TOP STORIES:

“ಕುಳಾಯಿ ಫೌಂಡೇಶನ್”ನಿಂದ 250 ಬಡಮಕ್ಕಳ ದತ್ತು ಸ್ವೀಕಾರ -ಪ್ರತಿಭಾ ಕುಳಾಯಿ


ಸುರತ್ಕಲ್: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ಧಿ ಧ್ಯೇಯವನ್ನಿಟ್ಟುಕೊಂಡು ಸ್ಥಾಪಿಸಿರುವಕುಳಾಯಿ ಫೌಂಡೇಶನ್ ಶೈಕ್ಷಣಿಕ ವರ್ಷದಲ್ಲಿ ಸುಮಾರು 250 ಮಂದಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ ಮಕ್ಕಳಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆಹಾಕಿಕೊಂಡಿದೆ ಎಂದು ಫೌಂಡೇಶನ್ ಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿಮಾತಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡುಮುನ್ನಡೆಯುತ್ತಿರುವ ಫೌಂಡೇಶನ್ ಮೂಲಕ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ಕೊಡಲಾಗುವುದು ಮಾತ್ರವಲ್ಲದೆ ಅವರಮುಂದಿನ ಉದ್ಯೋಗ ಭದ್ರತೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.

2019ರಲ್ಲಿ ಸ್ಥಾಪನೆಯಾಗಿರುವ ಕುಳಾಯಿ ಫೌಂಡೇಶನ್ ಈಗಾಗಲೇ 131 ಮಂದಿ ಬಡಮಕ್ಕಳ ಶಿಕ್ಷಣಕ್ಕೆ ನೆರವು ನೀಡುತ್ತಾ ಬಂದಿದೆ. ಕಳೆದ ಎರಡು ವರ್ಷಗಳ ಕೊರೋನಾ ಹಾವಳಿ, ಲಾಕ್ ಡೌನ್ ಸಂದರ್ಭದಲ್ಲಿ ಮಂಗಳೂರಿನ ಹಂಪನಕಟ್ಟೆಯಲ್ಲಿ ಪ್ರತಿನಿತ್ಯ 250 ಮಂದಿ ಕೂಲಿ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಊಟ ನೀಡಿದ್ದಲ್ಲದೆ ಕಿಟ್ ಗಳನ್ನು ವಿತರಿಸಿ ಮಾನವೀಯತೆಯನ್ನು ಮೆರೆದಿದೆ. ಕುಳಾಯಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಆಂಗ್ಲಮಾಧ್ಯಮ ಕಲಿಕೆಗೆ ಒತ್ತುನೀಡುವ ಕಾರ್ಯಕ್ರಮ ರೂಪಿಸಲಾಗುವುದು ಅಲ್ಲದೆ ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕಾರ್ಯಕ್ರಮಆಯೋಜಿಸಲಾಗುವುದು ಎಂದರು.

ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಪ್ರಾರಂಭವಾಗಿದ್ದು ಫೀಸ್ ಕಟ್ಟಲು ಕಷ್ಟಪಡುವ ವಿದ್ಯಾರ್ಥಿಗಳಿಗೆ ತಕ್ಷಣವೇ ಫೀಸ್ ಕಟ್ಟಲುಆರ್ಥಿಕವಾಗಿ ಸಹಾಯ ಮಾಡಲಾಗುವುದು, ಮುಖ್ಯವಾಗಿ ಪಿಯು, ಪದವಿ, ಡಿಪ್ಲೋಮ, ಐಟಿಐ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳುಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು ಅಥವಾ ಫೋನ್ ನಂಬರ್ಸಂಪರ್ಕಿಸಲು ಕೋರಿದ್ದಾರೆ.

ಪ್ರತಿಭಾ ಕುಳಾಯಿ

ಕುಳಾಯಿ ಫೌಂಡೇಶನ್

ವಿ.ಟಿ. ರೋಡ್

ಕುಳಾಯಿ ಮಂಗಳೂರು

575019

ಮೊಬೈಲ್ ಸಂಖ್ಯೆ :9964756410


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »