TOP STORIES:

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »