TOP STORIES:

FOLLOW US

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »