಬಾರಮ್ಮ,ಮದುಮಗಳು ಹೀಗೆ ಸಾಲು ಸಾಲುಧಾರಾವಾಹಿಗಳಲ್ಲಿ ಹರಿಣಿ ಮಿಂಚಿದರು

ಕಂಚಿಲ್ದಾ ಬಾಲೆ ತುಳು ಸಿನಿಮಾದಲ್ಲಿ ಬಾಲಮಾಣಿಯಾಗಿ ಅಭಿನಯಿಸಿ ತುಳುಚಿತ್ರ ರಸಿಕರಿಗೆ ಮಾತ್ರವಲ್ಲದೆ ಆದ್ಯಾತ್ಮಿಕವಾದಿಗಳಿಗೂಹತ್ತಿರ

ವಾದರೂ.. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಬಾಜನವಾದ ಅರ್ಜುನ್ ವೆಡ್ಸ್ ಅಮೃತ ತುಳು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಕಾಣಿಸಿಕೊಂಡರು.. ಸುವರ್ಣ ಸೂಪರ್ ಜೋಡಿ, ಡ್ರೀಮ್ ಗರ್ಲ್ಸ್ ಹೀಗೆ ಹಲವಾರು ರಿಯಾಲಿಟಿ ಶೋಗಳಲ್ಲಿ ಬಾಗವಹಿಸಿದರು..

ಬೆಸ್ಟ್ ಕಾಮಿಡಿ ಆಕ್ಟ್ರೆಸ್ಸ್, ಬೆಸ್ಟ್ ಪರ್ಫಾರ್ಮೆನ್ಸ್, ಹೀಗೆ ಹಲವಾರು ಪ್ರಶಸ್ತಿ, ಸನ್ಮಾನಗಳು ಹರಿಣಿಯನ್ನ ಹುಡುಕಿ ಬಂದವು.

ಮುಂದೆ ಬಿಲ್ಲವ ಅಸೋಸಿಯೇಷನ್ ಮುಂಬೈ ಯುವ ವಿಭಾಗದ ಕಾರ್ಯಧ್ಯಕ್ಷರಾದ ನಿಲೇಶ್ ಪೂಜಾರಿ ಪಲಿಮಾರು ಅವರಬಾಳಸಂಗಾತಿಯಾದ ಹರಿಣಿ ಸದ್ಯಕ್ಕೆ ಕಲಾಜಗತ್ತಿನಿಂದ ದೂರವಿದ್ದರೂ ಕೂಡ ಸಾಮಾಜಿಕ ಸೇವೆಯಲ್ಲಿ ತಮ್ಮನ್ನ ತಾವುನಿರಂತರವಾಗಿ ತೊಡಗಿಸಿಕೊಂಡಿದ್ದಾರೆ..ಜೊತೆಗೆ ಬರವಣಿಗೆಯಲ್ಲಿಯೂ ಹರಿಣಿ ತಮ್ಮ ಛಾಪನ್ನ ಮೂಡಿಸುವತ್ತ ಹೆಜ್ಜೆ ಇಡುತ್ತಿದ್ದಾರೆ.. ಜೆಸಿಐ ಸಂಸ್ಥೆಯ ವಾರ್ಷಿಕ ಪುಸ್ತಕ ಚೈತನ್ಯ ಸಂಪಾದಕಿಯಾಗಿಯೂ ಹರಿಣಿ ಕಾರ್ಯನಿರ್ವಾಹಿಸಿದ್ದಾರೆ. ನಿರೂಪಕಿಯಾಗಿಯೂಹರಿಣಿಯ ಹೆಸರು ಪ್ರಸಿದ್ದಿಯಾಗಿದೆ.

2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಮಡಿಕೇರಿಯಲ್ಲಿಸ್ವಯಂಸೇವಕಿಯಾಗಿ ಕೆಲಸ ಮಾಡಿದ ಹರಿಣಿ, ತಮ್ಮ ಮಗಳು ಸಹನಿ ಮೊದಲ ವರ್ಷದ ಹುಟ್ಟುಹಬ್ಬವನ್ನ ಮಾನಸಿಕ ಭಿನ್ನಸಾಮರ್ಥ್ಯದ ಮಕ್ಕಳ ವಿಜೇತ ವಿಶೇಷ ಶಾಲೆಯಲ್ಲಿ ಆಚರಿಸಿ ಮೆಚ್ಚುಗೆ ಪಡೆದಿದ್ದರು..

  ಸದ್ಯ ಸಹನಿ ಸ್ಟಾರ್ ಎಂಬ ಹೆಸರಿನ ಸಂಸ್ಥೆಯ ಮುಖ್ಯಸ್ತೆ ಯಾಗಿರುವ ಹರಿಣಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿಬಾಗಿಯಾಗುವ ಇಂಗಿತಾ ಹೊಂದಿದ್ದಾರೆ..ಹಲವಾರು ಬಾರಿ ರಕ್ತದಾನ ಶಿಬಿರ ಆಯೋಜನೆ ಮಾಡಿರುವ ಹರಿಣಿ ಸ್ವತಃ 24 ಬಾರಿರಕ್ತದಾನ ಮಾಡಿ ಸಾಮಾಜಿಕ ಕಳಕಳಿ ತೋರಿದ್ದಾರೆ..

   ಹರಿಣಿ ಅವರ ಯಶಸ್ಸಿಗೆ ಸ್ಫೂರ್ತಿಯಾದ ಅಪ್ಪ, ಅಮ್ಮ ಅಣ್ಣ ಹರಿಪ್ರಸಾದ್, ತಮ್ಮ ನಿತೇಶ್ ಜೊತೆಗೆ ಗಂಡ ನಿಲೇಶ್ ಪೂಜಾರಿಫಲಿಮಾರ್ ಅವರ ಸಹಕಾರಕ್ಕೆ ಅಭಾರಿಯಾಗಿರುವ ಹರಿಣಿ ಸದ್ಯ ಕಲಾ ಜಗತ್ತಿನಿಂದ ದೂರವಿದ್ದರೂ ಅವರೂ ನವರಾತ್ರಿಸಂದರ್ಭದಲ್ಲಿ ಮಾಡಿಸಿದ ಶಾರದೆಯಾ ಫೋಟೋಶೂಟ್ ಎಲ್ಲೆಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ..

  ಶಾರದೆಯ ಫೋಟೋಶೂಟ್ ಗಾಗಿ 21 ದಿನ ಕಟ್ಟುನಿಟ್ಟಿನ ವೃತ ಆಚರಿಸಿದ ಹರಿಣಿಗೆ ಶಾರದೆಯ ಆಶೀರ್ವಾದ ಮಡಿಲು ಸೇರಲಿಎನ್ನುವುದು ನಮ್ಮ ಆಶಯ..

ನವೀನ್ ಪಡ್ಡು ಇನ್ನಾ

ಕಮಲ  ಕಲಾ ವೇದಿಕೆ ಮುಂಬೈ


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »