TOP STORIES:

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »