TOP STORIES:

ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ


ಕೆಲ ದಿನಗಳ ನಂತರ ಸಾಮಾಜಿಕ ಜಾಲತಾಣದಲ್ಲಿ ಬರೆಯಬೇಕೆನಿಸಿತು.ದಿನಾಂಕ 26.09.2021 ನೇ ಭಾನುವಾರ ಬೆಳ್ತಂಗಡಿಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಮತ್ತು ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ನಡೆದ ಅಮರ್ ಬೊಳ್ಳಿಲು ವಿಚಾರ ಮಂಡನೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ವಿಚಾರಗಳನ್ನು ತಿಳಿಯಬೇಕು ಎಂಬ ಆಸಕ್ತಿಯಿಂದ ಭಾಗವಹಿಸಿದೆ.ಸಂಘಟಕರು ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ಪ್ರಾರಂಭಿಸಿದರು.ಚುಟುಕಾದ ಉದ್ಘಾಟನಾ ಕಾರ್ಯಕ್ರಮ ಮತ್ತು ನಮ್ಮ ಸಮುದಾಯದ ಕಳಕಳಿ ಮತ್ತು ಮನ ಮುಟ್ಟುವ ಮಾತುಗಳು ಮಾಜಿ ಶಾಸಕರಾದ ಕೆ ವಸಂತ ಬಂಗೇರ ರವರ ಉದ್ಘಾಟನಾ ಭಾಷಣದಲ್ಲಿ ಇತ್ತು ನಂತರ ನೇರವಾಗಿ ವಿಚಾರ ಮಂಡನೆ ಮತ್ತು ಸಂವಾದ ಕಡೇ ನಮ್ಮ ಗಮನ, ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ , ಬೈದ್ಯ ಶ್ರೀ ಉಡುಪಿಯ ಅಧ್ಯಕ್ಷರಾದ ಶ್ರೀ ದಾಮೋದರ ಕಲ್ಮಾಡಿ, ಸಾಹಿತಿಗಳಾದ ಚೆಲುವರಾಜ್ ಪೆರಂಪಳ್ಳಿ, ರಂಗಕರ್ಮಿ, ಸಾಹಿತಿ, ಪತ್ರಕರ್ತರಾದ ಪರಮಾನಂದ ಸಾಲ್ಯಾನ್ , ಕಾರ್ಯಕ್ರಮದ ಸಮನ್ವಯಕಾರು ರಾಣಿ ಅಬ್ಬಕ್ಕ ಜಾನಪದ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಪ್ರೊ.ಡಾ.ತುಕರಾಮ ಪೂಜಾರಿ.

ಕಾರ್ಯಕ್ರಮದಲ್ಲಿ ಮಂಡನೆ ಮತ್ತು ಸಂವಾದ ಉತ್ತಮ ರೀತಿಯಲ್ಲಿ ನಡೆಯಿತು. ಕಳೆದ ಬಾರಿ ಮಂಗಳೂರಿನಲ್ಲಿ ನಡೆದ ಈ ರೀತಿಯ ಸಂವಾದ ಕಾರ್ಯಕ್ರಮದಲ್ಲಿ ನಾನೂ ಒಬ್ಬ ಪ್ರೇಕ್ಷಕನಾಗಿ ಭಾಗವಹಿಸಿದ್ದೆ. ಆದರೆ ಅದು ಗೊಂದಲದ ಗೂಡಾಯಿತು ನನ್ನ ಮನಸ್ಸಿಗೆ ಅತೀವ ನೋವು ಕೂಡ ಆಯಿತು.ಈ ಕಾರ್ಯಕ್ರಮದಲ್ಲಿ ನನ್ನ ಮನಸ್ಸಿನ ಮೂಲೆಯಲ್ಲೊಂದು ಆಶಾಭಾವನೆ ಚಿಗುರೊಡೆಯಿತು.ಕೋಟಿ ಚೆನ್ನಯ್ಯ ರ ಕೆಲವೊಂದು ವಿಚಾರದಲ್ಲಿ ವ್ಯತ್ಯಾಸಗಳು ಇದ್ದ ಎರಡು ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದದ್ದು ನನಗೆ ಖುಷಿ ನೀಡಿತು. ಅಂತಿಮವಾಗಿ ತಿಳಿದ ವಿಚಾರ ಇಷ್ಟೇ ವೀರ ಪುರುಷರ ವಿಚಾರದಲ್ಲಿ ಜನಸಾಮಾನ್ಯರಿಗೆ (ಭಕ್ತರಿಗೆ ) ಯಾವುದೇ ಗೊಂದಲ ಇಲ್ಲ, ಕೋಟಿ ಚೆನ್ನಯರು ನಡೆದಾಡಿದ ಪ್ರತಿ ಜಾಗವೂ ಪವಿತ್ರ ,ನಮ್ಮ ಸಮಾಜ ಈ ವಿಚಾರದ ದ್ವಂದ್ವದಿಂದ ಸಮಾಜದ ಒಗ್ಗಟ್ಟಿಗೆ ತುಂಬಾ ನಷ್ಟವಾಗಿದೆ.ಇನ್ನೂ ಮುಂದೆ ಈ ವಿಚಾರದಲ್ಲಿ ಗೊಂದಲವನ್ನು ಸೃಷ್ಟಿ ಮಾಡದೇ ನಮ್ಮ ಸಮಾಜ ಒಗ್ಗಟ್ಟಾಗಿ ಇರೋಣ, ಎಂಬ ಸಂದೇಶವು ಎರಡು ತಂಡಗಳಿಂದ ವ್ಯಕ್ತವಾಯಿತು.

ಎಸ್ ಆರ್ ಪ್ರವೀಣ್ 


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »