TOP STORIES:

FOLLOW US

ಕೋವಿಡ್ ಗುಣವಾಯ್ತಾ? ಹಾರ್ಟ್ ಚೆಕಪ್ ಮಾಡಿಸದಿದ್ರೆ ಅಪಾಯ ಇನ್ನೂ ಇದೆ!


  • ಬೆಂಗಳೂರು : ಕೋವಿಡ್ ಗುಣಮುಖರಾದ ನಂತರ ಅಬ್ಬಾ ಅಂತೂ ಬದುಕಿಕೊಂಡೆ ಅಂತ ನಿಟ್ಟುಸಿರು ಬಿಡುತ್ತಿರುವ ಅನೇಕರು ನಂತರವೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಲೇಬೇಕು. ಅದರಲ್ಲೂ ಹೃದಯದ ಪರೀಕ್ಷೆಯನ್ನಂತೂ ಖಂಡಿತಾ
    ತಪ್ಪಿಸಬಾರದು ಎನ್ನುತ್ತಾರೆ ವೈದ್ಯರು.
  • ಕೋವಿಡ್ ನಿಂದ ಬಳಲಿ ನಂತರ ಸಂಪೂರ್ಣವಾಗಿ ಗುಣಮುಖರಾದ ಅನೇಕರಲ್ಲಿ ಹೃದಯ ಮತ್ತು ರಕ್ತನಾಳ ಸಂಬಂಧಿ ಸಮಸ್ಯೆಗಳು ಕಂಡುಬಂದಿವೆ. ಅನೇಕ ಪ್ರಕರಣಗಳಲ್ಲಂತೂ ಬಹಳ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಉದಾಹರಣೆಗಳೂ ಸಾಕಷ್ಟಿವೆ. ಹಾಗಾಗಿ ತಪ್ಪದೇ ಕನಿಷ್ಟ 3 ತಿಂಗಳಿಗೆ ಒಂದು ಸಲವಾದರೂ ಹೃದಯದ ಪರೀಕ್ಷೆ ಮಾಡಿಸಿಕೊಳ್ಳಬೇಕು ಎನ್ನುತ್ತಾರೆ ವೈದ್ಯರು. ಇದರಿಂದ ದಿಢೀರನೆ ಹೃದಯಾಘಾತವಾಗುವುದನ್ನು ತಪ್ಪಿಸಬಹುದು.
  • ಕೋವಿಡ್ ನಂತರದ ಹೃದ್ರೋಗಗಳು ಸಣ್ಣ ವಯಸ್ಸಿನವರನ್ನು ಕಾಡುತ್ತಿರುವುದು ಆತಂಕಕಾರಿ ವಿಚಾರ. ಅದರಲ್ಲೂ 50 ವರ್ಷದೊಳಗಿನವರಾದರೆ ಹೃದ್ರೋಗ ಇರಲಿ, ಇಲ್ಲದಿರಲಿ ಒಮ್ಮೆ ತಪಾಸಣೆ ಮಾಡಿಸಿಕೊಳ್ಳುವ ಅಭ್ಯಾಸ ರೂಢಿಸಿಕೊಳ್ಳಬೇಕು ಎನ್ನುತ್ತಾರೆ
ಫೋರ್ಟಿಸ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಆರ್ ಕೇಶವ.
ಕೋವಿಡ್ ಗೂ ಹೃದಯಾಘಾತಕ್ಕೂ ಏನು ಸಂಬಂಧ?

ಇತ್ತೀಚೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ ಅಧ್ಯಯನದಲ್ಲಿ ಕೋವಿಡ್ನಿಂದ ಗುಣಮುಖರಾದ 3-4 ವಾರಗಳ ಬಳಿಕ ಹೃದಯಾಘಾತ ಹೆಚ್ಚಳವಾಗುತ್ತಿರುವ ಬಗ್ಗೆ ತಿಳಿದುಬಂದಿದೆ. ಅದರಲ್ಲೂ ಎರಡನೇ ಅಲೆಯಲ್ಲಿ ಸಣ್ಣ ವಯಸ್ಸಿನವರನ್ನೇ ಹೆಚ್ಚಾಗಿ ಕೋವಿಡ್ ಬಾಧಿಸಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದವರು ನಂತರವೂ ದೀರ್ಘಕಾಲದವರಗೆ ಸಂಪೂರ್ಣ ನಿಶ್ಶಕ್ತಿ ಹೊಂದಿರುತ್ತಾರೆ. ಇಂಥ ಸಂದರ್ಭದಲ್ಲಿ ಹೃದಯಾಘಾತ ಸಂಭವ ಹೆಚ್ಚಿರುತ್ತದೆ ಎನ್ನುತ್ತಾರೆ ವೈದ್ಯರು.
ಎಚ್ಚರಿಕೆ ವಹಿಸುವುದು ಹೇಗೆ?
ಒಂದು ಸಲ ಕೋವಿಡ್ ಬಂದರೆ ದೇಹ ಸಹಜವಾಗಿಯೇ ಸುಸ್ತಾಗಿರುತ್ತದೆ. ಅದು ರೋಗಲಕ್ಷಣ ಇಲ್ಲದಿರುವ ಏಸಿಂಪ್ಟಮ್ಯಾಟಿಕ್ ಸ್ಥಿತಿ ಇರಲಿ ಅಥವಾ ತೀವ್ರವಾದ ಸೋಂಕು ತಗುಲಿ ಆಸ್ಪತ್ರೆಯಲ್ಲಿ ವಾರಗಟ್ಟಲೆ ಇರಬೇಕಾಗಿ ಬಂದ ಗಂಭೀರ ಪ್ರಕರಣವಿರಲಿ ದೇಹವನ್ನು ಕೋವಿಡ್ ಹೈರಾಣು ಮಾಡಿ ಹಾಕಿರುವುದಂತೂ ಸತ್ಯ. ಇದೇ ಗೊಂದಲದಲ್ಲಿ ಇರುವ ಜನ ಹೆಚ್ಚಾಗಿ ಹೃದಯದ ಆರೋಗ್ಯದ ಬಗ್ಗೆ ಗಮನ ಹರಿಸುವುದಿಲ್ಲ. ಆದರೆ ಕೋವಿಡ್ನಿಂದ ಗುಣವಾದ ಬಳಿಕ ದೇಹದಲ್ಲಿ ರೋಗನಿರೋಧಕ ಶಕ್ತಿ ಕುಗ್ಗಿರುತ್ತದೆ. ಹೀಗಾಗಿ, ದೇಹಕ್ಕೆ ಅಗತ್ಯ ಪ್ರೋಟಿನ್ಯುಕ್ತ ಆಹಾರ ನೀಡುವುದು, ವ್ಯಾಯಾಮ, ಯೋಗ, ಧ್ಯಾನ ಮಾಡುವುದು, ಧೂಮಪಾನ, ಮದ್ಯಪಾನ ತ್ಯಜಿಸುವುದು, ಜಂಕ್ ಫುಡ್ ಸೇವನೆ ನಿಯಂತ್ರಣ ಸೇರಿದಂತೆ ಇತರೆ ಅನಾರೋಗ್ಯಕರ ಹವ್ಯಾಸವನ್ನು ತ್ಯಜಿಸಿ, ಹೃದಯದ ಆರೈಕೆಗೆ ಒತ್ತು ನೀಡಬೇಕು. ಅಲ್ಲದೆ, ಕೆಲಸದ ಒತ್ತಡ ಕೂಡ ಹೃದಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹೀಗಾಗಿ ಕನಿಷ್ಠ 3 ತಿಂಗಳು ಹೃದಯದ ಆರೋಗ್ಯದತ್ತ ಎಚ್ಚರಿಕೆಯಿಂದಿರುವುದು ಒಳ್ಳೆಯದು ಎನ್ನುತ್ತಾರೆ ವೈದ್ಯರು.
ಸಣ್ಣ ವಯಸ್ಸಿನವರಲ್ಲಿ ಹೃದಯ ಸಮಸ್ಯೆ ಹೆಚ್ಚಳ
ಮೊದಲೆಲ್ಲಾ ನಿವೃತ್ತಿ ಹೊಂದಿದವರಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಂಡುಬರುತ್ತಿತ್ತು. ಆದ್ರೆ ಇತ್ತೀಚೆಗೆ ಯುವಕರಲ್ಲೇ ಹೆಚ್ಚೆಚ್ಚು ಹೃದಯಾಘಾತ ಮತ್ತು ಅದಕ್ಕೆ ಸಂಬಂಧಿಸಿದ ನಾನಾ ಸಮಸ್ಯೆಗಳು ಕಂಡುಬರುತ್ತಿವೆ. ಚಿದರಲ್ಲು 20ರಿಂದ 45 ವರ್ಷದೊಳಗಿನವರಲ್ಲಿ ಈ ಪ್ರಕರಣ ಮತ್ತಷ್ಟು ಹೆಚ್ಚು ಎನ್ನಲಾಗಿದೆ. 2017ರಲ್ಲಿ ನಡೆದ ಅಧ್ಯಯನ ಒಂದರ ಪ್ರಕಾರ ವರ್ಷಕ್ಕೆ 4 ಲಕ್ಷ ಮಧ್ಯವಯಸ್ಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರಂತೆ.
ಲಸಿಕೆಯಿಂದ ಹೃದಯಕ್ಕೂ ಪ್ರಯೋಜನ ಇದೆಯಾ?
ಕೋವಿಡ್ ಬರದಂತೆ ಅಥವಾ ಬಂದರೂ ಹೆಚ್ಚು ಹಾನಿ ಮಾಡದಂತೆ ತಡೆಯುವಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ ಎನ್ನುವುದು ಈಗಾಗಲೇ ತಿಳಿದಿರುವ ವಿಚಾರ. ಹಾಗಾಗಿ ದೇಹದ ಮೇಲಾಗುವ ಅಪಾಯವನ್ನು ಕಡಿಮೆ ಮಾಡಿದರೆ ಸಹಜವಾಗಿಯೇ ಹೃದಯದ ಆರೋಗ್ಯವನ್ನೂ ಕಾಪಾಡುವ ಅವಕಾಶ ಸಿಕ್ಕಂತಾಗುತ್ತದೆ. ಹಾಗಾಗಿ ಲಸಿಕೆ ಪಡೆಯುವುದು ಬಹಳ ಅವಶ್ಯಕ ಎನ್ನುತ್ತಾರೆ ವೈದ್ಯರು. ಕೇವಲ ಕೋವಿಡ್ ನಿಂದ ಕಾಪಾಡುವುದು ಮಾತ್ರವಲ್ಲ, ಲಸಿಕೆ ಹೃದಯದ ಮೇಲಾಗುವ ವಿಪರೀತ ಪರಿಣಾಮಗಳನ್ನೂ ಆ ಮೂಕಲ ತಡೆಯಲು ಸಹಕಾರಿ ಎನ್ನಲಾಗಿದೆ. ಈಗಾಗಲೇ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಎಲ್ಲರೂ ಸಾಕಷ್ಟು ಏಟು ತಿಂದಿದ್ದೇವೆ. ಈಗಲಾದರೂ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉತ್ತಮ ಆರೋಗ್ಯವಂತ ಜೀವನಶೈಲಿ ರೂಢಿಸಿಕೊಂಡರೆ ಮೂರನೇ ಅಲೆಯ ಅಪಾಯ ತಪ್ಪಿಸಬಹುದು ಎನ್ನುವುದು ತಜ್ಞರ ಅಭಿಮತ.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »