TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »