TOP STORIES:

FOLLOW US

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ


ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣ ಮತ್ತು ಮಂಗಳೂರು ದಸರಾ ರುವಾರಿ ಶ್ರೀ ಬಿ ಜನಾರ್ದನ ಪೂಜಾರಿ

ತೊಂಭತ್ತರ ದಶಕದಿಂದ ಸನ್ಮಾನ್ಯ ಜನಾರ್ದನ ಪೂಜಾರಿಯವರು ತನ್ನ ಅಪೂರ್ವ ಇಚ್ಛಾಶಕ್ತಿಯಿಂದ ಚಿಕ್ಕ ದೇವಸ್ಥಾನವಾಗಿದ್ದ ಶೀಗೋಕರ್ಣನಾಥ ಕ್ಷೇತ್ರವನ್ನು ಅಭೂತಪೂರ್ವವಾಗಿ ನವೀಕರಿಸಿ, ಇಡೀ ವಿಶ್ವದ ಗಮನವನ್ನು ಶ್ರೀಕ್ಷೇತ್ರದತ್ತ ಸೆಳೆಯುವಂತೆ ಅಭಿವೃದ್ಧಿ ಪಡಿಸಿದರು.ಬಿಲ್ಲವ ಸಮಾಜದ ಪ್ರಶ್ನಾತೀತ ನಾಯಕರೂ ರಾಷ್ಟ್ರ ಮಟ್ಟದ ರಾಜಕೀಯ ಮತ್ಸದ್ಧಿಯೂ ಆಗಿರುವ  ಶ್ರೀ ಬಿ ಜನಾರ್ದನ ಪೂಜಾರಿ ಯವರಿಗೆ ಬಹುಶಃ  ಶ್ರೀ ನಾರಾಯಣ ಗುರುಗಳೇ ನೀಡಿದ ಪ್ರೇರಣೆಯೋ ಶ್ರೀ ಗೋಕರ್ಣನಾಥನ ಇಚ್ಛೆಯೋ?  ಅಥವಾ ಹಿಂದುಳಿದ ವರ್ಗದ ಸಮಸ್ತ ಜನತೆಯ ಆಶೋತ್ತರವೋ ಎಂಬಂತೆ ಇಚ್ಛಾಶಕ್ತಿಯೊಂದು ಹೃದಯಾಂತರಾಳದಿಂದ ಮೂಡಿ ಸಾಕಾರ ಗೊಂಡಿತು. ಈ ಕ್ಷೇತ್ರವನ್ನು ಆಧ್ಯಾತ್ಮಿಕ ಪ್ರವಾಸಿ ತಾಣವಾಗಿ ಸಾಮಾಜಿಕ ಸುಧಾರಣಾ ಕೇಂದ್ರವಾಗಿ ಜಾತ್ಯಾತೀತ ಕ್ಷೇತ್ರವಾಗಿ ನವನಿರ್ಮಾಣ ಮಾಡಲು ಪೂಜಾರಿಯವರು ಸಂಕಲ್ಪ ಮಾಡಿದರು.

ಇಂದು ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಸನ್ನಿಧಾನವು ದೇವಲೋಕವೇ ಧರೆಗಿಳಿದಂತೆ ಸೌಂದರ್ಯವನ್ನು ತುಂಬಿಕೊಂಡು, ಭಕ್ತರ ಹೃದಯದಲ್ಲಿ ಭಕ್ತಿಯ ಆಲೆಯನ್ನು ಸೃಷ್ಟಿಸಿ, ಭಕ್ತರು, ಜಿಜ್ಞಾಸುಗಳು ಪ್ರವಾಸಿಗರು ಸೇರಿದಂತೆ ಕೋಟ್ಯಾಂತರ ಮಂದಿಯನ್ನು ಆಕರ್ಷಿಸುತ್ತಿದೆಯೆಂದರೆ, ಅದರ ಹಿಂದಿರುವ ಅಗಾಧ ಸಂಕಲ್ಪ ಶಕ್ತಿ, ಚೇತನ ಶಕ್ತಿ ಸನ್ಮಾನ್ಯ ಜನಾರ್ದನ ಪೂಜಾರಿಯೆಂದರೆ ಅತಿಶಯೋಕ್ತಿಯಲ್ಲ. ಸುಮಾರು 34 ವರ್ಷಗಳ ಹಿಂದೆ ಶ್ರೀಕ್ಷೇತ್ರದ ನವೀಕರಣಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಢೀಕರಿಸಿ ಕೇವಲ ಅಲ್ಪ ಅವಧಿಯಲ್ಲೇ ನವೀಕರಣದ ಕೆಲಸ ಕಾರ್ಯ ಮುಗಿಯುವಂತೆ ನೋಡಿಕೊಂಡು, 1991 ರಲ್ಲಿ ನವೀಕರಣಗೊಂಡು ಪವಾಡಸದೃಶವಾಗಿ ಶ್ರೀಕ್ಷೇತ್ರ ಕಂಗೊಳಿಸುವಂತೆ ಮಾಡಿದ ಸನ್ಮಾನ್ಯ ಜನಾರ್ದನ ಪೂಜಾರಿಯವರ ಅವಿರತ ಪರಿಶ್ರಮ, ಸಮಗ್ರ ಚಿಂತನೆ, ಅದಕ್ಕೆ ಬೇಕಾದ ಯೋಜನೆಯನ್ನು ರೂಪಿಸಿದ ಪರಿ ಭಕ್ತರನ್ನು ವಿಸ್ಮಯಗೊಳಿಸಿದೆ. ಕ್ಷೇತ್ರ ದಿನಗಳೆದಂತೆ ಭಕ್ತ ಸಮೂಹವನ್ನು ದೇಶ ವಿದೇಶಗಳಿಂದ ತನ್ನೆಡೆಗೆ ಆಕರ್ಷಿಸತೊಡಗಿದ್ದು ಇಂದು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವಾಗಿದೆ.   ನವರಾತ್ರಿ ಸಂದರ್ಭದ ದಸರಾ ಮಹೋತ್ಸವವು ಇಂದು ಮಂಗಳೂರು ದಸರಾವೆಂದು ಜಗದ್ವಿಖ್ಯಾತವಾಗಿದೆ.

✍️ರಾಜೇಂದ್ರ ಚಿಲಿಂಬಿ


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »