TOP STORIES:

ಕುಂಬ್ರ :ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ಲೋಕಾರ್ಪಣೆ


  • ಪುತ್ತೂರು, ಅ. 17: ಉದ್ಯಮಿ ಜಯಂತ್ ನಡುಬೈಲು ಮಾಲಕತ್ವದ ಅಕ್ಷಯ ಗ್ರೂಪ್ ಸಮೂಹ ಸಂಸ್ಥೆಗಳ ಸುಸಜ್ಜಿತ ಅಕ್ಷಯ ಆರ್ಕೇಡ್ ರವಿವಾರ ( ಅ 17) ಕುಂಬ್ರದಲ್ಲಿ ಲೋಕಾರ್ಪಣೆಗೊಂಡಿತು.ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕಚೇರಿ ಉದ್ಘಾಟಿಸಿದರು, ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕುಂಬ್ರ ಜಂಕ್ಷನ್‌ನಲ್ಲಿ ನಿರ್ಮಾಣಗೊಂಡಿರುವ ಸುಂದರ ಹಾಗೂ ಸುಸಜ್ಜಿತ ಅರ್ಕೆಡ್‌  ವಾಣಿಜ್ಯ ಹಾಗೂ  ವಸತಿ  ಸಂಕೀರ್ಣವನ್ನು ಹೊಂದಿದೆ. ಅಲ್ಲದೆ 250 ಆಸನಗಳ ಹವಾನಿಯಂತ್ರಿತ ಸಭಾಭವನ, 200 ಆಸನಗಳ ಮಿನಿಹಾಲ್, 1000  ಆಸನ ವ್ಯವಸ್ಥೆಯಿರುವ ಕಲ್ಯಾಣ ಮಂಟಪ ಮತ್ತು ಡೈನಿಂಗ್ ಹಾಲ್ ವ್ಯವಸ್ಥೆಯನ್ನು ಹೊಂದಿದೆ.  ಈ ಸಂಕೀರ್ಣವೂ ವಿಶಾಲವಾದ ಪಾರ್ಕಿಂಗ್ ಸೌಕರ್ಯ ಹೊಂದಿದ್ದು,ಇಲ್ಲಿ   ಸ್ವಚ್ಛತೆಗೆ ವಿಶೇಷ  ಆದ್ಯತೆ ನೀಡಲಾಗುತ್ತಿದೆ.

ಪುತ್ತೂರಿನ ಬೆಳವಣಿಗೆಗೆ ಪೂರಕವಾಗಿ ನಿರ್ಮಾಣಗೊಂಡಿರುವ ಅಕ್ಷಯ ಆರ್ಕೇಡ್ ಯಶಸ್ಸು ಕಾಣಲಿ ಎಂದು ಸಚಿವ ಕೋಟ ಶುಭ ಹಾರೈಸಿದರು ಬೆಂಗಳೂರು ಸೋಲೂರು ಮಠದ ಆರ್ಯ ಮಹಾಸಂಸ್ಥಾನದ ವಿಖ್ಯಾತನಂದ ಸ್ವಾಮೀಜಿಯವರು ನೂತನ ಸಂಕೀರ್ಣ ಉದ್ಘಾಟಿಸಿ ಸ್ವಪ್ರಯತ್ನ ಶ್ರದ್ಧೆಯ ಪ್ರಯತ್ನದಿಂದ ಯಶಸ್ಸು ಸಾಧ್ಯ ಅನ್ನುವುದನ್ನು ಜಯಂತ ನಡುಬೈಲು ಅವರು ತೋರಿಸಿಕೊಟ್ಟಿದ್ದಾರೆ ಎಂದರು ವಿಟ್ಲ ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ  ಶ್ರೀ ಮಹಾಬಲ ಸ್ವಾಮೀಜಿ ಮಾತನಾಡಿ, ಇಚ್ಛಾಶಕ್ತಿ, ಕ್ರಿಯಾ, ಜ್ಞಾನ ಶಕ್ತಿಯಿಂದ ಯಶಸ್ಸು ಸಾಧ್ಯ ಎನ್ನುವುದಕ್ಕೆ ನಡುಬೈಲು ಅವರು ಉದಾಹರಣೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಜಯಂತ ನಡುಬೈಲು ಅವರು ಶಿಕ್ಷಣ, ಧಾರ್ಮಿಕ, ಸಾಮಾಜಿಕ, ಉದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.ಕುಕ್ಕುಟೋದ್ಯಮದಲ್ಲಿ ಬಾರೀ ಯಶಸ್ವಿ ಗಳಿಸಿರುವ ನೂತನ ಸಂಕೀರ್ಣದ ಮಾಲಕ ಜಯಂತ್ ನಡುಬೈಲು ಅವರು  ಪ್ರಾಸ್ತವಿಕವಾಗಿ ಮಾತನಾಡಿ “ ಕೇವಲ ನೂರು ಕೋಳಿಗಳಿಂದ  ವ್ಯವಹಾರ ಜೀವನವನ್ನು ಆರಂಭಿಸಿದ ನಾನು ಇಂದು ಒಂದು  ಲಕ್ಷಕ್ಕೂ ಮಿಕ್ಕಿ ಕೋಳಿಗಳನ್ನು ಸ್ವತಃ ಉತ್ಪಾದನೆ ಮಾಡುತ್ತಿದ್ದೇನೆ . ಅಲ್ಲದೇ 150 ಕ್ಕೂ ಹೆಚ್ಚು  ಕೋಳಿ ಬೆಳೆಗಾರ ರೈತರ ಜತೆ  ಇಂಟಿಗ್ರೇಶನ್, ಕಾಂಟ್ರಾಕ್ಟ್ ಮಾಡಿಕೊಂಡು ಕೋಳಿಯನ್ನು ಉತ್ಫಾಧಿಸಲಾಗುತ್ತಿದೆ. ಕೆಲ ವರ್ಷಗಳ ಹಿಂದೆ ಆರಂಭಿಸಿದ ಅಕ್ಷಯ ಗ್ರೂಪ್‌ ಶಿಕ್ಷಣ ಸಂಸ್ಥೆಯೂ ಜಾಬ್ ಗ್ಯಾರಂಟಿ ವಿಜ್ಞಾನ ಹಾಗೂ ವಾಣಿಜ್ಯ ಕೋರ್ಸ್‌ಗಳನ್ನು ನಡೆಸುತ್ತಿದ್ದೂ ವಿದ್ಯಾರ್ಥಿಗಳ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ರೀತಿ ಈ ನೂತನ ಅರ್ಕೇಡ್‌ ಗೂ ಗ್ರಾಹಕರ ಪ್ರೀತಿ ವಿಶ್ವಾಸ ಸಿಗಲಿ ಎಂದು ಹೇಳಿದರು.

 

ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಕೆದಂಬಾಡಿ ಗ್ರಾ. ಪಂ.ಅಧ್ಯಕ್ಷ ರತನ್, ಒಳಮೊಗ್ರು ಗ್ರಾ.ಪಂ. ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಬ್ರಹಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ತಾಲೂಕು ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಗೆಜ್ಜೆಗಿರಿ ಕ್ಷೇತ್ರದ ಉಪಾಧ್ಯಕ್ಷ ಪೀತಾಂಬರ ಹೆರಾಜೆ, ಸಂಪ್ಯ ಠಾಣೆಯ ಠಾಣಾಧಿಕಾರಿ ಎಂ. ವೈ. ಉದಯರವಿ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಡಾ| ರಾಜಾರಾಂ ಕೆ.ಬಿ, ಉದ್ಯಮಿ ಕೆ. ಸಿ. ಸಾದಿಕ್, ಪುತ್ತೂರು ರೋಟರಿ ಪೂರ್ವ ಅಧ್ಯಕ್ಷ ಪುರಂದರ ರೈ, ಕುಂಬ್ರ ಶ್ರೀರಾಮ ಭಜನ ಮಂದಿರದ ಅಧ್ಯಕ್ಷ ಬಾಬು ಪೂಜಾರಿ ಬಡಕ್ಕೋಡಿ, ಡಾ| ಯು. ಪಿ.ಶಿವಾನಂದ, ಅಕ್ಷಯ ಗ್ರೂಪ್‌ನ ಕಲಾವತಿ ಜಯಂತ್ ಉಪಸ್ಥಿತರಿದ್ದರು.

ಈ ಸಂದರ್ಭ ಉದ್ಯಮಿ ಸಂತೋಷ್ ಕುಮಾರ್ ಕೊಟ್ಟಿಂಜ ಅವರನ್ನು ಸಮ್ಮಾನಿಸಲಾಯಿತು. ಶಶಿಧರ್ ಕಿನ್ನಿಮಜಲು ಮತ್ತು ಭವ್ಯಶ್ರೀ ಕೋಟ್ಯಾನ್ ನಿರೂಪಿಸಿದರು.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »