TOP STORIES:

ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು ಪೊಲೀಸ್ ಒಬ್ಬರು ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮನವಿ ಮಾಡಿದ ವಿಡಿಯೋ ಭಾರಿ ವೈರಲ್ ಆಗಿದೆ.

ಪಾಂಡೇಚೇರಿಗೆ ಕರ್ನಾಟಕದ ಬೈಕ್ ಸವಾರ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಸವಾರನಿಗೆ ದೂರದಿಂದಲೇ ಪೊಲೀಸರು ನಿಲ್ಲಿಸಲು ಮನವಿ ಮಾಡಿದ್ದಾರೆ. ಬೈಕ್ ಸವಾರ ಬೈಕ್ ನಿಲ್ಲಿಸಿದ ವೇಳೆ ತಮಿಳುನಾಡು ಪೊಲೀಸ್, ಕರ್ನಾಟಕವಾ? ಎಂದು ಕೇಳಿ, ಬಳಿಕ ಪೊಲೀಸ್ ಒಬ್ಬರು ತನ್ನ ಕೈಯಲ್ಲಿರುವ ಔಷಧವನ್ನು ತೋರಿಸಿ, ಇದು ಈಗಷ್ಟೆ ಹೋಗಿರುವ ಸರ್ಕಾರಿ ಬಸ್‌ನಲ್ಲಿರುವ ಒಬ್ಬರು ತಾಯಿಯ ಕೈಯಿಂದ ಬಿದ್ದಿದ್ದು, ಅವರಿಗೆ ಈ ಔಷಧ ತಲುಪಿಸಿ ಎಂದಿದ್ದಾರೆ.

ಇನ್ನು ಹೆದ್ದಾರಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದ ವೇಳೆ ಬಸ್‌ನ ಬದಿಯಲ್ಲಿ ಕುಳಿತಿದ್ದ ತಾಯಿಯ ಔಷಧಿ ಹೊರಬಿದ್ದಿದ್ದು, ಬಸ್ ವೇಗವಾಗಿ ಮುಂದೆ ಸಾಗಿದ ಕಾರಣ ಕೂಗಿದರೂ ಬಸ್ ಮುಂದೆ ಸಾಗಿದೆ.

ಹಾಗಾಗಿ ಪೊಲೀಸ್ ಔಷಧಿಯನ್ನು ಬೈಕ್ ಸವಾರನ ಬಳಿ ತಲುಪಿಸಲು ಹೇಳಿದ್ದು, ಔಷಧ ಸ್ವೀಕರಿಸಿದ ಕರ್ನಾಟಕದ ಬೈಕ್ ಸವಾರ ವೇಗವಾಗಿ ಬೈಕ್ ಚಲಾಯಿಸಿ ಬಸ್ ಚೇಸ್ ಮಾಡಿದ್ದಾನೆ. ಬಳಿಕ ಡ್ರೈವರ್ ಬಳಿ ಬಸ್ ನಿಲ್ಲಿಸುವಂತೆ ಸೂಚನೆ ನೀಡಿದ್ದು, ತಾಯಿಗೆ ಔಷಧವನ್ನು ನೀಡಿದ್ದಾರೆ.

ಇನ್ನು ಈ ಎಲ್ಲಾ ಘಟನೆ ಬೈಕ್ ಸವಾರ ಹೆಲ್ಮೆಟ್ ಕ್ಯಾಮಾರದಲ್ಲಿ ರೆಕಾರ್ಡ್ ಆಗಿದ್ದು, ಭಾರಿ ವೈರಲ್ ಆಗಿದೆ.

Video viral: ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »