TOP STORIES:

FOLLOW US

ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


ಪಾಂಡಿಚೇರಿ: ಪೊಲೀಸರು ಇತ್ತೀಚಿನ ದಿನಗಳನ್ನು ವಾಹನ ತಡೆದು ತಪಾಸಣೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಕೆಲವೊಂದು ಅಹಿತಕರ ಘಟನೆಗಳೇ ಇದಕ್ಕೆ ಸಾಕ್ಷಿಯಾಗುತ್ತಿದೆ. ಆದರೆ ಇಲ್ಲೊಂದು ವಿಶೇಷ ಘಟನೆ ಎಂಬಂತೆ ಪಾಂಡಿಚೇರಿಗೆ ತೆರಳುವ ಹೆದ್ದಾರಿಯಲ್ಲಿ ತಮಿಳುನಾಡು ಪೊಲೀಸ್ ಒಬ್ಬರು ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮನವಿ ಮಾಡಿದ ವಿಡಿಯೋ ಭಾರಿ ವೈರಲ್ ಆಗಿದೆ.

ಪಾಂಡೇಚೇರಿಗೆ ಕರ್ನಾಟಕದ ಬೈಕ್ ಸವಾರ ತೆರಳುತ್ತಿದ್ದಾಗ ಹೆದ್ದಾರಿಯಲ್ಲಿ ಸವಾರನಿಗೆ ದೂರದಿಂದಲೇ ಪೊಲೀಸರು ನಿಲ್ಲಿಸಲು ಮನವಿ ಮಾಡಿದ್ದಾರೆ. ಬೈಕ್ ಸವಾರ ಬೈಕ್ ನಿಲ್ಲಿಸಿದ ವೇಳೆ ತಮಿಳುನಾಡು ಪೊಲೀಸ್, ಕರ್ನಾಟಕವಾ? ಎಂದು ಕೇಳಿ, ಬಳಿಕ ಪೊಲೀಸ್ ಒಬ್ಬರು ತನ್ನ ಕೈಯಲ್ಲಿರುವ ಔಷಧವನ್ನು ತೋರಿಸಿ, ಇದು ಈಗಷ್ಟೆ ಹೋಗಿರುವ ಸರ್ಕಾರಿ ಬಸ್‌ನಲ್ಲಿರುವ ಒಬ್ಬರು ತಾಯಿಯ ಕೈಯಿಂದ ಬಿದ್ದಿದ್ದು, ಅವರಿಗೆ ಈ ಔಷಧ ತಲುಪಿಸಿ ಎಂದಿದ್ದಾರೆ.

ಇನ್ನು ಹೆದ್ದಾರಿಯಲ್ಲಿ ಪೊಲೀಸರು ತಪಾಸಣೆ ಮಾಡುತ್ತಿದ್ದ ವೇಳೆ ಬಸ್‌ನ ಬದಿಯಲ್ಲಿ ಕುಳಿತಿದ್ದ ತಾಯಿಯ ಔಷಧಿ ಹೊರಬಿದ್ದಿದ್ದು, ಬಸ್ ವೇಗವಾಗಿ ಮುಂದೆ ಸಾಗಿದ ಕಾರಣ ಕೂಗಿದರೂ ಬಸ್ ಮುಂದೆ ಸಾಗಿದೆ.

ಹಾಗಾಗಿ ಪೊಲೀಸ್ ಔಷಧಿಯನ್ನು ಬೈಕ್ ಸವಾರನ ಬಳಿ ತಲುಪಿಸಲು ಹೇಳಿದ್ದು, ಔಷಧ ಸ್ವೀಕರಿಸಿದ ಕರ್ನಾಟಕದ ಬೈಕ್ ಸವಾರ ವೇಗವಾಗಿ ಬೈಕ್ ಚಲಾಯಿಸಿ ಬಸ್ ಚೇಸ್ ಮಾಡಿದ್ದಾನೆ. ಬಳಿಕ ಡ್ರೈವರ್ ಬಳಿ ಬಸ್ ನಿಲ್ಲಿಸುವಂತೆ ಸೂಚನೆ ನೀಡಿದ್ದು, ತಾಯಿಗೆ ಔಷಧವನ್ನು ನೀಡಿದ್ದಾರೆ.

ಇನ್ನು ಈ ಎಲ್ಲಾ ಘಟನೆ ಬೈಕ್ ಸವಾರ ಹೆಲ್ಮೆಟ್ ಕ್ಯಾಮಾರದಲ್ಲಿ ರೆಕಾರ್ಡ್ ಆಗಿದ್ದು, ಭಾರಿ ವೈರಲ್ ಆಗಿದೆ.

Video viral: ಕರ್ನಾಟಕದ ಬೈಕ್ ಸವಾರನನ್ನು ನಿಲ್ಲಿಸಿ ಮಾನವೀಯತೆ ಮೆರೆದ ತಮಿಳುನಾಡು ಪೊಲೀಸ್!


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »