TOP STORIES:

ಕೋವಿಡ್ ಮಾರ್ಗಸೂಚಿಪಾಲಿಸಿ ಮಂಗಳೂರು ದಸರಾ ಆಚರಣೆ


ಕೋವಿಡ್ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸಿಕೊಂಡು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಹೇಳಿದರು.

ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಸಂಘಟನೆಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕೋವಿಡ್ ಹಿನ್ನಲೆಯಲ್ಲಿ ಮಂಗಳೂರು ದಸರಾ ಈ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ದಸರಾ ಸಂದರ್ಭ ಕ್ಷೇತ್ರದ ಭೇಟಿ ನೀಡುವ ಸಂದರ್ಭ ಸ್ಯಾನಿಟೈಸರ್ , ಮಾಸ್ಕ್, ಥರ್ಮಲ್ ಸ್ಕ್ಯಾನ್ ಬಳಸಲು ಸೂಚನೆ ನೀಡಲಾಗುವುದು. ಇದಕ್ಕೆ ನಿದೇ೵ಶನ ನೀಡಲು ಪ್ರತಿನಿತ್ಯ 150ರಿಂದ 200ಸಂಖ್ಯೆಯ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರು ಮಾತನಾಡಿ, ಕೋವಿಡ್ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆಯನ್ನು ನಡೆಸುವುದು ಅನಿವಾರ್ಯವಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ-ನಿರ್ಗಮನ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ದಸರಾ ಯಶಸ್ವಿಯಾಗಲು ಎಲ್ಲರ ಸಹಕಾರವೂ ಅಗತ್ಯ ಎಂದರು.

ದೇವಸ್ಥಾನ ಕೋಶಾಧಿಕಾರಿ ಪದ್ಮರಾಜ್ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾದ೵ನ ಪೂಜಾರಿ ಅಭಿಲಾಷೆ, ಮಾರ್ಗದಶ೵ನದಂತೆ ಈ ಬಾರಿಯ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಸರಕಾರ ಮಾಗ೵ಸೂಚಿ ಅನುಸರಿಸಿ, ಧಾರ್ಮಿಕ ನಂಬಿಕೆ, ಸಂಪ್ರದಾಯ ಪ್ರಕಾರ ದಸರಾ ಮಹೋತ್ಸವ ನಡೆಯಲಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು. ಇದಕ್ಕಾಗಿ ಕಾಯ೵ಕತ೵ರ ತಂಡವನ್ನು ರಚಿಸಲಾಗುವುದು ಎಂದರು.

ಸಭೆಯಲ್ಲಿ ಹಾಜರಿದ್ದ ನಾನಾ ಸಂಘಸಂಸ್ಥೆಗಳ ಮುಖಂಡರು, ಕ್ಷೇತ್ರದ ಭಕ್ತಾದಿಗಳು, ಮಹಿಳಾ ಸಮಿತಿ ಸದಸ್ಯರು ತಮ್ಮ ಸಲಹೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕಕೇ೵ರಾ ಉಪಸ್ಥಿತರಿದ್ದರು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »