TOP STORIES:

“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ -ಪ್ರತಿಭಾ ಕುಳಾಯಿ


ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವಕುಳಾಯಿ ಫೌಂಡೇಶನ್ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆಹಾಕಿಕೊಂಡಿದೆ ಎಂದು ಫೌಂಡೇಶನ್ ಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿಮಾತಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡುಮುನ್ನಡೆಯುತ್ತಿರುವ ಫೌಂಡೇಶನ್ ಮೂಲಕ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಮಾತ್ರವಲ್ಲದೆ ಅವರಮುಂದಿನ ಉದ್ಯೋಗ ಭದ್ರತೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

2019ರಲ್ಲಿ ಸ್ಥಾಪನೆಯಾಗಿರುವ ಕುಳಾಯಿ ಫೌಂಡೇಶನ್ ಈಗಾಗಲೇ 131 ಮಂದಿ ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಾ ಬಂದಿದೆ. ಕಳೆದ ಎರಡು ವರ್ಷಗಳ ಕೊರೋನಾ ಹಾವಳಿ, ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ಪ್ರತಿನಿತ್ಯ 250 ಮಂದಿ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಊಟ ನೀಡಿದ್ದಲ್ಲದೆ ಕಿಟ್ ಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಕುಳಾಯಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಆಂಗ್ಲಮಾಧ್ಯಮ ಕಲಿಕೆಗೆ ಒತ್ತುನೀಡುವ ಕಾರ್ಯಕ್ರಮ ರೂಪಿಸಲಾಗುವುದು ಅಲ್ಲದೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಕ್ರಮಆಯೋಜಿಸಲಾಗುವುದು ಎಂದರು.

ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭವಾಗಿದ್ದು ಫೀಸ್ ಕಟ್ಟಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ತಕ್ಷಣವೇ ಫೀಸ್ ಕಟ್ಟಲುಆರ್ಥಿಕವಾಗಿ ಸಹಾಯ ಮಾಡಲಾಗುವುದು, ಮುಖ್ಯವಾಗಿ ಪಿಯು, ಪದವಿ, ಡಿಪ್ಲೋಮ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳುಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ಫೋನ್ ನಂಬರ್ಸಂಪರ್ಕಿಸಲು ಕೋರಿದ್ದಾರೆ.

ಪ್ರತಿಭಾ ಕುಳಾಯಿ

ಕುಳಾಯಿ ಫೌಂಡೇಶನ್

ವಿ.ಟಿ. ರೋಡ್

ಕುಳಾಯಿ ಮಂಗಳೂರು

575019

ಮೊಬೈಲ್ ಸಂಖ್ಯೆ :9964756410


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »