TOP STORIES:

ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ ಕುಬೇರ ಮತ್ತು ತಂಡ


ಕುದ್ರೋಳಿಯ ಕ್ಷೇತ್ರದ ನವರಾತ್ರಿ ಮೂರ್ತಿಗಳಿಗೆ ಜೀವ ತುಂಬುವ ಕಲಾವಿದ “ಕುಬೇರ” ಮತ್ತು ತಂಡ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ “ಮಂಗಳೂರು ದಸರಾ” ಸಂಭ್ರಮಕ್ಕೆ ಮೆರಗು ನೀಡುವ ಗಣಪತಿ,ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ‌ ಮೂರ್ತಿಗಳಿಗೆ ಜೀವ ತುಂಬುವ ಕಲೆಗಾರರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ.ಈ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ನೋಡಿ ಕಲಾವಿದನ ಕೈಚಳಕಕ್ಕೆ ಎಲ್ಲರೂ ಸೈ ಅನ್ನುತ್ತಾರೆ.ಆ ಕಲಾವಿದರು ಕಲೆಯ ಹಿಂದೆ ಇರುತ್ತಾರೆಯೇ ಹೊರತು ಎಲ್ಲೂ ಕಾಣಿಸಿಕೊಳ್ಳೋದಿಲ್ಲ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು.ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ ಕಳೆದ ನಾಲ್ಕು ವರ್ಷದಿಂದ ನವರಾತ್ರಿಯ ಎಲ್ಲಾ 12 ಮೂರ್ತಿಗಳನ್ನು ರಚಿಸುತ್ತಾರೆ.ದೇವತಾ ಸ್ವರೂಪವಾದ ಈ ಮೂರ್ತಿಗಳನ್ನು ರಚಿಸುವಾಗ ಈ ಎಲ್ಲಾ ಕಲಾವಿದರು ಶ್ರದ್ಧೆ, ನಿಷ್ಠೆ, ಭಕ್ತಿಯ ಜೊತೆ ವೃತಾಚರಣೆ , ಜಪವನ್ನು ಮಾಡಿ ಮೂರ್ತಿಗಳನ್ನು ರಚಿಸುತ್ತಾರೆ. ಸುಮಾರು 40 ದಿನಗಳ ಕಾಲ ರಾತ್ರಿ-ಹಗಲು ಈ 12 ಮೂರ್ತಿಗಳನ್ನು 15 ಮಂದಿ ಕಲಾವಿದರು ಸೇರಿ ಮೂರ್ತಿಗಳ ರಚನೆ ಮಾಡುತ್ತಾರೆ.ಪ್ರತೀ ವರ್ಷವೂ ವಿಸರ್ಜನೆಗೊಳ್ಳುವ ಈ ಮೂರ್ತಿಗಳು ಮತ್ತೆ ಮುಂದಿನ ವರ್ಷ ಪ್ರತ್ಯಕ್ಷವಾಗಿದೆಯೇ ಅನ್ನುವಷ್ಟರ ಮಟ್ಟಿಗೆ ಅಷ್ಟೇ ಸುಂದರವಾಗಿ ಈ ಕಲಾವಿದರ ತಂಡ ಮೂರ್ತಿಗಳನ್ನು ರಚಿಸುತ್ತಾರೆ. ಇಂತಹ ಅದ್ಬುತ ಕಲಾವಿದರಿಗೊಂದು ಸೆಲ್ಯೂಟ್.

✍️ಸುಖ್ ಪಾಲ್ ಪೊಳಲಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »