TOP STORIES:

FOLLOW US

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದ ವಾಸಿಯಾಗಿದ್ದಾರೆ..ಹರಿಣಿ ನಿಲೇಶ್ ಪೂಜಾರಿ


ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದವಾಸಿಯಾಗಿದ್ದಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಮುಂದೆ ಆಳ್ವಾಸ್ ಕಾಲೇಜು ಮೂಡಬಿದ್ರೆಯಲ್ಲಿ M. Com ಪದವಿದರೆಯಾದ ಹರಿಣಿ  ಅಲ್ಲಿಂದ ನೇರಾ ಹೊರಟಿದ್ದು ಕಲಾಜಗತ್ತಿಗೆ.. ಆವತ್ತಿನ ನಂಬರ್ ಒನ್ ಕನ್ನಡ ಕಾಮಿಡಿ ಸೀರಿಯಲ್ ಪಂಚರಂಗಿ ಪೊಂ ಪೊಂ ಸಾವಿರ ಸಂಚಿಕೆಗಳಲ್ಲಿ ಅಭಿನಯಿಸಿದ ಕೀರ್ತಿಹರಿಣಿಗಿದೆ.. ಅಲ್ಲಿಂದ ಮುಂದೆ ಹರ ಹರ ಮಹಾದೇವ ಧಾರಾವಾಹಿಯಲ್ಲಿ ಇವರು ಮಾಡಿದ ಸರಸ್ವತಿ ದೇವಿಯ ಪಾತ್ರದಿಂದಜನಮಾನಸದಲ್ಲಿ ಹರಿಣಿ ಅಚ್ಚಳಿಯದೆ ಉಳಿದರು..ಮದುಬಾಲ, ಲಕ್ಷ್ಮಿ ಬಾರಮ್ಮ,ಮದುಮಗಳು ಹೀಗೆ ಸಾಲು ಸಾಲುಧಾರಾವಾಹಿಗಳಲ್ಲಿ ಹರಿಣಿ ಮಿಂಚಿದರು

ಕಂಚಿಲ್ದಾ ಬಾಲೆ ತುಳು ಸಿನಿಮಾದಲ್ಲಿ ಬಾಲಮಾಣಿಯಾಗಿ ಅಭಿನಯಿಸಿ ತುಳುಚಿತ್ರ ರಸಿಕರಿಗೆ ಮಾತ್ರವಲ್ಲದೆ ಆದ್ಯಾತ್ಮಿಕವಾದಿಗಳಿಗೂಹತ್ತಿರ

ವಾದರೂ.. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಬಾಜನವಾದ ಅರ್ಜುನ್ ವೆಡ್ಸ್ ಅಮೃತ ತುಳು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಕಾಣಿಸಿಕೊಂಡರು.. ಸುವರ್ಣ ಸೂಪರ್ ಜೋಡಿ, ಡ್ರೀಮ್ ಗರ್ಲ್ಸ್ ಹೀಗೆ ಹಲವಾರು ರಿಯಾಲಿಟಿ ಶೋಗಳಲ್ಲಿ ಬಾಗವಹಿಸಿದರು..

ಬೆಸ್ಟ್ ಕಾಮಿಡಿ ಆಕ್ಟ್ರೆಸ್ಸ್, ಬೆಸ್ಟ್ ಪರ್ಫಾರ್ಮೆನ್ಸ್, ಹೀಗೆ ಹಲವಾರು ಪ್ರಶಸ್ತಿ, ಸನ್ಮಾನಗಳು ಹರಿಣಿಯನ್ನ ಹುಡುಕಿ ಬಂದವು.

ಮುಂದೆ ಬಿಲ್ಲವ ಅಸೋಸಿಯೇಷನ್ ಮುಂಬೈ ಯುವ ವಿಭಾಗದ ಕಾರ್ಯಧ್ಯಕ್ಷರಾದ ನಿಲೇಶ್ ಪೂಜಾರಿ ಪಲಿಮಾರು ಅವರಬಾಳಸಂಗಾತಿಯಾದ ಹರಿಣಿ ಸದ್ಯಕ್ಕೆ ಕಲಾಜಗತ್ತಿನಿಂದ ದೂರವಿದ್ದರೂ ಕೂಡ ಸಾಮಾಜಿಕ ಸೇವೆಯಲ್ಲಿ ತಮ್ಮನ್ನ ತಾವುನಿರಂತರವಾಗಿ ತೊಡಗಿಸಿಕೊಂಡಿದ್ದಾರೆ..ಜೊತೆಗೆ ಬರವಣಿಗೆಯಲ್ಲಿಯೂ ಹರಿಣಿ ತಮ್ಮ ಛಾಪನ್ನ ಮೂಡಿಸುವತ್ತ ಹೆಜ್ಜೆ ಇಡುತ್ತಿದ್ದಾರೆ.. ಜೆಸಿಐ ಸಂಸ್ಥೆಯ ವಾರ್ಷಿಕ ಪುಸ್ತಕ ಚೈತನ್ಯ ಸಂಪಾದಕಿಯಾಗಿಯೂ ಹರಿಣಿ ಕಾರ್ಯನಿರ್ವಾಹಿಸಿದ್ದಾರೆ. ನಿರೂಪಕಿಯಾಗಿಯೂಹರಿಣಿಯ ಹೆಸರು ಪ್ರಸಿದ್ದಿಯಾಗಿದೆ.

2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಮಡಿಕೇರಿಯಲ್ಲಿಸ್ವಯಂಸೇವಕಿಯಾಗಿ ಕೆಲಸ ಮಾಡಿದ ಹರಿಣಿ, ತಮ್ಮ ಮಗಳು ಸಹನಿ ಮೊದಲ ವರ್ಷದ ಹುಟ್ಟುಹಬ್ಬವನ್ನ ಮಾನಸಿಕ ಭಿನ್ನಸಾಮರ್ಥ್ಯದ ಮಕ್ಕಳ ವಿಜೇತ ವಿಶೇಷ ಶಾಲೆಯಲ್ಲಿ ಆಚರಿಸಿ ಮೆಚ್ಚುಗೆ ಪಡೆದಿದ್ದರು..

  ಸದ್ಯ ಸಹನಿ ಸ್ಟಾರ್ ಎಂಬ ಹೆಸರಿನ ಸಂಸ್ಥೆಯ ಮುಖ್ಯಸ್ತೆ ಯಾಗಿರುವ ಹರಿಣಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿಬಾಗಿಯಾಗುವ ಇಂಗಿತಾ ಹೊಂದಿದ್ದಾರೆ..ಹಲವಾರು ಬಾರಿ ರಕ್ತದಾನ ಶಿಬಿರ ಆಯೋಜನೆ ಮಾಡಿರುವ ಹರಿಣಿ ಸ್ವತಃ 24 ಬಾರಿರಕ್ತದಾನ ಮಾಡಿ ಸಾಮಾಜಿಕ ಕಳಕಳಿ ತೋರಿದ್ದಾರೆ..

   ಹರಿಣಿ ಅವರ ಯಶಸ್ಸಿಗೆ ಸ್ಫೂರ್ತಿಯಾದ ಅಪ್ಪ, ಅಮ್ಮ ಅಣ್ಣ ಹರಿಪ್ರಸಾದ್, ತಮ್ಮ ನಿತೇಶ್ ಜೊತೆಗೆ ಗಂಡ ನಿಲೇಶ್ ಪೂಜಾರಿಫಲಿಮಾರ್ ಅವರ ಸಹಕಾರಕ್ಕೆ ಅಭಾರಿಯಾಗಿರುವ ಹರಿಣಿ ಸದ್ಯ ಕಲಾ ಜಗತ್ತಿನಿಂದ ದೂರವಿದ್ದರೂ ಅವರೂ ನವರಾತ್ರಿಸಂದರ್ಭದಲ್ಲಿ ಮಾಡಿಸಿದ ಶಾರದೆಯಾ ಫೋಟೋಶೂಟ್ ಎಲ್ಲೆಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ..

  ಶಾರದೆಯ ಫೋಟೋಶೂಟ್ ಗಾಗಿ 21 ದಿನ ಕಟ್ಟುನಿಟ್ಟಿನ ವೃತ ಆಚರಿಸಿದ ಹರಿಣಿಗೆ ಶಾರದೆಯ ಆಶೀರ್ವಾದ ಮಡಿಲು ಸೇರಲಿಎನ್ನುವುದು ನಮ್ಮ ಆಶಯ..

ನವೀನ್ ಪಡ್ಡು ಇನ್ನಾ

ಕಮಲ  ಕಲಾ ವೇದಿಕೆ ಮುಂಬೈ


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »