TOP STORIES:

FOLLOW US

ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ಅಬ್ಬಕ್ಕ ಸಾಲು ಮರ ಯೋಜನೆ, ಬಡವರ ಸೇವೆ ಜತೆಗೆ ಪರಿಸರ ಕಾಳಜಿ


 

 

ಮಂಗಳೂರು: ಪರಿಸರ ಜಾಗೃತಿ, ಸ್ವಚ್ಛತೆ ಕಾರ್ಯಕ್ರಮ ಇಂದಿನ ಅಗತ್ಯ. ಬಡವರ ಸೇವೆ ಜತೆಗೆ ಪರಿಸರ ಕಾಳಜಿ ಮೂಡಿಸುತ್ತಿರುವ ಗುರುಬೆಳದಿಂಗಳು ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ಹೇಳಿದರು.

ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ವತಿಯಿಂದ ಮಂಗಳೂರು ವಲಯ ಅರಣ್ಯ ಇಲಾಖೆ, ಪರಿಸರ ಪ್ರೇಮಿ ಮಾಧವ ಉಳ್ಳಾಲ್ ಅವರ ಸಹಕಾರದಲ್ಲಿ ಉಳ್ಳಾಲ ಅಬ್ಬಕ್ಕನ ಪ್ರತಿಮೆಯಿಂದ ಉಳ್ಳಾಲಬೈಲ್ ಪ್ರದೇಶದವರೆಗೆ ‘ಅಬ್ಬಕ್ಕ ಸಾಲುಮರ ಯೋಜನೆ’ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಳ್ಳಾಲ ಕ್ಷೇತ್ರ ಎಲ್ಲ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಸಾಲು ಮರ ಅಭಿವೃದ್ಧಿಪಡಿಸುವ ಯೋಜನೆ ರೂಪಿಸುವ ಮೂಲಕ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಒತ್ತು ನೀಡಲಾಗುವುದು ಎಂದರು.

 

ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ, ಗುರುಬೆಳದಿಂಗಳು ಸಂಸ್ಥೆ ಶಾಂತಿ ಮತ್ತು ಸೌಹಾರ್ದತೆಯ ಕೊಂಡಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯ ಇಲಾಖಾ ಅಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯಾ, ಉಳ್ಳಾಲ ನಗರಸಭೆ ಪೌರಾಯುಕ್ತೆ ವಿದ್ಯಾ, ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಉದ್ಯಮಿಗಳಾದ ಧರ್ಮರಾಜ್ ಅಮ್ಮುಂಜೆ, ಸತೀಶ್ ಕುಮಾರ್ ಬಜಾಲ್, ಯುವವಾಹಿನಿ ಕೊಲ್ಯ ಘಟಕ ಅಧ್ಯಕ್ಷ ಮೋಹನ್ ಮಾಡೂರು, ಕಣಚೂರು ಮೆಡಿಕಲ್ ಕಾಲೇಜು ಲೆಕ್ಕಪರಿಶೋಧಕ ಯು.ಎ.ಪ್ರೇಮನಾಥ್, ಸಾಮಾಜಿಕ ಕಾರ್ಯಕರ್ತ ಉದಯ ಆರ್.ಕೆ, ಉಳ್ಳಾಲ ಮೊಗವೀರ ಸಂಘ ಅಧ್ಯಕ್ಷ ಮನೋಜ್ ಸಾಲ್ಯಾನ್, ಹೈಕೋರ್ಟ್ ವಕೀಲೆ ರಾಜಲಕ್ಷ್ಮೀ ಸುವರ್ಣ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಪೂಜಾರಿ, ಮಂಗಳೂರು ವಿಶ್ವವಿದ್ಯಾಲಯ ನಾರಾಯಣಗುರು ಅಧ್ಯಯನ‌ ಪೀಠ ಸದಸ್ಯೆ ನಮಿತಾ ಶ್ಯಾಮ್, ಬಿಲ್ಲವ ಸಂಘ ಬಂಡಿಕೊಟ್ಯ ಅಧ್ಯಕ್ಷ ಪ್ರಶಾಂತ್, ಕಾರ್ಯದರ್ಶಿ ಮಮತಾ, ಕೊಲ್ಯ ಬಿಲ್ಲವ ಸಂಘದ ಟ್ರಸ್ಟ್ ಅಧ್ಯಕ್ಷ ವೇಣುಗೊಪಾಲ್, ಕಾರ್ಯದರ್ಶಿ ಭಾಸ್ಕರ್ ಮಡ್ಯಾರ್ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಉಳ್ಳಾಲ ಘಟಕ ಯೋಜನಾಧಿಕಾರಿ ಜಯಂತಿ, ಲೋಹಿತ್, ವಿವಿಧ ಸಂಸ್ಥೆಗಳ ಸದಸ್ಯರು ಇದ್ದರು. ಕುಸುಮಾಕರ್ ಕುಂಪಲ ಕಾರ್ಯಕ್ರಮ‌ ನಿರೂಪಿಸಿದರು. ಗುರು ಬೆಳದಿಂಗಳು ಫೌಂಡೇಶನ್ ಪ್ರಧಾನ‌ ಕಾರ್ಯದರ್ಶಿ ರಾಜೇಶ್ ಸುವರ್ಣ ವಂದಿಸಿದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »