TOP STORIES:

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿರಾಜ್ಯೋತ್ಸವಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದಕಮಲ್ನಂತರ ಹಿಂದೆ ತಿರುಗಿ ನೋಡಿಲ್ಲ. ಕನ್ನಡ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸುಧೆ, ಕನ್ನಡತುಳು ಸಮ್ಮೇಳನಗಳು, ಹೀಗೆ ಎಲ್ಲಾಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಬಹರೈನ್ ಉತ್ಕೃಷ್ಟ ನಿರೂಪಕನೆಂಬ ಹೆಗ್ಗಳಿಕೆಗಳ ಮಧ್ಯೆ ಬಹರೈನ್ರೇಡಿಯೋದಲ್ಲಿಕಸ್ತೂರಿ ಕನ್ನಡವೆಂಬ ಕನ್ನಡ ಎಫ್.ಎಂ. ರೇಡಿಯೋವನ್ನೂ ಪ್ರಾರಂಭಿಸಿದ ಕೀರ್ತಿ ಇವರದ್ದು. ಇದೇ ಎಫ್.ಎಂ. ನಲ್ಲಿ  ಜಯಮಾಲಾ ಹಾಗೂ ಆಗ ಕಾರ್ಮಿಕ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರನ್ನು ಸಂದರ್ಶಿಸಿದ್ದರು. ಇವರ ಸ್ಪಷ್ಟ ಹಾಗೂಶುದ್ಧ ಕನ್ನಡದ ನಿರೂಪಣೆಯನ್ನು ಮೆಚ್ಚಿಕೊಂಡವರ ಸಾಲಿನಲ್ಲಿ ಶ್ರೀ ಬಿ. ಎಸ್. ಯೆಡಿಯೂರಪ್ಪ, ಶ್ರೀ ಅಭಯಚಂದ್ರ ಜೈನ್, ಕ್ಯಾಪ್ಟನ್ಗಣೇಶ್ ಕಾರ್ಣಿಕ್, ಮುಂತಾದವರು ಸೇರುತ್ತಾರೆ.

ಕರಾವಳಿ ಜಿಲ್ಲೆಗಳ ಕೆಲವೊಂದು ಕುಟುಂಬಗಳಿಗಾಗಿ ದ್ವೀಪದಲ್ಲಿ ಧನ ಸಂಗ್ರಹಿಸಿ ನೆರವಾದ ಹಿನ್ನೆಲೆಯೂ ಇವರದ್ದಾಗಿದೆ. ಕನ್ನಡ ಭಾಷೆಹಾಗೂ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿ, ಕನ್ನಡದ ಕಂಪನ್ನು ಬಹರೈನ್ ದೇಶದಲ್ಲಿ ಪಸರಿಸುವಲ್ಲಿ ಇವರ ಕೊಡುಗೆದೊಡ್ಡಮಟ್ಟದಲ್ಲಿದೆ. ಕನ್ನಡ ಸಿನೆಮಾ ರಂಗದಲ್ಲಿ ಬಹಳಷ್ಟು ಮೇರು ಕಲಾವಿದರೊಡನೆ ಇವರಿಗೆ ನಿಕಟ ಸಂಪರ್ಕವಿದೆ.

ಕಳೆದ ದಶಕದಲ್ಲಿ ಇವರು ಗೆಳೆಯರೊಡನೆ ಹುಟ್ಟು ಹಾಕಿದನಮ್ಮ ಕನ್ನಡವೇದಿಕೆಯು ಬಹರೈನ್ ನಲ್ಲಿ ಉತ್ಕೃಷ್ಟ ಮಟ್ಟದ ಕನ್ನಡಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದೆ. ಸ್ಯಾಂಡಲ್ ವುಡ್ ಶ್ರೀನಾಥ್, ನೆನಪಿರಲಿ ಪ್ರೇಮ್, ಗುರು ಕಿರಣ್, ದರ್ಶನ್, ರವಿ ಶಂಕರ್, ಅನುರಾಧ ಭಟ್ ರಂತಹಾ ದಿಗ್ಗಜರನ್ನು ಆಹ್ವಾನಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಡದಿ ಸೋನಲ್, ಮಕ್ಕಳಾದ ರಿಶಾನ್ ಮತ್ತು ಚಿರಾಗ್ ರನ್ನೊಳಗೊಂಡ ಸುಖೀ ಸಂಸಾರ ಇವರದ್ದು. ಬಹರೈನ್ ನಿಂದದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಕನ್ನಡಿಗ ಇವರು.

ಅಭಿನಂದನೆಗಳು ಕಮಲ್. ಬಹರೈನ್ ಕನ್ನಡಿಗರ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು. ಇತಿಹಾಸ ತಾನಾಗಿನಿರ್ಮಾಣವಾಗುವದಿಲ್ಲ. ಸಾಧಕರಿಂದ ನಿರ್ಮಿಸಲ್ಪಡುತ್ತದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »