TOP STORIES:

FOLLOW US

ಕೋವಿಡ್ ಗುಣವಾಯ್ತಾ? ಹಾರ್ಟ್ ಚೆಕಪ್ ಮಾಡಿಸದಿದ್ರೆ ಅಪಾಯ ಇನ್ನೂ ಇದೆ!


  • ಬೆಂಗಳೂರು : ಕೋವಿಡ್ ಗುಣಮುಖರಾದ ನಂತರ ಅಬ್ಬಾ ಅಂತೂ ಬದುಕಿಕೊಂಡೆ ಅಂತ ನಿಟ್ಟುಸಿರು ಬಿಡುತ್ತಿರುವ ಅನೇಕರು ನಂತರವೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕು. ಅದರಲ್ಲೂ ಹೃದಯದ ಪರೀಕ್ಷೆಯನ್ನಂತೂ ಖಂಡಿತಾ
    ತಪ್ಪಿಸಬಾರದು ಎನ್ನುತ್ತಾರೆ ವೈದ್ಯರು.
  • ಕೋವಿಡ್ ನಿಂದ ಬಳಲಿ ನಂತರ ಸಂಪೂರ್ಣವಾಗಿ ಗುಣಮುಖರಾದ ಅನೇಕರಲ್ಲಿ ಹೃದಯ ಮತ್ತು ರಕ್ತನಾಳ ಸಂಬಂಧಿ ಸಮಸ್ಯೆಗಳು ಕಂಡುಬಂದಿವೆ. ಅನೇಕ ಪ್ರಕರಣಗಳಲ್ಲಂತೂ ಬಹಳ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಉದಾಹರಣೆಗಳೂ ಸಾಕಷ್ಟಿವೆ. ಹಾಗಾಗಿ ತಪ್ಪದೇ ಕನಿಷ್ಟ 3 ತಿಂಗಳಿಗೆ ಒಂದು ಸಲವಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು. ಇದರಿಂದ ದಿಢೀರನೆ ಹೃದಯಾಘಾತವಾಗುವುದನ್ನು ತಪ್ಪಿಸಬಹುದು.
  • ಕೋವಿಡ್ ನಂತರದ ಹೃದ್ರೋಗಗಳು ಸಣ್ಣ ವಯಸ್ಸಿನವರನ್ನು ಕಾಡುತ್ತಿರುವುದು ಆತಂಕಕಾರಿ ವಿಚಾರ. ಅದರಲ್ಲೂ 50 ವರ್ಷದೊಳಗಿನವರಾದರೆ ಹೃದ್ರೋಗ ಇರಲಿ, ಇಲ್ಲದಿರಲಿ ಒಮ್ಮೆ ತಪಾಸಣೆ ಮಾಡಿಸಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು ಎನ್ನುತ್ತಾರೆ
ಫೋರ್ಟಿಸ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಆರ್ ಕೇಶವ.
ಕೋವಿಡ್ ಗೂ ಹೃದಯಾಘಾತಕ್ಕೂ ಏನು ಸಂಬಂಧ?

ಇತ್ತೀಚೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ನಿಂದ ಗುಣಮುಖರಾದ 3-4 ವಾರಗಳ ಬಳಿಕ ಹೃದಯಾಘಾತ ಹೆಚ್ಚಳವಾಗುತ್ತಿರುವ ಬಗ್ಗೆ ತಿಳಿದುಬಂದಿದೆ. ಅದರಲ್ಲೂ ಎರಡನೇ ಅಲೆಯಲ್ಲಿ ಸಣ್ಣ ವಯಸ್ಸಿನವರನ್ನೇ ಹೆಚ್ಚಾಗಿ ಕೋವಿಡ್ ಬಾಧಿಸಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರು ನಂತರವೂ ದೀರ್ಘಕಾಲದವರಗೆ ಸಂಪೂರ್ಣ ನಿಶ್ಶಕ್ತಿ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ಹೃದಯಾಘಾತ ಸಂಭವ ಹೆಚ್ಚಿರುತ್ತದೆ ಎನ್ನುತ್ತಾರೆ ವೈದ್ಯರು.
ಎಚ್ಚರಿಕೆ ವಹಿಸುವುದು ಹೇಗೆ?
ಒಂದು ಸಲ ಕೋವಿಡ್ ಬಂದರೆ ದೇಹ ಸಹಜವಾಗಿಯೇ ಸುಸ್ತಾಗಿರುತ್ತದೆ. ಅದು ರೋಗಲಕ್ಷಣ ಇಲ್ಲದಿರುವ ಏಸಿಂಪ್ಟಮ್ಯಾಟಿಕ್ ಸ್ಥಿತಿ ಇರಲಿ ಅಥವಾ ತೀವ್ರವಾದ ಸೋಂಕು ತಗುಲಿ ಆಸ್ಪತ್ರೆಯಲ್ಲಿ ವಾರಗಟ್ಟಲೆ ಇರಬೇಕಾಗಿ ಬಂದ ಗಂಭೀರ ಪ್ರಕರಣವಿರಲಿ ದೇಹವನ್ನು ಕೋವಿಡ್ ಹೈರಾಣು ಮಾಡಿ ಹಾಕಿರುವುದಂತೂ ಸತ್ಯ. ಇದೇ ಗೊಂದಲದಲ್ಲಿ ಇರುವ ಜನ ಹೆಚ್ಚಾಗಿ ಹೃದಯದ ಆರೋಗ್ಯದ ಬಗ್ಗೆ ಗಮನ ಹರಿಸುವುದಿಲ್ಲ. ಆದರೆ ಕೋವಿಡ್ನಿಂದ ಗುಣವಾದ ಬಳಿಕ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗಿರುತ್ತದೆ. ಹೀಗಾಗಿ, ದೇಹಕ್ಕೆ ಅಗತ್ಯ ಪ್ರೋಟಿನ್ಯುಕ್ತ ಆಹಾರ ನೀಡುವುದು, ವ್ಯಾಯಾಮ, ಯೋಗ, ಧ್ಯಾನ ಮಾಡುವುದು, ಧೂಮಪಾನ, ಮದ್ಯಪಾನ ತ್ಯಜಿಸುವುದು, ಜಂಕ್ ಫುಡ್ ಸೇವನೆ ನಿಯಂತ್ರಣ ಸೇರಿದಂತೆ ಇತರೆ ಅನಾರೋಗ್ಯಕರ ಹವ್ಯಾಸವನ್ನು ತ್ಯಜಿಸಿ, ಹೃದಯದ ಆರೈಕೆಗೆ ಒತ್ತು ನೀಡಬೇಕು. ಅಲ್ಲದೆ, ಕೆಲಸದ ಒತ್ತಡ ಕೂಡ ಹೃದಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹೀಗಾಗಿ ಕನಿಷ್ಠ 3 ತಿಂಗಳು ಹೃದಯದ ಆರೋಗ್ಯದತ್ತ ಎಚ್ಚರಿಕೆಯಿಂದಿರುವುದು ಒಳ್ಳೆಯದು ಎನ್ನುತ್ತಾರೆ ವೈದ್ಯರು.
ಸಣ್ಣ ವಯಸ್ಸಿನವರಲ್ಲಿ ಹೃದಯ ಸಮಸ್ಯೆ ಹೆಚ್ಚಳ
ಮೊದಲೆಲ್ಲಾ ನಿವೃತ್ತಿ ಹೊಂದಿದವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡುಬರುತ್ತಿತ್ತು. ಆದ್ರೆ ಇತ್ತೀಚೆಗೆ ಯುವಕರಲ್ಲೇ ಹೆಚ್ಚೆಚ್ಚು ಹೃದಯಾಘಾತ ಮತ್ತು ಅದಕ್ಕೆ ಸಂಬಂಧಿಸಿದ ನಾನಾ ಸಮಸ್ಯೆಗಳು ಕಂಡುಬರುತ್ತಿವೆ. ಚಿದರಲ್ಲು 20ರಿಂದ 45 ವರ್ಷದೊಳಗಿನವರಲ್ಲಿ ಈ ಪ್ರಕರಣ ಮತ್ತಷ್ಟು ಹೆಚ್ಚು ಎನ್ನಲಾಗಿದೆ. 2017ರಲ್ಲಿ ನಡೆದ ಅಧ್ಯಯನ ಒಂದರ ಪ್ರಕಾರ ವರ್ಷಕ್ಕೆ 4 ಲಕ್ಷ ಮಧ್ಯವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರಂತೆ.
ಲಸಿಕೆಯಿಂದ ಹೃದಯಕ್ಕೂ ಪ್ರಯೋಜನ ಇದೆಯಾ?
ಕೋವಿಡ್ ಬರದಂತೆ ಅಥವಾ ಬಂದರೂ ಹೆಚ್ಚು ಹಾನಿ ಮಾಡದಂತೆ ತಡೆಯುವಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಈಗಾಗಲೇ ತಿಳಿದಿರುವ ವಿಚಾರ. ಹಾಗಾಗಿ ದೇಹದ ಮೇಲಾಗುವ ಅಪಾಯವನ್ನು ಕಡಿಮೆ ಮಾಡಿದರೆ ಸಹಜವಾಗಿಯೇ ಹೃದಯದ ಆರೋಗ್ಯವನ್ನೂ ಕಾಪಾಡುವ ಅವಕಾಶ ಸಿಕ್ಕಂತಾಗುತ್ತದೆ. ಹಾಗಾಗಿ ಲಸಿಕೆ ಪಡೆಯುವುದು ಬಹಳ ಅವಶ್ಯಕ ಎನ್ನುತ್ತಾರೆ ವೈದ್ಯರು. ಕೇವಲ ಕೋವಿಡ್ ನಿಂದ ಕಾಪಾಡುವುದು ಮಾತ್ರವಲ್ಲ, ಲಸಿಕೆ ಹೃದಯದ ಮೇಲಾಗುವ ವಿಪರೀತ ಪರಿಣಾಮಗಳನ್ನೂ ಆ ಮೂಕಲ ತಡೆಯಲು ಸಹಕಾರಿ ಎನ್ನಲಾಗಿದೆ. ಈಗಾಗಲೇ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಎಲ್ಲರೂ ಸಾಕಷ್ಟು ಏಟು ತಿಂದಿದ್ದೇವೆ. ಈಗಲಾದರೂ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆರೋಗ್ಯವಂತ ಜೀವನಶೈಲಿ ರೂಢಿಸಿಕೊಂಡರೆ ಮೂರನೇ ಅಲೆಯ ಅಪಾಯ ತಪ್ಪಿಸಬಹುದು ಎನ್ನುವುದು ತಜ್ಞರ ಅಭಿಮತ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »