TOP STORIES:

FOLLOW US

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿರಾಜ್ಯೋತ್ಸವಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದಕಮಲ್ನಂತರ ಹಿಂದೆ ತಿರುಗಿ ನೋಡಿಲ್ಲ. ಕನ್ನಡ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸುಧೆ, ಕನ್ನಡತುಳು ಸಮ್ಮೇಳನಗಳು, ಹೀಗೆ ಎಲ್ಲಾಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಬಹರೈನ್ ಉತ್ಕೃಷ್ಟ ನಿರೂಪಕನೆಂಬ ಹೆಗ್ಗಳಿಕೆಗಳ ಮಧ್ಯೆ ಬಹರೈನ್ರೇಡಿಯೋದಲ್ಲಿಕಸ್ತೂರಿ ಕನ್ನಡವೆಂಬ ಕನ್ನಡ ಎಫ್.ಎಂ. ರೇಡಿಯೋವನ್ನೂ ಪ್ರಾರಂಭಿಸಿದ ಕೀರ್ತಿ ಇವರದ್ದು. ಇದೇ ಎಫ್.ಎಂ. ನಲ್ಲಿ  ಜಯಮಾಲಾ ಹಾಗೂ ಆಗ ಕಾರ್ಮಿಕ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರನ್ನು ಸಂದರ್ಶಿಸಿದ್ದರು. ಇವರ ಸ್ಪಷ್ಟ ಹಾಗೂಶುದ್ಧ ಕನ್ನಡದ ನಿರೂಪಣೆಯನ್ನು ಮೆಚ್ಚಿಕೊಂಡವರ ಸಾಲಿನಲ್ಲಿ ಶ್ರೀ ಬಿ. ಎಸ್. ಯೆಡಿಯೂರಪ್ಪ, ಶ್ರೀ ಅಭಯಚಂದ್ರ ಜೈನ್, ಕ್ಯಾಪ್ಟನ್ಗಣೇಶ್ ಕಾರ್ಣಿಕ್, ಮುಂತಾದವರು ಸೇರುತ್ತಾರೆ.

ಕರಾವಳಿ ಜಿಲ್ಲೆಗಳ ಕೆಲವೊಂದು ಕುಟುಂಬಗಳಿಗಾಗಿ ದ್ವೀಪದಲ್ಲಿ ಧನ ಸಂಗ್ರಹಿಸಿ ನೆರವಾದ ಹಿನ್ನೆಲೆಯೂ ಇವರದ್ದಾಗಿದೆ. ಕನ್ನಡ ಭಾಷೆಹಾಗೂ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿ, ಕನ್ನಡದ ಕಂಪನ್ನು ಬಹರೈನ್ ದೇಶದಲ್ಲಿ ಪಸರಿಸುವಲ್ಲಿ ಇವರ ಕೊಡುಗೆದೊಡ್ಡಮಟ್ಟದಲ್ಲಿದೆ. ಕನ್ನಡ ಸಿನೆಮಾ ರಂಗದಲ್ಲಿ ಬಹಳಷ್ಟು ಮೇರು ಕಲಾವಿದರೊಡನೆ ಇವರಿಗೆ ನಿಕಟ ಸಂಪರ್ಕವಿದೆ.

ಕಳೆದ ದಶಕದಲ್ಲಿ ಇವರು ಗೆಳೆಯರೊಡನೆ ಹುಟ್ಟು ಹಾಕಿದನಮ್ಮ ಕನ್ನಡವೇದಿಕೆಯು ಬಹರೈನ್ ನಲ್ಲಿ ಉತ್ಕೃಷ್ಟ ಮಟ್ಟದ ಕನ್ನಡಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದೆ. ಸ್ಯಾಂಡಲ್ ವುಡ್ ಶ್ರೀನಾಥ್, ನೆನಪಿರಲಿ ಪ್ರೇಮ್, ಗುರು ಕಿರಣ್, ದರ್ಶನ್, ರವಿ ಶಂಕರ್, ಅನುರಾಧ ಭಟ್ ರಂತಹಾ ದಿಗ್ಗಜರನ್ನು ಆಹ್ವಾನಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಡದಿ ಸೋನಲ್, ಮಕ್ಕಳಾದ ರಿಶಾನ್ ಮತ್ತು ಚಿರಾಗ್ ರನ್ನೊಳಗೊಂಡ ಸುಖೀ ಸಂಸಾರ ಇವರದ್ದು. ಬಹರೈನ್ ನಿಂದದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಕನ್ನಡಿಗ ಇವರು.

ಅಭಿನಂದನೆಗಳು ಕಮಲ್. ಬಹರೈನ್ ಕನ್ನಡಿಗರ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು. ಇತಿಹಾಸ ತಾನಾಗಿನಿರ್ಮಾಣವಾಗುವದಿಲ್ಲ. ಸಾಧಕರಿಂದ ನಿರ್ಮಿಸಲ್ಪಡುತ್ತದೆ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »