TOP STORIES:

FOLLOW US

ಕಾರು ಅಪಘಾತವಾದರು, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್- ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್


ರಾತ್ರಿ ಬೆಂಗಳೂರಿನಲ್ಲಿ ಕಾರು ಅಪಘಾತ, ಬೆಳಿಗ್ಗೆ ಮನೆಯಲ್ಲಿ ಸಾರ್ವಜನಿಕರ ಭೇಟಿಗೆ ಹಾಜರ್-ಇದು ಕೋಟಾ ಶ್ರೀನಿವಾಸ ಪೂಜಾರಿಯವರ ಪವರ್

ಇತ್ತೀಚಿಗೆ ಖ್ಯಾತ ಮಹರ್ಷಿ ಆನಂದ ಗುರೂಜಿಯವರು ಕೋಟ ಶ್ರೀನಿವಾಸ ಪೂಜಾರಿಯವರ ಬಗ್ಗೆ ಒಂದು ಮಾತು ಹೇಳಿದ್ದರು. “ಬೆಳಿಗ್ಗೆ ಎದ್ದು ಸಚಿವರ ಮನೆಯ ಮುಂದೆ ಹೋದರೆ ಅಲ್ಲಿರುವ ಜನರ ಜಂಗುಳಿಯೇ ಅವರ ಕಾರ್ಯವೈಖರಿಯನ್ನು ಸಾರುತ್ತದೆ.

ಇಂತಹ ಸಚಿವರು ಟಾರ್ಚ್ ಹಾಕಿ ಹುಡುಕಿದರೂ ಸಿಗಲ್ಲ” ಎಂದು. ಈ ಬಾರಿ ಒಂದು ಅಹಿತಕರ ಘಟನೆಯೊಂದಿಗೆ ಅದು ಮತ್ತೆ ಸಾಬೀತಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಅವಿರತ ಸರ್ಕಾರಿ ಸಭೆಗಳನ್ನು ಮುಗಿಸಿ ಊರಿನತ್ತ ಪ್ರಯಾಣ ಬೆಳೆಸುತ್ತಿರುವ ಸಂದರ್ಭದಲ್ಲಿ ತಮ್ಮ ಕಾರು ಅಪಘಾತಕ್ಕೀಡಾಗಿತ್ತು. ಅಪಘಾತ ಎಂದಮೇಲೆ ಅಲ್ಲಿ ನಂತರ ನಡೆಯುವ ಬೆಳವಣಿಗಳು ಗೊತ್ತೇ ಇದೆ. ‌ಪ್ರಕರಣ, ಸಮಾಧಾನ ಅದು ಇದು ಎಂದು ಕೆಲವೊಂದು ಫಾರ್ಮಲಿಟೀಸ್ ಇದೆ. ಎಲ್ಲಾ ಮುಗಿಸಿ ಬೇರೆ ಕಾರು ತರಿಸಿ ಕೋಟಾ ದ ತಮ್ಮ ಮನೆಗೆ ತಲುಪುವಾಗ ಮುಂಜಾನೆ 4 ಗಂಟೆ.

ಇಂದಿನ ದಿನಚರಿಯಲ್ಲಿ ಮನೆಯಲ್ಲಿ ಸಾರ್ವಜನಿಕ ಭೇಟಿ ಎಂದಿತ್ತು. ಬಹುಶಃ ಎಲ್ಲರೂ ಇದು ಅಸಾಧ್ಯ ಎಂದೆನಿಸಿರಬಹುದು.ಆದರೆ ಅವರು ಅದನ್ನೂ ಸಾಧಿಸಿ ತೋರಿಸಿದ್ದಾರೆ. ತಮ್ಮ ವೇಳಾಪಟ್ಟಿಯಂತೆ ಬೆಳಿಗ್ಗೆ 7 ಗಂಟೆಗೆ ಸಾರ್ವಜನಿಕರ ಭೇಟಿಗೆ ಹಾಜರಾಗಿದ್ದಾರೆ. 10 ಗಂಟೆಗೆ ಮಲಗಿ 7 ಗಂಟೆಗೆ ಏಳಲೂ ಕಷ್ಟವಾಗುವ ಈಗಿನ ಕಾಲದಲ್ಲಿ ಪ್ರತಿದಿನ ತಡರಾತ್ರಿ ಮಲಗಿ ಬೆಳಗೆದ್ದು ಸಾರ್ವಜನಿಕರ ಸಮಸ್ಯೆ ಆಲಿಸುವ ಸಚಿವರು ವಿಶೇಷವಾಗಿಯೇ ಕಾಣುತ್ತಾರೆ. ರಾಜ್ಯದಲ್ಲಿ ಅದೆಷ್ಟೇ ಸಜ್ಜನ ಸಚಿವರು ಇರಬಹುದು.

ಆದರೆ ಕೋಟ ಶ್ರೀನಿವಾಸ ಪೂಜಾರಿ ಎಲ್ಲರಿಗಿಂತಲೂ ಭಿನ್ನ ಅವರಿಗೆ ಅವರೇ ಸಾಟಿ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »