TOP STORIES:

FOLLOW US

“ಕಸ್ತೂರಿ ಕನ್ನಡ” ಬಹರೈನ್ ಎಫ್.ಎಂ. ರೇಡಿಯೋ ಕಾರ್ಯಕ್ರಮದ ರೂವಾರಿ ಕಮಲಾಕ್ಷ ಅಮೀನ್ ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ


ಬಹರೈನ್ ದ್ವೀಪ ರಾಷ್ಟ್ರದಲ್ಲಿ ಸುಮಾರು ಮೂರು ದಶಕದಿಂದ ಕನ್ನಡತುಳು ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದ ಶ್ರೀಕಮಲಾಕ್ಷ ಅಮೀನ್ ರವರ ಬಹುಮುಖೀ ಸೇವೆಯನ್ನು ಸರಕಾರವು ಗುರುತಿಸಿ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿರಾಜ್ಯೋತ್ಸವಪ್ರಶಸ್ತಿಯನ್ನು ನೀಡಿ ಗೌರವಿಸಲು ನಿರ್ಧರಿಸಿದೆ. 1991ರಲ್ಲಿ ಬಹರೈನ್ ಗೆ ಬಂದಿದ್ದಕಮಲ್ನಂತರ ಹಿಂದೆ ತಿರುಗಿ ನೋಡಿಲ್ಲ. ಕನ್ನಡ ನಾಟಕಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸುಧೆ, ಕನ್ನಡತುಳು ಸಮ್ಮೇಳನಗಳು, ಹೀಗೆ ಎಲ್ಲಾಕಾರ್ಯಕ್ರಮಗಳಲ್ಲೂ ತನ್ನನ್ನು ತೊಡಗಿಸಿಕೊಂಡಿದ್ದರು. ಬಹರೈನ್ ಉತ್ಕೃಷ್ಟ ನಿರೂಪಕನೆಂಬ ಹೆಗ್ಗಳಿಕೆಗಳ ಮಧ್ಯೆ ಬಹರೈನ್ರೇಡಿಯೋದಲ್ಲಿಕಸ್ತೂರಿ ಕನ್ನಡವೆಂಬ ಕನ್ನಡ ಎಫ್.ಎಂ. ರೇಡಿಯೋವನ್ನೂ ಪ್ರಾರಂಭಿಸಿದ ಕೀರ್ತಿ ಇವರದ್ದು. ಇದೇ ಎಫ್.ಎಂ. ನಲ್ಲಿ  ಜಯಮಾಲಾ ಹಾಗೂ ಆಗ ಕಾರ್ಮಿಕ ಸಚಿವರಾಗಿದ್ದ ಆಸ್ಕರ್ ಫೆರ್ನಾಂಡಿಸ್ ರನ್ನು ಸಂದರ್ಶಿಸಿದ್ದರು. ಇವರ ಸ್ಪಷ್ಟ ಹಾಗೂಶುದ್ಧ ಕನ್ನಡದ ನಿರೂಪಣೆಯನ್ನು ಮೆಚ್ಚಿಕೊಂಡವರ ಸಾಲಿನಲ್ಲಿ ಶ್ರೀ ಬಿ. ಎಸ್. ಯೆಡಿಯೂರಪ್ಪ, ಶ್ರೀ ಅಭಯಚಂದ್ರ ಜೈನ್, ಕ್ಯಾಪ್ಟನ್ಗಣೇಶ್ ಕಾರ್ಣಿಕ್, ಮುಂತಾದವರು ಸೇರುತ್ತಾರೆ.

ಕರಾವಳಿ ಜಿಲ್ಲೆಗಳ ಕೆಲವೊಂದು ಕುಟುಂಬಗಳಿಗಾಗಿ ದ್ವೀಪದಲ್ಲಿ ಧನ ಸಂಗ್ರಹಿಸಿ ನೆರವಾದ ಹಿನ್ನೆಲೆಯೂ ಇವರದ್ದಾಗಿದೆ. ಕನ್ನಡ ಭಾಷೆಹಾಗೂ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರಸ್ತುತಪಡಿಸಿ, ಕನ್ನಡದ ಕಂಪನ್ನು ಬಹರೈನ್ ದೇಶದಲ್ಲಿ ಪಸರಿಸುವಲ್ಲಿ ಇವರ ಕೊಡುಗೆದೊಡ್ಡಮಟ್ಟದಲ್ಲಿದೆ. ಕನ್ನಡ ಸಿನೆಮಾ ರಂಗದಲ್ಲಿ ಬಹಳಷ್ಟು ಮೇರು ಕಲಾವಿದರೊಡನೆ ಇವರಿಗೆ ನಿಕಟ ಸಂಪರ್ಕವಿದೆ.

ಕಳೆದ ದಶಕದಲ್ಲಿ ಇವರು ಗೆಳೆಯರೊಡನೆ ಹುಟ್ಟು ಹಾಕಿದನಮ್ಮ ಕನ್ನಡವೇದಿಕೆಯು ಬಹರೈನ್ ನಲ್ಲಿ ಉತ್ಕೃಷ್ಟ ಮಟ್ಟದ ಕನ್ನಡಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದೆ. ಸ್ಯಾಂಡಲ್ ವುಡ್ ಶ್ರೀನಾಥ್, ನೆನಪಿರಲಿ ಪ್ರೇಮ್, ಗುರು ಕಿರಣ್, ದರ್ಶನ್, ರವಿ ಶಂಕರ್, ಅನುರಾಧ ಭಟ್ ರಂತಹಾ ದಿಗ್ಗಜರನ್ನು ಆಹ್ವಾನಿಸಿ ಕಾರ್ಯಕ್ರಮ ಹಮ್ಮಿಕೊಂಡಿದೆ.

ಮಡದಿ ಸೋನಲ್, ಮಕ್ಕಳಾದ ರಿಶಾನ್ ಮತ್ತು ಚಿರಾಗ್ ರನ್ನೊಳಗೊಂಡ ಸುಖೀ ಸಂಸಾರ ಇವರದ್ದು. ಬಹರೈನ್ ನಿಂದದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಪ್ರಥಮ ಕನ್ನಡಿಗ ಇವರು.

ಅಭಿನಂದನೆಗಳು ಕಮಲ್. ಬಹರೈನ್ ಕನ್ನಡಿಗರ ಇತಿಹಾಸದಲ್ಲಿ ಇದೊಂದು ಮೈಲಿಗಲ್ಲು. ಇತಿಹಾಸ ತಾನಾಗಿನಿರ್ಮಾಣವಾಗುವದಿಲ್ಲ. ಸಾಧಕರಿಂದ ನಿರ್ಮಿಸಲ್ಪಡುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »