TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »