TOP STORIES:

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ


ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ.ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಬುತ ಕಲಾವಿದರಿಗೊಂದು ಸೆಲ್ಯೂಟ್.

✍️ಸುಖ್ ಪಾಲ್ ಪೊಳಲಿ


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »