TOP STORIES:

ಕರಾಟೆ ಪಟುವಿನಿಂದ ಆಧ್ಯಾತ್ಮಿಕ ಪಥದೆಡೆಗೆ – ಬಿಲ್ಲವ ಸಮಾಜದ ಶ್ರೀ ಬ್ರಹ್ಮಋಷಿ ಉಮಾಮಹೇಶ್ವರ ಸ್ವಾಮೀಜಿ ಜೀವನಗಾಥೆ


ಸಮಾಜದಲ್ಲಿ ಯಾರೂ ಮೇಲಲ್ಲ ಯಾರೂ ಕೀಳಲ್ಲ ಭಗವಂತನಿಗೆ ಎಲ್ಲರೂ ಸಮಾನರೆ. ಪರಸ್ಪರ ಸಹಾಯ ಮಾಡುವುದೇ ನಿಜವಾದ ಮಾನವೀಯತೆ ಎಂದು ನಂಬಿರುವವರೆ ಕಾರ್ಕಳದ ಕಲ್ಯಾ ಗ್ರಾಮದ ತ್ರಯಂಬಕೇಶ್ವರ ಅನ್ಮಪೂರ್ಣ ಮಠದ ಶ್ರೀ ಶ್ರೀ ಶ್ರೀ ಬ್ರಹ್ಮ ಋಷಿ ಉಮಾಮಹೇಶ್ವರ ಸ್ವಾಮೀಜಿ.

(Copyrights owned by: billavaswarriors.com )

ಮೂಲತಃ ಅಜೆಕಾರು ಹೆರ್ಮುಂಡೆ ಗ್ರಾಮದ ಬೊಬ್ಬರ್ಯ ಬಾಕ್ಯಾರ್ ಎಂಬ ಕೃಷಿ ಕುಟುಂಬದ ನಾರಾಯಣ ಪೂಜಾರಿ ಹಾಗು ಸುಂದರಿ ಪೂಜಾರಿ ದಂಪತಿಗಳ ಪುತ್ರನಾಗಿ ಜನಿಸಿದ ಇವರು ಯರ್ಲಪಾಡಿ ಗ್ರಾಮದಲ್ಲಿ ಬೆಳೆದರು. ಬಾಲ್ಯದಲ್ಲಿ ಬಹಳ ಚೇಷ್ಟೆ ಸ್ವಭಾವದವರಾಗಿದ್ದು ಐದನೇ ತರಗತಿಯವರೆಗಿನ ಶಿಕ್ಷಣ ಪಡೆದಿದ್ದಾರೆ.

(Copyrights owned by: billavaswarriors.com )

ಪೂರ್ವಶ್ರಮದಲ್ಲಿ ಉಮೇಶ್ ಕರ್ಕೇರ ಎಂಬ ಹೆಸರುಳ್ಳ ಇವರಿಗೆ ಆಧ್ಯಾತ್ಮಿಕ ಜೀವನಕ್ಕೆ ಸ್ಪೂರ್ತಿಯಾದವರು ಹಾಗು ಇವರಲ್ಲಿರುವ ಜ್ಞಾನದ ಶಕ್ತಿಯನ್ನು ಹೊರ ಹೊಮ್ಮುವಂತೆ ಮಾಡಿದವರು ಇವರ ಗುರುಗಳಾದ ಸುಂಕದಕಟ್ಟೆಯ ನಿರಂಜನ ಸ್ವಾಮೀಜಿಯವರು. ಮುಂಬಯಿಯಲ್ಲಿ ಉಮೇಶ ಕರ್ಕೇರವರು ನಿರಂಜನ ಸ್ವಾಮೀಜಿಯವರಿಂದ ದೀಕ್ಷೆ ಪಡೆದರು. ಮಹಾರಾಷ್ಟ್ರದಿಂದ ತವರೂರಿಗೆ ಬಂದು 2005 ರಲ್ಲಿ ಕಲ್ಯಾ ಗ್ರಾಮದಲ್ಲಿ ತ್ರಯಂಬಕೇಶ್ವರ ಅನ್ಮಪೂರ್ಣ ಮಠವನ್ನು ಸ್ಥಾಪಿಸಿದರು.ಜೀವನದಲ್ಲಿ ನಮಗೆ ತಿಳಿದಿರುವುದನ್ನು ಇತರರಿಗೂ ಕಲಿಸಬೇಕೆನ್ನುವ ಇವರು ಕರಾಟೆ ಭೋಧಕರಾಗಿದ್ದು. ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸದೆ ಕರಾಟೆ ಕಲಿಸುತ್ತಿದ್ದರು ಹಾಗು ಕಮಾಂಡೊಗಳಿಗೆ ತರಬೇತಿ ನೀಡುತ್ತಿದ್ದರು. ಇನ್ನು ಮುಂದೆಯೂ ಅನೇಕ ಕಲೆ ಹಾಗು ಆಟಗಳನ್ನು ಮಠದಲ್ಲಿಯೂ ಪ್ರಾರಂಭಿಸುವ ಯೋಜನೆ ಹೊಂದಿದ್ದಾರೆ.(Copyrights owned by: billavaswarriors.com )

ಮಾನವರು ಸ್ವಾರ್ಥಿಗಳು ಹಾಗು ಅವರು ನಿರೀಕ್ಷೆಗಳೊಂದಿಗೆ ಬದುಕುತ್ತಾರೆ ಆದರೆ ಭಗವಂತ ಮಾತ್ರ ಯಾವುದೇ ನಿರೀಕ್ಷೆಗಳಿಲ್ಲದೆ ನಮ್ಮನ್ನು ಪ್ರೀತಿಸುತ್ತಾನೆ. ಹಾಗೆಯೇ ಆಧ್ಯಾತ್ಮಿಕ ಗುರುವಾದವನು ಎಂದಿಗೂ ತನ್ನ ಭಕ್ತನಿಗೆ ಹಣದ ಬೇಡಿಕೆಯಿಡುವುದಿಲ್ಲ ಭಕ್ತ ತೋರಿಸುವ ಭಕ್ತಿಯೆ ದೊಡ್ಡ ಆಸ್ತಿಯಾಗಿರುತ್ತದೆ ಎನ್ನುತ್ತಾರೆ. ತಮ್ಮ ಮಠ ನೊಂದ ಜನರ ಸ್ವಾಂತನಕ್ಕಾಗಿ ಹಾಗು ಅವರ ಕಷ್ಟಗಳ ಪರಿಹಾರಕ್ಕಾಗಿ ಇದೆ. ಇದರ ಬೆಳವಣಿಗೆ ಇಲ್ಲಿನ ದೇವತೆಯೆ ಮಾಡುತ್ತಾರೆ ಎಂದು ನಂಬಿದ್ದಾರೆ. ಇಂದಿನ ಪೀಳಿಗೆಯ ಜನ ಹೆತ್ತವರನ್ನು ನಿರ್ಲಕ್ಷಿಸುತ್ತಿದ್ದಾರೆ. ಆದರೆ ಹೆತ್ತವರ ಆಶೀರ್ವಾದದ ವಿನಃ ನಾವು ಏನನ್ನೂ ಮಾಡಲು ಸಾಧ್ಯವಿಲ್ಲ. ಅವರೇ ಮೊದಲ ದೇವರು ಅವರಿಗೆ ಎಂದಿಗೂ ವಿಧೇಯರಾಗಿರಬೇಕು ಹಾಗು ಜೀವನದಲ್ಲಿ ಗುರುವಿನ ಪಾತ್ರ ಬಹಳ ಮುಖ್ಯವಾದುದು ಎಂಬ ಕಿವಿಮಾತನ್ನು ಜನತೆಗೆ ನೀಡುತ್ತಾರೆ.

(Copyrights owned by: billavaswarriors.com )

ಇಂತಹ ಆಧ್ಯಾತ್ಮಿಕ ಜ್ಞಾನಿ ನಮ್ಮ ಬಿಲ್ಲವ ಸಮಾಜದವರು ಎನ್ನುವುದು ಹೆಮ್ಮೆಯ ಸಂಗತಿ. ಎಲ್ಲರನ್ನು ಸಮಾನವಾಗಿ ಕಾಣುವ ಇವರ ಆಧ್ಯಾತ್ಮಿಕ ಬದುಕು ಸಮಾಜದ ಏಳಿಗೆಗೆ ಮಾರ್ಗದರ್ಶನವಾಗಲಿ ಎಂಬುದು ನಮ್ಮೆಲ್ಲರ ಆಶಯ.

ಬರಹ: ನಳಿನಿ ಎಸ್ ಸುವರ್ಣ ಜಾರ್ಕಳ ಮುಂಡ್ಲಿ.

(Copyrights owned by: billavaswarriors.com )


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »