TOP STORIES:

FOLLOW US

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ವದ ಹಿನ್ನೆಲೆ ವಿಟ್ಲ ಕೇಪು ವಲಯ ಸಮಿತಿ ರಚನೆ.


ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023 ಮಾರ್ಚ್ ತಿಂಗಳಲ್ಲಿ ನಡೆಯಲಿರುವಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ

ವಿಟ್ಲದ ಕೇಪುವಿನಲ್ಲಿ  ವಲಯ ಸಮಿತಿಯ ರಚನೆ ಮಾಡಲಾಯಿತು. ಧರ್ಮದರ್ಶಿಗಳು ಕ್ಷೇತ್ರದ ಜೀರ್ಣೋದ್ಧಾರ ಹಾಗೂಬ್ರಹ್ಮಕಲಶೋತ್ಸವದ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ ಪೂಜಾರಿ ಬಡಕೋಡಿ ಯವರು ಕೇಪು ವಲಯದಿಂದ  ಕ್ಷೇತ್ರದಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ  ನೀಡಿದರು.ವೇದಿಕೆಯಲ್ಲಿ  ಪದ್ಮನಾಭ ಕಲ್ಲಂಗಳ,  ಸಂತೋಷ್ ಮೈರ, ಚಂದ್ರಶೇಖರ್ವಳಕಟ್ಟೆ, ಸುರೇಶ್ ಕಾಪಿಕಾಡ್, ಧನಂಜಯ ಅತಿಕ್ರಯಬೈಲು, ಹರೀಶ್ ಗೌಡ ಕೊರತಿಗದ್ದೆ , ಬಾಲಕೃಷ್ಣ ಪೂಜಾರಿ ಪೆಲ್ತಡಿ ಹಾಗೂಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೃಷ್ಣಪ್ಪ ಪೂಜಾರಿ ತಾರಿದಾಳ ಮೊದಲಾದವರು ಉಪಸ್ಥಿತರಿದ್ದರು.

ಸಂದರ್ಭದಲ್ಲಿ  ವಲಯ ಸಮಿತಿಯನ್ನು ರಚಿಸಲಾಯಿತು.

ಕೇಪು ವಲಯ ಸಮಿತಿಯ ಕಾರ್ಯಧ್ಯಕ್ಷರಾಗಿ ಸಮಾಜ ಸೇವಕ ಸುಧಾಕರ ಪೂಜಾರಿ ಬಡಕೋಡಿ ಒಮ್ಮತದಿಂದ ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ಬಾಲಕೃಷ್ಣ ಪೂಜಾರಿ ಪೆಲ್ತಡಿ

ಉಪಾಧ್ಯಕ್ಷರು 1 ಪದ್ಮನಾಭ ಕಲ್ಲಂಗಳ ,  2 ಯೋಗೀಶ್

  3 ಚಂದ್ರಶೇಖರ ವಳಕಟ್ಟೆ.

  ಕಾರ್ಯದರ್ಶಿಯಾಗಿ 1 ಸತೀಶ್ ಕೇಪು

                                2 ಶ್ರೇಯಸ್ ಕಲ್ಲಂಗಳ

                               3 ಧನಂಜಯ ಅತಿಕ್ರಯಬೈಲು

                               4 ಹರೀಶ್ ಕೊರತಿ ಗದ್ದೆ

ಕೋಶಾಧಿಕಾರಿಯಾಗಿ ಶ್ರೀಮತಿ ಭವ್ಯ ಬಡಕೋಡಿ ಹಾಗೂ ಸುಮಾರು 50 ಮಂದಿ ಸದಸ್ಯರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿಆಯ್ಕೆ ಮಾಡಲಾಯಿತು.

ಸಂದರ್ಭದಲ್ಲಿ ಅನಾರೋಗ್ಯದಿಂದಿರುವ ಶರಣ್ ರೈ ಕೇಪುರವರ ಧರ್ಮಪತ್ನಿಗೆ ಕ್ಷೇತ್ರದ ವತಿಯಿಂದ ಧನಸಹಾಯವನ್ನುನೀಡುವುದಾಗಿ ಧರ್ಮದರ್ಶಿಗಳು ಭರವಸೆ ನೀಡಿದರು

ನವೀನ್ ಕುಮಾರ್ ಬಿ ಸ್ವಾಗತಿಸಿ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ  ರವಿ ಎಸ್.ಎಂ. ಕುಕ್ಕಾಜೆ  ವಂದಿಸಿದರು.

ಪತ್ರಕರ್ತ ರಾದ , ಕಿರಣ್ ಕೋಟ್ಯಾನ್ ಕೇಪು , ವಿಷ್ಣುಗುಪ್ತ ಉಪಸ್ಥಿತಿ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »