TOP STORIES:

FOLLOW US

ಕೊರೊನಾ ವಿರುದ್ಧ ಯುಧ್ಧ ಸಾರಿ ಗೆದ್ದ ಯಂಗ್ ಕೋವಿಡ್ ವಾರಿಯರ್ ಪ್ರಶಸ್ತಿ ಪಡೆದ ಅಭಿನ್ ಬಂಗೇರ


ಕೊರೊನಾ ವಿರುದ್ಧ ಯುಧ್ಧ ಸಾರಿ ಗೆದ್ದ ಯಂಗ್ ಕೋವಿಡ್  ವಾರಿಯರ್ ಪ್ರಶಸ್ತಿ ಪಡೆದ ಅಭಿನ್ ಬಂಗೇರ

ಜಗತ್ತಿಗೆ ಕೊರೊನಾ ಎಂಬ ಮಹಾಮಾರಿಯ ಆರ್ಭಟದ ಸಮಯ .ಇಡೀ ಲೋಕದಲ್ಲಿ ನೀರವ ಮೌನ ಆವರಿಸಿದ ಕಾಲ. ಎಲ್ಲಿನೋಡಿದರು ಕೊರೊನಾ ಎಂಬ ಮೂರಕ್ಷರದ ವೈರಸ್ ಆರ್ಭಟದಿಂದ ಜಗತ್ತು ತತ್ತರಿಸಿದ ದಿನ.ಇಂತಹ ಸಮಯದಲ್ಲಿ ಸಂಕಷ್ಟದಲ್ಲಿಇರುವ ಜನರಿಗೆ ಸಹಾಯಕ್ಕೆ ಬಂದವರೇ ಕೊರೊನಾ ವಾರಿಯರ್ಸ್. ಕಷ್ಟದ ದಿನಗಳನ್ನು ಎದುರಿಸುತ್ತಾ ಅನ್ಯರ ಪಾಲಿಗೆಸಹಾಯದ ಬೆಳಕು ಚೆಲ್ಲುವ ವಾರಿಯರ್ಸ್ ಗಳ ಸೇವೆ ನಿಜಾಕ್ಕೂ ಅಧ್ಧುತ. ಇಂತಹ ಕೊರೊನಾ ವಾರಿಯರ್ಸ್ ಗಳ ಪಟ್ಟಿಯಲ್ಲಿನಮ್ಮ ಬಿಲ್ಲವ ಸಮಾಜದ ಯುವ ತರುಣ ಈಗ ಸುದ್ದಿಯಲ್ಲಿ ಇದ್ದಾರೆ. ವಿದ್ಯಾಭ್ಯಾಸದೊಂದಿಗೆ ಯುವ ಸಮಾಜ ಸೇವಕರಾಗಿಗುರುತಿಸಿಕೊಂಡು. ಜನಪ್ರಿಯ ಸಮಾಜಸೇವಕರಾಗಿ ಮೆಚ್ಚುಗೆ ಗಳಿಸಿದ ಇವರೇ ಅಭಿನ್ ಬಂಗೇರ. ಇವರ ಸಾಧನೆಯ ಹಾದಿಯನ್ನುನಿಮ್ಮ ಮುಂದೆ ಇಡಲು ಬಯಸುತ್ತೇನೆ.. ಬಂಟ್ವಾಳ ತಾಲೂಕಿನ ಸಂಜೀಪ ಮುನ್ನೂರು ಮೂಲದ  ಯೋಗೀಶ್ ಪೂಜಾರಿ ಮತ್ತು ಶ್ರೀಮತಿ ನೀತಾ ಯೋಗೀಶ್ ದಂಪತಿಗಳ ಮಡಿಲಿಗೆ ಹೂ ಮಳೆ ಸುರಿಸಿದ ಹೆಮ್ಮೆಯ ಸುಪ್ರುತ. ಪ್ರಸ್ತುತ ಬಿ.ಕಾಂ ವಿದ್ಯಾರ್ಥಿ. ಬಾಲ್ಯಕಾಲದಲ್ಲಿ ಇದ್ದ ಸಮಾಜಮುಖಿ ಕಾರ್ಯಗಳ ಬಗ್ಗೆ ಇದ್ದ  ಆತಿಯಾದ ಆಸ್ತಕಿ ಮುಂದೆ ಇವರ ಸಮಾಜಮುಖಿ ಕಾರ್ಯಕ್ಕೆಅಡಿಪಾಯವಾಯಿತು. ಮುಂದೆ ಜೀವನದಲ್ಲಿ ಸಮಾಜ ಮುಖಿ ಕಾರ್ಯಗಳಿಗೆ ಮುನ್ನುಡಿ ಬರೆದ ಇವರು ನಂತರ ಸೃಷ್ಟಿಸಿದೆಲ್ಲಇತಿಹಾಸ‌.

2019 ರಲ್ಲಿ ಉಂಟಾದ ಪ್ರಾಕೃತಿಕ ವಿಕೋಪದಲ್ಲಿ ಹಾನಿಯಾದ ಕೊಡಗು ಜಿಲ್ಲೆಯ  ನಿರಾಶ್ರಿತರಿಗೆ ಹಣ ಸಂಗ್ರಹ ಮತ್ತು ಆಹಾರ  ಧಾನ್ಯಗಳ ಸಂಗ್ರಹವನ್ನು ಮಾಡುತ್ತಾರೆ.ಜೊತೆಗೆ  ಚಾರ್ಮಾಡಿ ಭೂ ಕುಸಿತ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲೂ ಕೈ ಜೋಡಿಸಿ ತಮ್ಮಕೈಲಾದಷ್ಟು ಸಹಾಯ ಮಾಡುತ್ತಾರೆ. ಹನಿ ಹನಿ ಕೂಡಿ ಹಳ್ಳ ಎಂಬ ನುಡಿಯಂತೆ ಬಂಟ್ವಾಳದಲ್ಲಿ ಯುವಕರನ್ನು ಒಂದುಗೂಡಿಸಿ  ತಮ್ಮಸಾರಥ್ಯದಲ್ಲಿಟೀಮ್ ಎಸ್ ವಿ ಎಸ್  ಎಂಬ ತಂಡವನ್ನು ನಿರ್ಮಿಸಿ ಹಲವಾರು  ಜನಜಾಗೃತಿ ಅಭಿಯಾನಗಳು ನಡೆಸಿದ್ದಾರೆ. ತಂಡದ ಮುಖೇನಪ್ಲಾಸಿಕ್ ಮುಕ್ತ ಬಂಟ್ವಾಳಮತ್ತುಗೋ ಗ್ರೀನ್ ಬಂಟ್ವಾಳಹೀಗೆ ಮುಂತಾದ ಯಶ್ವಸಿ ಅಭಿಯಾನಗಳು ತಂಡದ  ಹೆಸರಿಗೆ ಸೇರಿದೆ. ಜೊತೆಗೆ ಅಲ್ಲಿಯ ಶಾಸಕರು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಬೆನ್ನು ತಟ್ಟಿ ಪೋತ್ಸಾಹಿಸಿದ್ದಾರೆ.

ಹೀಗೆ ಸಾಗುವ ಇವರ ಸಮಾಜ ಮುಖಿ ಕಾರ್ಯ ಕೊರೊನಾ ಸಮಯದಲ್ಲಿ ಮತ್ತುಷ್ಟು ವೇಗ ಪಡೆಯುತ್ತಾದೆ. ಕೊರೊನಾದ ದಿನಗಳಲ್ಲಿ ಅನೇಕ ಬಡ ಜನರಿಗೆ ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಉಚಿತ ದಿನಬಳಕೆ ವಸ್ತುಗಳು ಒದಗಿಸಿ. ನೆರವಿನ ಹಸ್ತಚಾಚುತ್ತಾ ಬಂದಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಬೀದಿ ಬದಿಯ ಮೂಕಪ್ರಾಣಿಗಳಿಗೆ ಆಹಾರ ನೀಡುತ್ತಾ. ಇತರರಿಗೆಮಾದರಿಯಾಗಿದ್ದಾರೆ.

ತಮ್ಮ ದೈನಂದಿನ ಜೀವನದಲ್ಲಿ ಸಮಾಜ ಸೇವೆ ಒಂದು ಭಾಗ ಎಂದು ತೊಡಗಿಸಿಕೊಂಡಿರುವ ಇವರ ಕಾರ್ಯ ವೈಖರಿಯನ್ನು ಮೆಚ್ಚಿ. ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೆನಪೊಯಾ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ278  ಸ್ಪರ್ಧಿಗಳ ಪೈಕಿ ಇವರ ಮಾಡಿರುವ ಕೋವಿಡ್ ಸೇವಾ ಕಾರ್ಯನ್ನು ಗುರುತಿಸಿ” Youth covid warrior” ಎಂಬ ರಾಷ್ಟೀಯಪುರಸ್ಕಾರವನ್ನು ನೀಡಿ ಗೌರವಿಸಿದೆ.

ಜೊತೆಗೆ “national council of rural education Dept of higher education minister  of Human resource  development  govt of India” ಇದರ ವೆಬಿನಾರ್ ನಲ್ಲಿ   ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಹೆಮ್ಮೆ ಇವರಿಗಿದೆ. ಹಾಗೇವಿಶ್ವದ ಅತೀ ದೀರ್ಘ ವೆಬಿನಾರ್ ನಲ್ಲಿ ಭಾಗವಹಿಸಿ  ಗಮನ ಸೆಳೆದ ಇವರು World book of record, Lodon  ಆಯ್ಕೆಯಾಗಿ ಸೈಎನಿಸಿಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೇ ಇತ್ತೀಚಿನ ದಿನದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ದಿನದ ಅಂಗವಾಗಿ  Savitri bhai phule university of Pune ಎಂಬ ರಾಷ್ಟ್ರ ಮಟ್ಟದಲ್ಲಿ ನಡೆಯುವ ವೆಬಿನಾರ್ ನಲ್ಲಿ  ಕರ್ನಾಟಕ ರಾಜ್ಯವನ್ನು  ಪ್ರತಿನಿಧಿಸಿದಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಹೆಮ್ಮೆ ಇವರ ಹೆಸರಿನಲ್ಲಿದೆ. ಇವರ ಸಾಧನೆಯನ್ನು ಗುರುತಿಸಿ ಪ್ರಸಿಧ್ಧಮಂಗಳೂರು ಆಕಾಶವಾಣಿಇದರ ಜನಪ್ರಿಯ ಕಾರ್ಯಕ್ರಮದಲ್ಲಿ ಇವರನ್ನು ಸಂದರ್ಶಿಸುವ ಮೂಲಕ ಗೌರವಿಸಲಾಗಿದೆ. ಮತ್ತು ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳ ಕೈಯಿಂದ ಇವರ ಸಾಧನೆಗೆ  ಸನ್ಮಾನ ಹಾಗೂ ಗೌರವ ಮತ್ತು ಮೆಚ್ಚುಗೆಯ ಮಾತುಗಳನ್ನುಹಾಡಿದ್ದಾರೆ.

ಬದಲಾಗುತ್ತಿರುವ ಜಗದಲ್ಲಿ ಸಮಾಜ ಸೇವೆ ಎಂಬ ಕೊಡಲೆ ಹಿಂಜರಿಯುವ ಜನಗಳೇ ಹೆಚ್ಚು.ಅದರಲ್ಲೂ ವಿಶೇಷವಾಗಿವಿದ್ಯಾಭ್ಯಾಸದೊಂದಿಗೆ ಇವರ ಸಮಾಜಮುಖಿ ಕಾರ್ಯ ನೋಡಿ ಚಪ್ಪಾಳೆ ತಟ್ಟದ ವ್ಯಕ್ತಿ ಇರಲು ಸಾಧ್ಯವಿಲ್ಲ. ಸಮಾಜ ಸೇವೆಗೆ ಪಣತೊಟ್ಟ ನಿಂತ ಇವರ ಸಾಧನೆಯ ದಾರಿ  ಶ್ಲಾಘನೀಯ. ಇವರ ಸಾಧನೆ ಇತರ ಯುವಕರಿಗೂ ಸ್ಪೂರ್ತಿ ನೀಡಲಿ. ಇವರ ಹಸ್ತದಮೂಲಕ ಇನ್ನಷ್ಟು ಸಮಾಜ ಸೇವೆ ಮಾಡಲು ದೇವರು ಅನುಗ್ರಹಿಸಿಲಿ ಎಂಬುಂದು ನಮ್ಮ ತಂಡದ ಆಶಯವಾಗಿದೆ.

 

ಬರಹ:- ಶ್ರವಣ್ ಬಿ.ಸಿ.ರೋಡ್


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »