TOP STORIES:

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿರಾಜ್ಯೋತ್ಸವಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದಕಮಲ್ನಂತರ ಹಿಂದೆ ತಿರುಗಿ ನೋಡಿಲ್ಲ. ಕನ್ನಡ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸುಧೆ, ಕನ್ನಡತುಳು ಸಮ್ಮೇಳನಗಳು, ಹೀಗೆ ಎಲ್ಲಾಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಬಹರೈನ್ ಉತ್ಕೃಷ್ಟ ನಿರೂಪಕನೆಂಬ ಹೆಗ್ಗಳಿಕೆಗಳ ಮಧ್ಯೆ ಬಹರೈನ್ರೇಡಿಯೋದಲ್ಲಿಕಸ್ತೂರಿ ಕನ್ನಡವೆಂಬ ಕನ್ನಡ ಎಫ್.ಎಂ. ರೇಡಿಯೋವನ್ನೂ ಪ್ರಾರಂಭಿಸಿದ ಕೀರ್ತಿ ಇವರದ್ದು. ಇದೇ ಎಫ್.ಎಂ. ನಲ್ಲಿ  ಜಯಮಾಲಾ ಹಾಗೂ ಆಗ ಕಾರ್ಮಿಕ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರನ್ನು ಸಂದರ್ಶಿಸಿದ್ದರು. ಇವರ ಸ್ಪಷ್ಟ ಹಾಗೂಶುದ್ಧ ಕನ್ನಡದ ನಿರೂಪಣೆಯನ್ನು ಮೆಚ್ಚಿಕೊಂಡವರ ಸಾಲಿನಲ್ಲಿ ಶ್ರೀ ಬಿ. ಎಸ್. ಯೆಡಿಯೂರಪ್ಪ, ಶ್ರೀ ಅಭಯಚಂದ್ರ ಜೈನ್, ಕ್ಯಾಪ್ಟನ್ಗಣೇಶ್ ಕಾರ್ಣಿಕ್, ಮುಂತಾದವರು ಸೇರುತ್ತಾರೆ.

ಕರಾವಳಿ ಜಿಲ್ಲೆಗಳ ಕೆಲವೊಂದು ಕುಟುಂಬಗಳಿಗಾಗಿ ದ್ವೀಪದಲ್ಲಿ ಧನ ಸಂಗ್ರಹಿಸಿ ನೆರವಾದ ಹಿನ್ನೆಲೆಯೂ ಇವರದ್ದಾಗಿದೆ. ಕನ್ನಡ ಭಾಷೆಹಾಗೂ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿ, ಕನ್ನಡದ ಕಂಪನ್ನು ಬಹರೈನ್ ದೇಶದಲ್ಲಿ ಪಸರಿಸುವಲ್ಲಿ ಇವರ ಕೊಡುಗೆದೊಡ್ಡಮಟ್ಟದಲ್ಲಿದೆ. ಕನ್ನಡ ಸಿನೆಮಾ ರಂಗದಲ್ಲಿ ಬಹಳಷ್ಟು ಮೇರು ಕಲಾವಿದರೊಡನೆ ಇವರಿಗೆ ನಿಕಟ ಸಂಪರ್ಕವಿದೆ.

ಕಳೆದ ದಶಕದಲ್ಲಿ ಇವರು ಗೆಳೆಯರೊಡನೆ ಹುಟ್ಟು ಹಾಕಿದನಮ್ಮ ಕನ್ನಡವೇದಿಕೆಯು ಬಹರೈನ್ ನಲ್ಲಿ ಉತ್ಕೃಷ್ಟ ಮಟ್ಟದ ಕನ್ನಡಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದೆ. ಸ್ಯಾಂಡಲ್ ವುಡ್ ಶ್ರೀನಾಥ್, ನೆನಪಿರಲಿ ಪ್ರೇಮ್, ಗುರು ಕಿರಣ್, ದರ್ಶನ್, ರವಿ ಶಂಕರ್, ಅನುರಾಧ ಭಟ್ ರಂತಹಾ ದಿಗ್ಗಜರನ್ನು ಆಹ್ವಾನಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಡದಿ ಸೋನಲ್, ಮಕ್ಕಳಾದ ರಿಶಾನ್ ಮತ್ತು ಚಿರಾಗ್ ರನ್ನೊಳಗೊಂಡ ಸುಖೀ ಸಂಸಾರ ಇವರದ್ದು. ಬಹರೈನ್ ನಿಂದದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಕನ್ನಡಿಗ ಇವರು.

ಅಭಿನಂದನೆಗಳು ಕಮಲ್. ಬಹರೈನ್ ಕನ್ನಡಿಗರ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು. ಇತಿಹಾಸ ತಾನಾಗಿನಿರ್ಮಾಣವಾಗುವದಿಲ್ಲ. ಸಾಧಕರಿಂದ ನಿರ್ಮಿಸಲ್ಪಡುತ್ತದೆ.


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »