TOP STORIES:

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Related Posts

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ  ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ


Read More »

ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ


Share         ಸುರತ್ಕಲ್‌ನಲ್ಲಿ ರಂಗುರಂಗಿನ ರಂಗೋತ್ಸವ   ನವೀನ್ ಡಿ ಪಡೀಲ್ ಗೆ ರಂಗಚಾವಡಿ ಪ್ರಶಸ್ತಿ ಪ್ರದಾನ   ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್


Read More »

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »