TOP STORIES:

ಕಲಾವಿದರ ಕಣ್ಮಣಿ ‘ರಂಜು ತುಳುರಂಗ ಪ್ರೇಮಿ’


ಓರ್ವ ಕಲಾವಿದನಿಗೆ ಕಲೆಯೇ ತನ್ನ ಬಣ್ಣದ ಪ್ರಪಂಚವಾದರೆ , ಇನ್ನೊಂದೆಡೆ ಆ ಕಲಾವಿದರ ಏಳಿಗೆಯೇ ತನ್ನ ಜಗತ್ತು ಮತ್ತವರ ಆಶೀರ್ವಾದನೇ ತನಗೆ ಶ್ರೀ ರಕ್ಷೆ ಎಂದುಕೊಂಡು ರಂಜಿತ್ ಕಕ್ಕಿಂಜೆ ಇವರು ಕಾರ್ಯಪ್ರವೃತ್ತರಾಗಿದ್ದಾರೆ. ರಂಗಸೇವಕರಿಗೆ ಈ ಸಮಾಜದಲ್ಲಿ ಒಂದೊಳ್ಳೆ ಸ್ಥಾನ ಸಿಗಬೇಕೆಂಬ ಆಶಯದಿಂದ ತನ್ನ ತುಳುವನಾಡಿಗೆ ದುಡಿಯುತ್ತಿರುವ ಇವರು, ತುಳುನಾಡಿನೆಲ್ಲೆಡೆ ಇವರು ‘ರಂಜು ತುಳುರಂಗ ಪ್ರೇಮಿ’ ಎಂದೇ ಜನರಿಗೆ ಚಿರಪರಿಚಿತರಾಗಿದ್ದಾರೆ.

ವಸಂತ್ ಪೂಜಾರಿ ಮತ್ತು ಉಷಾ ದಂಪತಿಯ ಸುಪುತ್ರನಾದ ಇವರು ಐಟಿಐ ಪದವೀಧರ , ಪ್ರಸ್ತುತ ಸೌದಿ ಅರೇಬಿಯಾದ ಅಬ್ಹಾ ಏರ್ಪೋಟ್ ನಲ್ಲಿ ಗ್ರೌಂಡ್ ಸಪೋರ್ಟ್ ಸೆರ್ವಿಸಸ್ ಮೈಂಟೈನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಣ್ಣದ ಲೋಕದ ಕಲಾವಿದನಾಗಿ,ನಾಟಕರಂಗದ ನಿರ್ದೇಶಕನಾಗಿ , ಭಜನಕಾರನಾಗಿ, ಗಾಯಕನಾಗಿ, ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಬರಹಗಾರನಾಗಿ , ಸಾಹಿತಿಯಾಗಿ ಹೀಗೆ ಸಕಲ ಕಲೆಗಳನ್ನು ಹೊಂದಿರುವ ಪ್ರತಿಭಾನ್ವಿತ ಸಾಧಕರಿವರು.

ಬಾಲ್ಯದಿಂದಲೇ ಭಜನೆಯ ಮೇಲಿನ ಒಲವು:

ಬಾಲ್ಯದಿಂದಲೇ ಇವರು ಉಳ್ಳಾಲ್ತಿ ಭಜನಾ ಮಂಡಳಿ, ಅರಂತಬೈಲಿನಲ್ಲಿ ದೇವರ ನಾಮಸ್ಮರಣೆ ಮಾಡಿಕೊಂಡು ಬಂದವರು.ಭಜನೆಯ ಮೇಲಿನ ಅಪಾರ ಪ್ರೀತಿಯಿಂದಾಗಿ ಇವರು ತನ್ನ ಊರಿನಲ್ಲೇ ಒಂದು ಭಜನಾ ತಂಡವನ್ನು ಕಮಲಾಕ್ಷ ಪೂಜಾರಿಯವರ ಪ್ರೋತ್ಸಾಹದಿಂದ ‘ಶ್ರೀ ಶಬರಿ ಭಜನಾ ಮಂಡಳಿ’ ಯನ್ನು ತೋಟತ್ತಾಡಿಯಲ್ಲಿ ಕಟ್ಟಿದರು. ಊರು ಬಿಟ್ಟು ಕೆಲಸದ ನಿಮಿತ್ತವಾಗಿ ಬೆಂಗಳೂರಿಗೆ ಹೋದವರು ಅಲ್ಲೂ ‘ಮಕರ ಶ್ರೀ ಭಜನಾ ಮಂಡಳಿ’ ಯನ್ನು ಹೊಸಳ್ಳಿಯ ಬಾಲಗಂಗಾಧೇಶ್ವರ ದೇವಸ್ಥಾನದಲ್ಲಿ ರಚಿಸಿದರು ಹಾಗೂ ಮದು ಬಂಗೇರ ಕಲ್ಲಡ್ಕ ಮತ್ತು ಕಿಶನ್ ಪೂಜಾರಿ ಯವರೊಂದಿಗೆ ಕೂಡಿ ‘ಯುವವಾಹಿನಿ ಬೆಂಗಳೂರು ಘಟಕ’ ವನ್ನು ಸ್ಥಾಪಿಸಿ ಅದರ ಸಾಂಸ್ಕೃತಿಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು.

ರಂಗಪ್ರೇಮಿಯ ಮನದ ಮಾತು:

“ನಾನು ಬರಹಗಾರನಲ್ಲ ಅಭಿಮಾನಿ.ಕಲಾವಿದರ ಪ್ರೀತಿ ಅಭಿಮಾವೇ ನನ್ನ ಬರಹದ ಘಳಿಕೆ ಮತ್ತು ಶ್ರೀರಕ್ಷೆ.ಕಲಾಕ್ಷೇತ್ರದಲ್ಲಿ ನಿರಂತರ ಸೇವೆಗೈಯುವ ಕಲಾವಿದರನ್ನು ಸಮಾಜಕ್ಕೆ ಪರಿಚಯಿಸುವುದೇ ನನ್ನ ಉದ್ದೇಶ.ಇದು ನನ್ನ ಸಾಧನೆಯಲ್ಲ ಕೇವಲ ಒಂದು ಪ್ರಯತ್ನ, ತನ್ನ ಪ್ರತಿ ಕಾರ್ಯದಲ್ಲೂ ಬೆನ್ನು ತಟ್ಟಿ ಪ್ರೋತ್ಸಾಹಿಸಿದವರು ಆತ್ಮೀಯ ಮಿತ್ರ ಸುಧೀರ್ ಎಸ್.ಕೆ ಮತ್ತು ಪ್ರಸಾದ್ ಕಲ್ಲಾಜೆ ” ಎನ್ನುತ್ತಾರೆ ತುಳುರಂಗ ಪ್ರೇಮಿ.

ರಂಗಭೂಮಿಯಲ್ಲಿನ ಪರಿಣಿತಿ:

ತಾನು ಒಬ್ಬ ಕಲಾವಿದನಾಗಬೇಕೆಂಬ ಆಸೆ ಹೊಂದಿದ್ದ ಇವರು ಅವಕಾಶವಿಲ್ಲದ ಕಾರಣ ಶಬರಿ ತಂಡದ ಯುವಕರಿಗೆ ಅಭಿನಯವನ್ನು ಕಲಿಸಿ ಕಿರಣ್ ಕಕ್ಕಿಂಜೆಯವರ ಸಹಕಾರದಿಂದ ” ಬುದ್ಧಿ ಬನ್ನಗ” ಎಂಬ ತುಳು ನಾಟಕವನ್ನು ಸ್ವತಃ ಬರೆದು ನಿರ್ದೇಶಿಸಿ ಮೊದಲ ಪ್ರಯತ್ನದಲ್ಲೇ ಯಶಸ್ಸನ್ನು ಪಡೆದರು. ನಂತರ ‘ಗೌಜಿ ಗಮ್ಮತ್ತ್’ , ‘ಎನ್ನ ತಂಗಡಿ’ , ‘ಮಲ್ಲಸ್ತಿಕೆದ ಮರ್ಮಾಲ್’ , ‘ಒಂಜೆಕ್ ಒಂಜರೆ ಮಲ್ಪೊಚ್ಚಿ’ ನಾಟಕಗಳಿಗೆ ಸಾಹಿತ್ಯ ನೀಡಿ ನಿರ್ದೇಶಿಸಿ ನಟಿಸಿದ್ದಾರೆ. ಹಾಗೂ ಮೊದಲಬಾರಿಗೆ ಇವರು ‘ಗೋಲ್ಮಾಲ್’ ಎಂಬ ತುಳು ಚಲನಚಿತ್ರದಲ್ಲಿಯೂ ನವೀನ್ ಡಿ ಪಡಿಲ್ ರವರೊಡನೆ ನಟಿಸಿದ್ದಾರೆ. ತುಳುರಂಗಭೂಮಿ ಕಲಾವಿದರ ಸಲುವಾಗಿ ಇವರು ‘ಕಲಾವಿದೆರೆ ಕಡಲ್’ ವಾಟ್ಸಾಪ್ ಗ್ರೂಪ್ ರಚಿಸಿ ಒತ್ತಡದ ಕೆಲಸದ ಮಧ್ಯೆಯೂ ಕಲಾವಿದರಿಗೆ ತನ್ನ ಬರಹದ ಮೂಲಕ ಪ್ರೋತ್ಸಾಹಿಸುತ್ತಿದ್ದಾರೆ.

ಸಂದ ಗೌರವಗಳು:

ಇವರ ನಿಸ್ವಾರ್ಥ ಸೇವೆಯನ್ನು ಗಮನಿಸಿ ಯುವವಾಹಿನಿ ಬೆಂಗಳೂರು ಘಟಕದ ವತಿಯಿಂದ ಸನ್ಮಾನ ,ಮಡಿಲು ಸಂಸ್ಥೆಯಿಂದ ‘ಮಡಿಲು ಪುರಸ್ಕಾರ’, ತೆಲಿಕೆದ ತೆನಾಲಿ ಕಾರ್ಲ ತಂಡದಿಂದ “ಕಲಾವಿದೆರೆ ಕಣ್ಮಣಿ” ಎಂಬ ಬಿರುದು ಹೀಗೆ ಹತ್ತು ಹಲವು ಕಡೆ ಇವರನ್ನು ಸನ್ಮಾನಿಸಲಾಗಿದೆ.

ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ತಾನು ಹುಟ್ಟಿದ ಮಣ್ಣಿಗೆ ಋಣಿಯಾಗಿರು ಎಂಬಂತೆ, ಸದಾ ಮುಗುಳ್ನಗೆಯ ಮಾಲೀಕನಾಗಿರುವ ಇವರು ಪ್ರಸ್ತುತ ಸೌದಿ ಅರೇಬಿಯಾದಲ್ಲಿ ಕಾರ್ಯನಿರತರಾಗಿದ್ದರೂ ತುಳುನಾಡು ಹಾಗೂ ತುಳು ಭಾಷೆಯ ಮೇಲಿನ ಇವರ ಅಭಿಮಾನವನ್ನು ಒಂಚೂರು ಕುಗ್ಗಿಸದೆ ,ರಂಗಭೂಮಿ ಕಲಾವಿದರಿಗೂ ಈ ಸಮಾಜದಲ್ಲಿ ಉನ್ನತ ಸ್ಥಾನ ಸಿಗಬೇಕೆಂಬ ನಿಮ್ಮ ನಿಸ್ವಾರ್ಥ ಭಾವನೆಗೆ ನಾವೆಂದಿಗೂ ಚಿರಋಣಿ. ನಿಮ್ಮ ಈ ರಂಗಪ್ರೇಮ ಶಾಶ್ವತವಾಗಿದ್ದು ಇನ್ನಷ್ಟು ಪ್ರತಿಭೆಗಳು ನಿಮ್ಮ ಮೂಲಕ ಬೆಳಕಿಗೆ ಬರಲಿ ಎಂದು ಆಶಿಸುತ್ತಾ ಶ್ರೀ ನಾರಾಯಣ ಗುರುಗಳ ಆಶೀರ್ವಾದ ಕೋಟಿ – ಚೆನ್ನಯರ ಅನುಗ್ರಹ ಸದಾ ನಿಮ್ಮ ಮೇಲೆ ಇರಲಿ.

ಬರಹ: ಯಕ್ಷಿತಾ ಆರ್ ,ಮೂಡುಕೊಣಾಜೆ


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »