TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »