TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »