TOP STORIES:

FOLLOW US

ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ : ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ


ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ ನಿಧಿಸಂಚಯನಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿ ಕ್ಷೇತ್ರದ ಬೆಳವಣಿಗೆ ಅಭಿವೃದ್ದಿಯಲ್ಲಿ ಅಡಗಿದೆ. ಕ್ಷೇತ್ರದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳು ನಡೆಯುತ್ತಲಿದೆ. ಇಚ್ಚಾ ಶಕ್ತಿ, ಕ್ರೀಯಾ ಶಕ್ತಿ, ಜ್ಞಾನ ಶಕ್ತಿ ಇದರಲ್ಲಿ ಯಾವುದೇ ಕೆಲಸ ಯಶಸ್ಸಾಗಲು ಸಾಧ್ಯ ಎಂದರು.

ಕ್ಷೇತ್ರದ ಧರ್ಮದರ್ಶಿಗಳಾದ ಶ್ರೀಕೃಷ್ಣ ಗುರೂಜಿ ಅವರು ಮಾತನಾಡಿ ಒಳ್ಳೆಯ ಮನಸ್ಸಿದ್ದವರು ಸಿರಿವಂತಮಾಗಲು ಸಾಧ್ಯ. ಹಿರಿಯರ ಸಾಧನೆಯ ಫಲವಾಗಿ ಕ್ಷೇತ್ರ ಇಷ್ಟೊಂದು ಬೆಳಗಲು ಸಾಧ್ಯವಾಗಿದೆ. ಬಡ ಬಗ್ಗರ ನಿಸ್ವಾರ್ಥ ಸೇವೆ ಕ್ಷೇತ್ರಕ್ಕೆ ಅಪಾರವಿದೆ. ನೀವೆಲ್ಲರೂ ಒಟ್ಟಾಗಿ ಕೈಜೋಡಿಸಿದರೆ ಕ್ಷೇತ್ರದ ಜೀರ್ಣೋದ್ಧಾರ ಸುಸೂತ್ರವಾಗಿ ನಡೆಯಲು ಸಾಧ್ಯ ಎಂದು ಹೇಳಿದರು. ಬಾಳೆಕಲ್ಲು ಗರಡಿ ಮನೆಯ ಮೊಕ್ತೇಸರರಾದ ಕೊರಗಪ್ಪ ಪೂಜಾರಿ ಕಾರ್ಯಕ್ರಮವನ್ನು ದೀಪಬೇಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪುತ್ತೂರು ಅಕ್ಷಯ ಕಾಲೇಜಿನ ಸಂಚಾಲಕ ಜಯಂತ ನಡುಬೈಲ್, ಕುಕ್ಕಾಜೆ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಕಾರಾಜೆ, ವಕೀಲರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು, ಕ್ಷೇತ್ರದ ಮೊಕ್ತೇಸರರಾದ ಎಂ.ಕೆ. ಕುಕ್ಕಾಜೆ, ಮಾಣಿಲ ಮುರುವ ಪಂಜುರ್ಲಿ ದೈವಸ್ಥಾನದ ಶ್ರೀಕಾಂತ್ ಮಾಣಿಲತ್ತಾಯ, ಮಾಣಿಲ ಗ್ರಾ.ಪಂ. ಅಧ್ಯಕ್ಷರಾದ ವನಿತಾ ತಾರಿದಳ ಮೊದಲಾದವರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »