TOP STORIES:

FOLLOW US

ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದ ವಾಸಿಯಾಗಿದ್ದಾರೆ..ಹರಿಣಿ ನಿಲೇಶ್ ಪೂಜಾರಿ


ಕಡು ಬಡತನದ ಕುಟುಂಬದಲ್ಲಿ ಹುಟ್ಟಿದ ಹುಡುಗಿ ಕರ್ನಾಟಕದ ಕೋಟ್ಯಂತರ ಜನರ ಮನ ಗೆದ್ದು, ಪ್ರಸ್ತುತ ಮುಂಬೈ ಮಹಾನಗರದವಾಸಿಯಾಗಿದ್ದಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಹರಿಣಿ ನಿಲೇಶ್ ಪೂಜಾರಿ: ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ    ಶ್ರೀ ರಘುನಾಥ್ ಸುವರ್ಣ ಮತ್ತುಶ್ರೀಮತಿ ಶೋಭಾ ದಂಪತಿಯ ಪುತ್ರಿ. ಬೆಳೆಯುವ ಸಿರಿ ಮೊಳಕೆಯಲ್ಲಿಯೇ ಎಂಬಂತೆ ಶಾಲಾ ದಿನಗಳಲ್ಲಿಯೇ ಹರಿಣಿ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆಯುತ್ತಿದ್ದರು.. ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಮುಗಿಸಿದಹರಿಣಿ.. 12 ನೇ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಮುಂದೆ ಆಳ್ವಾಸ್ ಕಾಲೇಜು ಮೂಡಬಿದ್ರೆಯಲ್ಲಿ M. Com ಪದವಿದರೆಯಾದ ಹರಿಣಿ  ಅಲ್ಲಿಂದ ನೇರಾ ಹೊರಟಿದ್ದು ಕಲಾಜಗತ್ತಿಗೆ.. ಆವತ್ತಿನ ನಂಬರ್ ಒನ್ ಕನ್ನಡ ಕಾಮಿಡಿ ಸೀರಿಯಲ್ ಪಂಚರಂಗಿ ಪೊಂ ಪೊಂ ಸಾವಿರ ಸಂಚಿಕೆಗಳಲ್ಲಿ ಅಭಿನಯಿಸಿದ ಕೀರ್ತಿಹರಿಣಿಗಿದೆ.. ಅಲ್ಲಿಂದ ಮುಂದೆ ಹರ ಹರ ಮಹಾದೇವ ಧಾರಾವಾಹಿಯಲ್ಲಿ ಇವರು ಮಾಡಿದ ಸರಸ್ವತಿ ದೇವಿಯ ಪಾತ್ರದಿಂದಜನಮಾನಸದಲ್ಲಿ ಹರಿಣಿ ಅಚ್ಚಳಿಯದೆ ಉಳಿದರು..ಮದುಬಾಲ, ಲಕ್ಷ್ಮಿ ಬಾರಮ್ಮ,ಮದುಮಗಳು ಹೀಗೆ ಸಾಲು ಸಾಲುಧಾರಾವಾಹಿಗಳಲ್ಲಿ ಹರಿಣಿ ಮಿಂಚಿದರು

ಕಂಚಿಲ್ದಾ ಬಾಲೆ ತುಳು ಸಿನಿಮಾದಲ್ಲಿ ಬಾಲಮಾಣಿಯಾಗಿ ಅಭಿನಯಿಸಿ ತುಳುಚಿತ್ರ ರಸಿಕರಿಗೆ ಮಾತ್ರವಲ್ಲದೆ ಆದ್ಯಾತ್ಮಿಕವಾದಿಗಳಿಗೂಹತ್ತಿರ

ವಾದರೂ.. ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಬಾಜನವಾದ ಅರ್ಜುನ್ ವೆಡ್ಸ್ ಅಮೃತ ತುಳು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿಕಾಣಿಸಿಕೊಂಡರು.. ಸುವರ್ಣ ಸೂಪರ್ ಜೋಡಿ, ಡ್ರೀಮ್ ಗರ್ಲ್ಸ್ ಹೀಗೆ ಹಲವಾರು ರಿಯಾಲಿಟಿ ಶೋಗಳಲ್ಲಿ ಬಾಗವಹಿಸಿದರು..

ಬೆಸ್ಟ್ ಕಾಮಿಡಿ ಆಕ್ಟ್ರೆಸ್ಸ್, ಬೆಸ್ಟ್ ಪರ್ಫಾರ್ಮೆನ್ಸ್, ಹೀಗೆ ಹಲವಾರು ಪ್ರಶಸ್ತಿ, ಸನ್ಮಾನಗಳು ಹರಿಣಿಯನ್ನ ಹುಡುಕಿ ಬಂದವು.

ಮುಂದೆ ಬಿಲ್ಲವ ಅಸೋಸಿಯೇಷನ್ ಮುಂಬೈ ಯುವ ವಿಭಾಗದ ಕಾರ್ಯಧ್ಯಕ್ಷರಾದ ನಿಲೇಶ್ ಪೂಜಾರಿ ಪಲಿಮಾರು ಅವರಬಾಳಸಂಗಾತಿಯಾದ ಹರಿಣಿ ಸದ್ಯಕ್ಕೆ ಕಲಾಜಗತ್ತಿನಿಂದ ದೂರವಿದ್ದರೂ ಕೂಡ ಸಾಮಾಜಿಕ ಸೇವೆಯಲ್ಲಿ ತಮ್ಮನ್ನ ತಾವುನಿರಂತರವಾಗಿ ತೊಡಗಿಸಿಕೊಂಡಿದ್ದಾರೆ..ಜೊತೆಗೆ ಬರವಣಿಗೆಯಲ್ಲಿಯೂ ಹರಿಣಿ ತಮ್ಮ ಛಾಪನ್ನ ಮೂಡಿಸುವತ್ತ ಹೆಜ್ಜೆ ಇಡುತ್ತಿದ್ದಾರೆ.. ಜೆಸಿಐ ಸಂಸ್ಥೆಯ ವಾರ್ಷಿಕ ಪುಸ್ತಕ ಚೈತನ್ಯ ಸಂಪಾದಕಿಯಾಗಿಯೂ ಹರಿಣಿ ಕಾರ್ಯನಿರ್ವಾಹಿಸಿದ್ದಾರೆ. ನಿರೂಪಕಿಯಾಗಿಯೂಹರಿಣಿಯ ಹೆಸರು ಪ್ರಸಿದ್ದಿಯಾಗಿದೆ.

2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ ನೆರೆ ಸಂದರ್ಭದಲ್ಲಿ ಮಡಿಕೇರಿಯಲ್ಲಿಸ್ವಯಂಸೇವಕಿಯಾಗಿ ಕೆಲಸ ಮಾಡಿದ ಹರಿಣಿ, ತಮ್ಮ ಮಗಳು ಸಹನಿ ಮೊದಲ ವರ್ಷದ ಹುಟ್ಟುಹಬ್ಬವನ್ನ ಮಾನಸಿಕ ಭಿನ್ನಸಾಮರ್ಥ್ಯದ ಮಕ್ಕಳ ವಿಜೇತ ವಿಶೇಷ ಶಾಲೆಯಲ್ಲಿ ಆಚರಿಸಿ ಮೆಚ್ಚುಗೆ ಪಡೆದಿದ್ದರು..

  ಸದ್ಯ ಸಹನಿ ಸ್ಟಾರ್ ಎಂಬ ಹೆಸರಿನ ಸಂಸ್ಥೆಯ ಮುಖ್ಯಸ್ತೆ ಯಾಗಿರುವ ಹರಿಣಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲಿಬಾಗಿಯಾಗುವ ಇಂಗಿತಾ ಹೊಂದಿದ್ದಾರೆ..ಹಲವಾರು ಬಾರಿ ರಕ್ತದಾನ ಶಿಬಿರ ಆಯೋಜನೆ ಮಾಡಿರುವ ಹರಿಣಿ ಸ್ವತಃ 24 ಬಾರಿರಕ್ತದಾನ ಮಾಡಿ ಸಾಮಾಜಿಕ ಕಳಕಳಿ ತೋರಿದ್ದಾರೆ..

   ಹರಿಣಿ ಅವರ ಯಶಸ್ಸಿಗೆ ಸ್ಫೂರ್ತಿಯಾದ ಅಪ್ಪ, ಅಮ್ಮ ಅಣ್ಣ ಹರಿಪ್ರಸಾದ್, ತಮ್ಮ ನಿತೇಶ್ ಜೊತೆಗೆ ಗಂಡ ನಿಲೇಶ್ ಪೂಜಾರಿಫಲಿಮಾರ್ ಅವರ ಸಹಕಾರಕ್ಕೆ ಅಭಾರಿಯಾಗಿರುವ ಹರಿಣಿ ಸದ್ಯ ಕಲಾ ಜಗತ್ತಿನಿಂದ ದೂರವಿದ್ದರೂ ಅವರೂ ನವರಾತ್ರಿಸಂದರ್ಭದಲ್ಲಿ ಮಾಡಿಸಿದ ಶಾರದೆಯಾ ಫೋಟೋಶೂಟ್ ಎಲ್ಲೆಲ್ಲೂ ಮೆಚ್ಚುಗೆಗೆ ಪಾತ್ರವಾಗಿದೆ..

  ಶಾರದೆಯ ಫೋಟೋಶೂಟ್ ಗಾಗಿ 21 ದಿನ ಕಟ್ಟುನಿಟ್ಟಿನ ವೃತ ಆಚರಿಸಿದ ಹರಿಣಿಗೆ ಶಾರದೆಯ ಆಶೀರ್ವಾದ ಮಡಿಲು ಸೇರಲಿಎನ್ನುವುದು ನಮ್ಮ ಆಶಯ..

ನವೀನ್ ಪಡ್ಡು ಇನ್ನಾ

ಕಮಲ  ಕಲಾ ವೇದಿಕೆ ಮುಂಬೈ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »