TOP STORIES:

FOLLOW US

ಕಾಂತಬಾರೆ ಬುದಾಬಾರೆ ತುಳುನಾಡ ಶಕ್ತಿಗಳ ಕಥೆ


ಮುಲ್ಕಿ ಸೀಮೆಯ ಅವಳಿ ವೀರರಾದ ಕಾಂತಬಾರೆ ಬೂದ ಬಾರೆಯರು ಕೋಟಿ ಚೆನ್ನಯರ ನಂತರದ ಕಾಲ ಘಟ್ಟದಲ್ಲಿ ಹುಟ್ಟಿ ತಮ್ಮದೇಯಾದ ಇತಿಹಾಸ ಸೃಷ್ಟಿಸಿದರು.ಮುಲ್ಕಿ ಸೀಮೆಯ ಸಾಮಂತರಸರ ಆಳ್ವಿಕೆಯ ಚಂದ್ರರಾಜ ಬಲ್ಲಾಳನು ಮುಲ್ಕಿ ಕೊಲ್ಲೂರಿನ ಸೀಮಂತೂರಿನಲ್ಲಿ ರಾಜ್ಯಭಾರ ಮಾಡಿಕೊಂಡಿದ್ದನು. ಅವನ ಪಟ್ಟದ ರಾಣಿ ಪುಲ್ಲ ಪೆರ್ಗಡ್ತಿ, ಮಕ್ಕಳಿಲ್ಲದ ಇವರು ಸಂತಾನ ಭಾಗ್ಯಕ್ಕಾಗಿ ಕದ್ರಿ ಮಂಜುನಾಥನಿಗೆ ಹರಕೆ ಸಲ್ಲಿಸಲು ಪರಿಹಾರ ಸಮೇತರಾಗಿ ದಂಡಿಗೆಯಲ್ಲಿ ಹೋಗುವಾಗ ಸುರತ್ಕಲ್ ಕಜೇರಿ ಎಂಬಲ್ಲಿ ಹೊಲ ಕಾಯುತ್ತಿದ್ದ ಏಳರ ಹರೆಯದ ಬಿಲ್ಲವ ಬಾಲಕಿ ಆಚು ಮಾತಿನ ಚತುರೋಕ್ತಿಗಳಿಗೆ ಮನಸೋತರು. ಹಿಂದಿರುಗಿ ಬರುವಾಗ ಅವಳ ಹಿರಿಯರ ಮನ ಒಪ್ಪಿಸಿ ಆಕೆಯನ್ನು ತಮ್ಮೊಂದಿಗೆ ಬೀಡಿಗೆ ಕರೆ ತರುತ್ತಾರೆ. ಆಕೆಯ ಜೊತೆಯಲ್ಲಿ ಬಂದ ಉಲ್ಲಾಯ ದೈವಕ್ಕೆ ಕೆಳಗಿನ ಗುಡ್ಡೆ ಮನೆಯಲ್ಲಿ ಸ್ಥಾನಕಟ್ಟಿ ಆರಾಧನೆ ಸಲ್ಲಿಸುತ್ತಾರೆ. ಮುಂದೆ ಆಕೆಯನ್ನು ತನ್ನ ಒಕ್ಕಲಾದ ವರಪಾಡಿ ಕುಂದಯ ಬಾರೆಗೆ ಮದುವೆ ಮಾಡಿ ಕೋಡುತ್ತಾರೆ. ಆಚು ಗರ್ಭವತಿಯಾಗಿ ಸೀಮಂತದ ಬಳಿಕ ತವರಿಗೆ ಹೋಗುವ ದಾರಿಯಲ್ಲಿ ಕೊಲ್ಲೂರಿನ ತಾಕಟೆ ಮರದ ಬಳಿ ಹೆರಿಗೆ ನೋವು ಕಾಣಿಸಿಕೊಂಡು ಅಲ್ಲಯೇ ದೈವಾಂಶ ಸಂಭೂತರಾದ ಅವಳಿ ಮಕ್ಕಳಿಗೆ ಜನ್ಮ ನೀಡುತ್ತಾಳೆ, ತಾಕಟೆ ಮರಕ್ಕೆ ತೊಟ್ಟಿಲು ಕಟ್ಟಿ ಶಿಶುಗಳನ್ನು ತೂಗುತ್ತಾಳೆ, ಸುದ್ದಿ ತಿಳಿದ ಪೆರ್ಗಡ್ತಿ, ಬಾಣಂತಿ & ಮಕ್ಕಳನ್ನು ಬೀಡಿಗೆ ಕರೆದೊಯ್ಯುತ್ತಾಳೆ. ಕೆಲವು ದಿನಗಳಲ್ಲಿ ಆಚು ಕೈಲಾಸವಾಸಿಯಾಗುತ್ತಾಳೆ. ರಾಣಿಯು ಅವಳಿ ಮಕ್ಕಳಿಗೆ ಕಾಂತಾಬಾರೆ ಬೂದಬಾರೆ ಎಂದು ಹೆಸರಿಟ್ಟು ಅಕ್ಕರೆಯಿಂದ ಸಲಹುತ್ತಾರೆ.

ನಂತರದಲ್ಲಿ ಪೆರ್ಗಡ್ತಿಗೂ ಮಕ್ಕಳಾಗುತ್ತದೆ. ಅವಳಿ ಮಕ್ಕಳು ಅಂದಿನ ಪ್ರಸಿದ್ಥ ಗುರುಕುಲವಾಗಿದ್ದ ಹಳೆಯಂಗಡಿ ಹತ್ತಿರದ ದೈಬಿತ್ತಿಲ್ (ಸಸಿಹಿತ್ತಿಲು) ಸಾಮಂತ ಗರಡಿಯಲ್ಲಿ ಯುದ್ಥ ವಿದ್ಯಾ ಪಾರಂಗತರಾಗುತ್ತಾರೆ. ಪ್ರಾಯಬದ್ಥರಾಗಿ ಮುಲ್ಕಿ ಸೀಮೆಯ ಗಡಿ ರಕ್ಷಣೆ ಮಾಡುತ್ತಾ, ಶತ್ರುಗಳ ತಂಟೆ ನಿವಾರಿಸುತ್ತಾ ಅರಸರ ಎಡಬಲವಾಗುತ್ತಾರೆ. ಮಾಗಣೆಯಲ್ಲಿ ಹೊಲಗಳನ್ನು ನಿರ್ಮಿಸಿ ಕೃಷಿ ಕಾಯಕ ಮಾಡಿ ಇತರರಿಗೂ ನೆರವಾಗುತ್ತಾರೆ. ಸಾಮಂತರ ರಾಜ್ಯಭಾರ ಸುಸೂತ್ರಗೊಳಿಸಲು, ಗುತ್ತು ಭಾವಗಳನ್ನು ನಿರ್ಮಿಸಿ ಪಹರೆಯವರನ್ನು ನೇಮಿಸಿ ಬೊಕ್ಕಸಕ್ಕೆ ಕಂದಾಯ ಸಂದಾಯದ ಏರ್ಪಾಡು ಮಾಡುತ್ತಾರೆ. ಅರಸರಿಂದ ಕೊಲ್ಲೂರ ಗುಡ್ಡೆಯ ಮರ್ದನಾಯ್ಗರಿಗೆ ಗಡಿ ಪಟ್ಟವನ್ನು ಮಾಡಿಸುತ್ತಾರೆ. ಬಲ್ಲಾಳರು ವಿಧಿವಶರಾದಾಗ ಸೀಮೆಯ ಆಡಳಿತದಲ್ಲಿ ಪೆರ್ಗಡ್ತಿಗೆ ಬೆಂಬಲವಾಗಿ ನಿಂತು ಆಕೆಯ ಮಗಳಾದ ದುಗ್ಗುವಿಗೆ ಐಕಳ ಬಾವದ ಬೀಸಬನ್ನಾರನೊಂದಿಗೆ ವಿವಾಹ ಮಾಡಿಸುತ್ತಾರೆ. ರಾಜ್ಯದ ಮೇಲೆ ದಂಡೆತ್ತಿ ಬಂದ ಮೂಡಬಿದಿರೆಯ ಚೌಟ ಅರಸು ಕುಬೇರನನ್ನು ಎದುರಿಸಿ ವೀರ ದುಗ್ಗಣ್ಣ ಕೊಂಡೆಯನ್ನು ಕೊಂದು ಕುಬೇರನನ್ನು ಸೋಲಿಸುತ್ತಾರೆ.

ಪೆರ್ಗಡ್ತಿ ಪುತ್ರ ಚೆನ್ನರಾಯ ಸಾವಂತನಿಗೆ ಪಟ್ಟ ಕಟ್ಟಿಸಿ, ಪರಂಗಡಿ(ಹಳೆಯಂಗಡಿ) ಬಳಿಯ ಪಡು ಪಣಂಬೂರಿನಲ್ಲಿ ನೂತನ ಅರಮನೆ ನಿರ್ಮಿಸಿ, ತಾವು ಸೀಮೆಯ ಕಾವಲಿಗೆ ನಿಲ್ಲುತ್ತಾರೆ. ಕಾರ್ಕಳದ ಬೈಲಸೂಡ ಅರಸರಿಗೆ ಯುದ್ಥದಲ್ಲಿ ನೆರವಾಗಿ ಜಯ ಒದಗಿಸುತ್ತರೆ. ತಮ್ಮ ಜೊತೆಯಲ್ಲಿ ಬಂದ ಉಳ್ಳಾಯ ಜುಮಾದಿ ಸಾರಮಾನ್ಯ ದೈವಗಳಿಗೆ ಉಳೆಪಾಡಿ ಗುಡ್ಡೆಯಲ್ಲಿ ಸ್ಥಾನ ಕಟ್ಟಿಸಿ ಆರಾಧಿಸುತ್ತಾರೆ. ಗುಡ್ಡೆನಾಯ್ಗರಿಗೆ ನೂರ ಒಂದು ಮುಡಿ ಸಾಗುವಳಿ ಜಮೀನು ಮಾಡಿಕೊಡುತ್ತಾರೆ. ಕೆಳಗಿನ ಗುಡ್ಡೆಯಲ್ಲಿ ಕಾಡು ಕಡಿದು ಏಳು ಎಕರೆ ಬಾಕಿಮಾರು ಗದ್ದೆಗೆ ಪುನಾರು ಪುಚ್ಚಾಡಿ ಬೈಲಿನಿಂದ ಕಾಲುವೆ ನಿರ್ಮಿಸಿ ನೀರು ಒದಗಿಸುತ್ತಾರೆ. ಪಡುಪಣಂಬೂರುನಲ್ಲಿಯೂ ಇಂತಹುದೆ ಕೃಷಿ ಕಾಯಕ ಹಾಗೂ ನೀರಾವರಿ ಏರ್ಪಡಿಸುತ್ತಾರೆ.

ಅಸಾಮಾನ್ಯ ವೀರರಾಗಿ ಮೆರೆದ ಈ ಅವಳಿ ವೀರರು ಕಾಯಬಿಟ್ಟು ಮಾಯಸೇರಿದ ಬಳಿಕ ಅವರನ್ನು ಕಾರಣಿಕ ಪುರುಷರೆಂದು ಆರಾಧಿಸಲಾಯಿತು. ಮುಲ್ಕಿ ಉಳೆಪಾಡಿ ಮಿತ್ತಗುಡ್ಡೆಯಲ್ಲಿ ಕಾಂತಬಾರೆ ಬೂದಬಾರೆ ಗರಡಿಯಿದೆ. ಅವರು ಸ್ಥಾಪಿಸಿದ ದೈವಗಳ ಗರಡಿಯಿದೆ. ಗುಡ್ಡೆ ಸಾನದ ಮನೆಯಲ್ಲಿ ಬಾರೆಯರ ಪಟ್ಟದ ಉಂಗುರ& ಅವರು ಯುದ್ಥಗಳಲ್ಲಿ ಬಳಸುತ್ತಿದ್ದ ಬಿಲ್ಲು ಬಾಣಗಳು ಮುಂತಾದ ಮುವತ್ತೆರಡೂ ಆಯುಧಗಳನ್ನು ರಕ್ಷಿಸಿ ಇಡಲಾಗಿದೆ. ಅವರು ಧರಿಸುತ್ತಿದ್ದ ಉಡುಪುಗಳನ್ನು ಈಗಲೂ ಕಾಯ್ದಿರಿಸಲಾಗಿದೆ. ಅವರ ಕಾಲದ ಆಯತಾಕಾರದ ಮರದ ಪೆಟ್ಟಿಗೆಯೂ ಇದೆ. ವರ್ಷಾವಧಿ ಕಾವೇರಿ ಸಂಕ್ರಮಣದಂದು ಇವುಗಳನ್ನು ಹೊರಗೆ ತೆಗೆದು ಪೂಜೆ ಪುರಸ್ಕಾರ ಸಲ್ಲಿಸಲಾಗುತ್ತದೆ. ಅವರ ಬಿಲ್ಲುಗಳು 7ಅಡಿಗಳಷ್ಟು ಉದ್ದವಿರುವುದನ್ನು ಗಮನಿಸಿದರೆ ಈ ಅವಳಿ ವೀರರು ಆಜಾನುಬಾಹು ದೇಹ ಪ್ರಕೃತಿಯವರಾಗಿದ್ದರೆಂದು ತಿಳಿಯುತ್ತದೆ. ಇವರ ಕಾರ್ಯಕ್ಷೇತ್ರದ ಪ್ರದೇಶದ ಉದ್ದಗಲಕ್ಕೂ ಕಂಡು ಬರುವ ಕುರುಗಳು ಅವರ ಪವಾಡ ಸದೃಶ ಸಾಧನೆಗಳ ಅವಶೇಷಗಳು, ಅವರ ಆರಾಧನಾ ಕೇಂದ್ರಗಳು,ಸೀಮಂತೂರು & ಏಳಿಂಜೆಯಲ್ಲಿ ದೊರೆತಿರುವ ವೀರಗಲ್ಲು, ಅವರ ಕುರಿತಾದ ಜನ ಜನಿತ ಕಥೆಗಳು, ಪಾಡ್ದನಗಳೂ ಐತಿಹ್ಯದ ಮಹತ್ವದ ದಾಖಲೆಗಳಾಗಿದೆ.

Credits: ತುಳುನಾಡ ಬಿಲ್ಲವರು
-(ರಮಾನಾಥ ಕೋಟೆಕಾರ್)

ಪೆ.ಟೈ:- ಸುದರ್ಶನ್ ಪೂಜಾರಿ ಶ್ರೀ ದುರ್ಗಾ.

Email us: billavaswarriors@gmail.com

www.billavaswarriors.com


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »