TOP STORIES:

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ – ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ


ಸಮಾಜದಲ್ಲಿ ಯಾರೂ ಮೇಲಲ್ಲ ಯಾರೂ ಕೀಳಲ್ಲ ಭಗವಂತನಿಗೆ ಎಲ್ಲರೂ ಸಮಾನರೆ. ಪರಸ್ಪರ ಸಹಾಯ ಮಾಡುವುದೇ ನಿಜವಾದ ಮಾನವೀಯತೆ ಎಂದು ನಂಬಿರುವವರೆ ಕಾರ್ಕಳದ ಕಲ್ಯಾ ಗ್ರಾಮದ ತ್ರಯಂಬಕೇಶ್ವರ ಅನ್ಮಪೂರ್ಣ ಮಠದ ಶ್ರೀ ಶ್ರೀ ಶ್ರೀ ಬ್ರಹ್ಮ ಋಷಿ ಉಮಾಮಹೇಶ್ವರ ಸ್ವಾಮೀಜಿ.

(Copyrights owned by: billavaswarriors.com )

ಮೂಲತಃ ಅಜೆಕಾರು ಹೆರ್ಮುಂಡೆ ಗ್ರಾಮದ ಬೊಬ್ಬರ್ಯ ಬಾಕ್ಯಾರ್ ಎಂಬ ಕೃಷಿ ಕುಟುಂಬದ ನಾರಾಯಣ ಪೂಜಾರಿ ಹಾಗು ಸುಂದರಿ ಪೂಜಾರಿ ದಂಪತಿಗಳ ಪುತ್ರನಾಗಿ ಜನಿಸಿದ ಇವರು ಯರ್ಲಪಾಡಿ ಗ್ರಾಮದಲ್ಲಿ ಬೆಳೆದರು. ಬಾಲ್ಯದಲ್ಲಿ ಬಹಳ ಚೇಷ್ಟೆ ಸ್ವಭಾವದವರಾಗಿದ್ದು ಐದನೇ ತರಗತಿಯವರೆಗಿನ ಶಿಕ್ಷಣ ಪಡೆದಿದ್ದಾರೆ.

(Copyrights owned by: billavaswarriors.com )

ಪೂರ್ವಶ್ರಮದಲ್ಲಿ ಉಮೇಶ್ ಕರ್ಕೇರ ಎಂಬ ಹೆಸರುಳ್ಳ ಇವರಿಗೆ ಆಧ್ಯಾತ್ಮಿಕ ಜೀವನಕ್ಕೆ ಸ್ಪೂರ್ತಿಯಾದವರು ಹಾಗು ಇವರಲ್ಲಿರುವ ಜ್ಞಾನದ ಶಕ್ತಿಯನ್ನು ಹೊರ ಹೊಮ್ಮುವಂತೆ ಮಾಡಿದವರು ಇವರ ಗುರುಗಳಾದ ಸುಂಕದಕಟ್ಟೆಯ ನಿರಂಜನ ಸ್ವಾಮೀಜಿಯವರು. ಮುಂಬಯಿಯಲ್ಲಿ ಉಮೇಶ ಕರ್ಕೇರವರು ನಿರಂಜನ ಸ್ವಾಮೀಜಿಯವರಿಂದ ದೀಕ್ಷೆ ಪಡೆದರು. ಮಹಾರಾಷ್ಟ್ರದಿಂದ ತವರೂರಿಗೆ ಬಂದು 2005 ರಲ್ಲಿ ಕಲ್ಯಾ ಗ್ರಾಮದಲ್ಲಿ ತ್ರಯಂಬಕೇಶ್ವರ ಅನ್ಮಪೂರ್ಣ ಮಠವನ್ನು ಸ್ಥಾಪಿಸಿದರು.ಜೀವನದಲ್ಲಿ ನಮಗೆ ತಿಳಿದಿರುವುದನ್ನು ಇತರರಿಗೂ ಕಲಿಸಬೇಕೆನ್ನುವ ಇವರು ಕರಾಟೆ ಭೋಧಕರಾಗಿದ್ದು. ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸದೆ ಕರಾಟೆ ಕಲಿಸುತ್ತಿದ್ದರು ಹಾಗು ಕಮಾಂಡೊಗಳಿಗೆ ತರಬೇತಿ ನೀಡುತ್ತಿದ್ದರು. ಇನ್ನು ಮುಂದೆಯೂ ಅನೇಕ ಕಲೆ ಹಾಗು ಆಟಗಳನ್ನು ಮಠದಲ್ಲಿಯೂ ಪ್ರಾರಂಭಿಸುವ ಯೋಜನೆ ಹೊಂದಿದ್ದಾರೆ.(Copyrights owned by: billavaswarriors.com )

ಮಾನವರು ಸ್ವಾರ್ಥಿಗಳು ಹಾಗು ಅವರು ನಿರೀಕ್ಷೆಗಳೊಂದಿಗೆ ಬದುಕುತ್ತಾರೆ ಆದರೆ ಭಗವಂತ ಮಾತ್ರ ಯಾವುದೇ ನಿರೀಕ್ಷೆಗಳಿಲ್ಲದೆ ನಮ್ಮನ್ನು ಪ್ರೀತಿಸುತ್ತಾನೆ. ಹಾಗೆಯೇ ಆಧ್ಯಾತ್ಮಿಕ ಗುರುವಾದವನು ಎಂದಿಗೂ ತನ್ನ ಭಕ್ತನಿಗೆ ಹಣದ ಬೇಡಿಕೆಯಿಡುವುದಿಲ್ಲ ಭಕ್ತ ತೋರಿಸುವ ಭಕ್ತಿಯೆ ದೊಡ್ಡ ಆಸ್ತಿಯಾಗಿರುತ್ತದೆ ಎನ್ನುತ್ತಾರೆ. ತಮ್ಮ ಮಠ ನೊಂದ ಜನರ ಸ್ವಾಂತನಕ್ಕಾಗಿ ಹಾಗು ಅವರ ಕಷ್ಟಗಳ ಪರಿಹಾರಕ್ಕಾಗಿ ಇದೆ. ಇದರ ಬೆಳವಣಿಗೆ ಇಲ್ಲಿನ ದೇವತೆಯೆ ಮಾಡುತ್ತಾರೆ ಎಂದು ನಂಬಿದ್ದಾರೆ. ಇಂದಿನ ಪೀಳಿಗೆಯ ಜನ ಹೆತ್ತವರನ್ನು ನಿರ್ಲಕ್ಷಿಸುತ್ತಿದ್ದಾರೆ. ಆದರೆ ಹೆತ್ತವರ ಆಶೀರ್ವಾದದ ವಿನಃ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಅವರೇ ಮೊದಲ ದೇವರು ಅವರಿಗೆ ಎಂದಿಗೂ ವಿಧೇಯರಾಗಿರಬೇಕು ಹಾಗು ಜೀವನದಲ್ಲಿ ಗುರುವಿನ ಪಾತ್ರ ಬಹಳ ಮುಖ್ಯವಾದುದು ಎಂಬ ಕಿವಿಮಾತನ್ನು ಜನತೆಗೆ ನೀಡುತ್ತಾರೆ.

(Copyrights owned by: billavaswarriors.com )

ಇಂತಹ ಆಧ್ಯಾತ್ಮಿಕ ಜ್ಞಾನಿ ನಮ್ಮ ಬಿಲ್ಲವ ಸಮಾಜದವರು ಎನ್ನುವುದು ಹೆಮ್ಮೆಯ ಸಂಗತಿ. ಎಲ್ಲರನ್ನು ಸಮಾನವಾಗಿ ಕಾಣುವ ಇವರ ಆಧ್ಯಾತ್ಮಿಕ ಬದುಕು ಸಮಾಜದ ಏಳಿಗೆಗೆ ಮಾರ್ಗದರ್ಶನವಾಗಲಿ ಎಂಬುದು ನಮ್ಮೆಲ್ಲರ ಆಶಯ.

ಬರಹ: ನಳಿನಿ ಎಸ್ ಸುವರ್ಣ ಜಾರ್ಕಳ ಮುಂಡ್ಲಿ.

(Copyrights owned by: billavaswarriors.com )


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »