TOP STORIES:

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿರಾಜ್ಯೋತ್ಸವಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದಕಮಲ್ನಂತರ ಹಿಂದೆ ತಿರುಗಿ ನೋಡಿಲ್ಲ. ಕನ್ನಡ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸುಧೆ, ಕನ್ನಡತುಳು ಸಮ್ಮೇಳನಗಳು, ಹೀಗೆ ಎಲ್ಲಾಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಬಹರೈನ್ ಉತ್ಕೃಷ್ಟ ನಿರೂಪಕನೆಂಬ ಹೆಗ್ಗಳಿಕೆಗಳ ಮಧ್ಯೆ ಬಹರೈನ್ರೇಡಿಯೋದಲ್ಲಿಕಸ್ತೂರಿ ಕನ್ನಡವೆಂಬ ಕನ್ನಡ ಎಫ್.ಎಂ. ರೇಡಿಯೋವನ್ನೂ ಪ್ರಾರಂಭಿಸಿದ ಕೀರ್ತಿ ಇವರದ್ದು. ಇದೇ ಎಫ್.ಎಂ. ನಲ್ಲಿ  ಜಯಮಾಲಾ ಹಾಗೂ ಆಗ ಕಾರ್ಮಿಕ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರನ್ನು ಸಂದರ್ಶಿಸಿದ್ದರು. ಇವರ ಸ್ಪಷ್ಟ ಹಾಗೂಶುದ್ಧ ಕನ್ನಡದ ನಿರೂಪಣೆಯನ್ನು ಮೆಚ್ಚಿಕೊಂಡವರ ಸಾಲಿನಲ್ಲಿ ಶ್ರೀ ಬಿ. ಎಸ್. ಯೆಡಿಯೂರಪ್ಪ, ಶ್ರೀ ಅಭಯಚಂದ್ರ ಜೈನ್, ಕ್ಯಾಪ್ಟನ್ಗಣೇಶ್ ಕಾರ್ಣಿಕ್, ಮುಂತಾದವರು ಸೇರುತ್ತಾರೆ.

ಕರಾವಳಿ ಜಿಲ್ಲೆಗಳ ಕೆಲವೊಂದು ಕುಟುಂಬಗಳಿಗಾಗಿ ದ್ವೀಪದಲ್ಲಿ ಧನ ಸಂಗ್ರಹಿಸಿ ನೆರವಾದ ಹಿನ್ನೆಲೆಯೂ ಇವರದ್ದಾಗಿದೆ. ಕನ್ನಡ ಭಾಷೆಹಾಗೂ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿ, ಕನ್ನಡದ ಕಂಪನ್ನು ಬಹರೈನ್ ದೇಶದಲ್ಲಿ ಪಸರಿಸುವಲ್ಲಿ ಇವರ ಕೊಡುಗೆದೊಡ್ಡಮಟ್ಟದಲ್ಲಿದೆ. ಕನ್ನಡ ಸಿನೆಮಾ ರಂಗದಲ್ಲಿ ಬಹಳಷ್ಟು ಮೇರು ಕಲಾವಿದರೊಡನೆ ಇವರಿಗೆ ನಿಕಟ ಸಂಪರ್ಕವಿದೆ.

ಕಳೆದ ದಶಕದಲ್ಲಿ ಇವರು ಗೆಳೆಯರೊಡನೆ ಹುಟ್ಟು ಹಾಕಿದನಮ್ಮ ಕನ್ನಡವೇದಿಕೆಯು ಬಹರೈನ್ ನಲ್ಲಿ ಉತ್ಕೃಷ್ಟ ಮಟ್ಟದ ಕನ್ನಡಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದೆ. ಸ್ಯಾಂಡಲ್ ವುಡ್ ಶ್ರೀನಾಥ್, ನೆನಪಿರಲಿ ಪ್ರೇಮ್, ಗುರು ಕಿರಣ್, ದರ್ಶನ್, ರವಿ ಶಂಕರ್, ಅನುರಾಧ ಭಟ್ ರಂತಹಾ ದಿಗ್ಗಜರನ್ನು ಆಹ್ವಾನಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಡದಿ ಸೋನಲ್, ಮಕ್ಕಳಾದ ರಿಶಾನ್ ಮತ್ತು ಚಿರಾಗ್ ರನ್ನೊಳಗೊಂಡ ಸುಖೀ ಸಂಸಾರ ಇವರದ್ದು. ಬಹರೈನ್ ನಿಂದದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಕನ್ನಡಿಗ ಇವರು.

ಅಭಿನಂದನೆಗಳು ಕಮಲ್. ಬಹರೈನ್ ಕನ್ನಡಿಗರ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು. ಇತಿಹಾಸ ತಾನಾಗಿನಿರ್ಮಾಣವಾಗುವದಿಲ್ಲ. ಸಾಧಕರಿಂದ ನಿರ್ಮಿಸಲ್ಪಡುತ್ತದೆ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »