TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿದರು


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ಫೆಬ್ರವರಿ 27ರಂದು ಗೌರವಾನ್ವಿತ ಬಿ. ಜನಾರ್ದನ ಪೂಜಾರಿ ಉಪಸ್ಥಿತಿಯಲ್ಲಿನಡೆದ ಬಿಲ್ಲವ ಸಮಾಜದ ಅಭ್ಯುದಯದ ಸಮಾಲೋಚನಾ ಸಭೆಯಲ್ಲಿ 500 ಕ್ಕೂ ಹೆಚ್ಚು ಸಮಾಜದ ಪ್ರಮುಖರು ಭಾಗವಹಿಸಿಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭೆಯಲ್ಲಿ ಉಡುಪಿ, .., ಕಾಸರಗೋಡು, ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯ ಬಿಲ್ಲವಸಂಘ/ಸಂಸ್ಥೆ/ಕ್ಷೇತ್ರಗಳ ಪದಾಧಿಕಾರಿಗಳು ಹಾಗೂ ಸದಸ್ಯರು  ಪಾಲ್ಗೊಂಡು, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳನ್ನುಮೆಟ್ಟಿನಿಂತು ಮುನ್ನಡೆಯಲು ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಪ್ರಮುಖ ಅಂಶಗಳು :

1. ಬಿಲ್ಲವ ಸಮಾಜದ ಪ್ರಸ್ತುತ ಆರ್ಥಿಕ/ಸಾಮಾಜಿಕ/ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿಯಲು ಆಯಾ ಸಂಘದ ವ್ಯಾಪ್ತಿಯ ಗ್ರಾಮಮಟ್ಟದಲ್ಲಿ ಪ್ರತಿ ಕುಟುಂಬಗಳ ಸಮೀಕ್ಷೆ

2. ನಾರಾಯಣ ಗುರುಗಳ ತತ್ವದನುಸಾರ ಪ್ರತಿ ಸಂಘ ಸಂಸ್ಥೆಗಳು ಶಿಕ್ಷಣಕ್ಕೆ ಒತ್ತು ನೀಡಿ, ವಿಧ್ಯಾಭ್ಯಾಸಕ್ಕೆ ಸಹಕಾರ ಮತ್ತುಉದ್ಯೋಗಕ್ಕೆ ಪೂರಕವಾದ ತರಬೇತಿ ಒದಗಿಸುವುದು

3. ಬಿಲ್ಲವ ಸಮಾಜದ ಕ್ಷೇತ್ರ/ಮಂದಿರಗಳಲ್ಲಿ ಸಂಸ್ಕಾರಯುತ ಶ್ರೀ ನಾರಾಯಣ ಗುರು ತತ್ವಾದರ್ಶಗಳ ಧಾರ್ಮಿಕ ಶಿಕ್ಷಣ ಕೇಂದ್ರಆರಂಭಿಸುವುದು

4. ಸಂಘ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿನ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೂಕ್ತ ನೆರವು ದೊರಕುವಂತೆ ಸಹಕರಿಸುವುದು

5. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ನಿಗಮ ಮಂಡಳಿಗಳ ಸ್ಥಾಪನೆಗೆ ಮನವಿ/ಒತ್ತಾಯ

6. ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಆಸ್ಪತ್ರೆ ಮುಂತಾದ ಪ್ರಮುಖ ಸಾರ್ವಜನಿಕ ಕೇಂದ್ರಗಳಿಗೆ ಬ್ರಹ್ಮಶ್ರೀ ನಾರಾಯಣಗುರುಹಾಗೂ ಕೋಟಿ ಚೆನ್ನಯರ ಹೆಸರು ಇಡುವಂತೆ ಒತ್ತಾಯ

7. ಸಮಾಜ ಬಾಂಧವರಿಗೆ ಉಪಯುಕ್ತವಾದ ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ಹಾಗೂ ನೆರವು ನೀಡಲುಒಂದು ತಂಡದ ರಚನೆ

8. ಬಿಲ್ಲವ ಸಮಾಜದ ಸಂಘ ಸಂಸ್ಥೆಗಳಲ್ಲಿ ಯಾವುದೇ ಪಕ್ಷಗಳು ರಾಜಕೀಯ ಪ್ರೇರಿತ ವಿಚಾರಗಳ ಮೂಲಕ ಸಮಾಜವನ್ನುಒಡೆಯುವ ಪ್ರಯತ್ನ ನಡೆಸದಂತೆ ಎಚ್ಚರ ವಹಿಸುವುದು

ಕೊನೆಯದಾಗಿ ಮಾತನಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರು, ಸಭೆಯಲ್ಲಿ ಸೇರಿದ ಜನಸ್ತೋಮ ಕಂಡು ಸಂತಸವ್ಯಕ್ತಪಡಿಸುತ್ತಾ ಇಂತಹ ಸಮಾಜದ ಅಭಿವೃದ್ಧಿಯ ಚಟುವಟಿಕೆ ಗಳಿಗೆ ಶ್ರೀ ಗೋಕರ್ಣನಾಥ ದೇವರ ಮತ್ತು ಬ್ರಹ್ಮ ಶ್ರೀ ನಾರಾಯಣಗುರುಗಳ ಕೃಪಾಶೀರ್ವಾದ ಮಾಡಿದ್ದಾರೆ  ಇದರಿಂದಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರಮುಖರು ಶ್ರೀ ಕ್ಷೇತ್ರದಲ್ಲಿ ಸೇರಿದ್ದಾರೆಎಂದರು. ಸಮಾಜದ ಅಭ್ಯುದಯಕ್ಕೆ ಸಂಕಲ್ಪ ತೊಟ್ಟಿರುವ ಎಲ್ಲರಿಗೂ ಕುದ್ರೋಳಿ ಗೋಕರ್ಣನಾಥ ಸಹಿತ ಪರಿವಾರ ದೇವತೆಗಳಹಾಗೂ ಬ್ರಹಶ್ರೀ ನಾರಾಯಣ ಗುರುಗಳ ಅನುಗ್ರಹವಿರಲಿ ಎಂದು ಹಾರೈಸಿದರು.

ವೇದಿಕೆಯಲ್ಲಿ  ಬ್ರಹ್ಮ ಶ್ರೀ ನಾರಾಯಣ ಗುರುಗಳ ಫೋಟೋ ಹಾಗೂ ಬಿಲ್ಲವ ಸಮಾಜದ ಅಗ್ರಮಾನ್ಯ ನಾಯಕರಾದ ಜನಾರ್ದನಪೂಜಾರಿಯವರು ಮಾತ್ರ ಇದ್ದು ಉಳಿದ ಸಮಾಜದ ಪ್ರಮುಖರೆಲ್ಲ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಮಾಜ ಒಗ್ಗಟ್ಟಿನಿಂದಮಾಡ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಒಬ್ಬೊಬ್ಬರಾಗಿ ಮುಂದೆ ಬಂದು ತಮ್ಮ ಸಲಹೆಗಳನ್ನು ನೀಡಿದರು. ಸಲಹೆಗಳ ಆಧಾರದಮೇಲೆ, ಕಾರ್ಯಚಟುವಟಿಕೆಯ ಚೌಕಟ್ಟನ್ನು ರಚಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ಸಭೆಗಳನ್ನುನಡೆಸುವುದೆಂದು ತೀರ್ಮಾನಿಸಲಾಯಿತು.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »