TOP STORIES:

FOLLOW US

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »