TOP STORIES:

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »