TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »