TOP STORIES:

ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್? ಹಾಗಾದ್ರೆ ಓದಿ ಈ ಸುದ್ದಿ..!


ಆರೋಗ್ಯಕರ ದೇಹವನ್ನು ಪಡೆಯಬೇಕು ಅಂದರೆ ಬೆಳಗ್ಗಿನ ಉಪಹಾರದ ಕಡೆಯೂ ಸೂಕ್ತ ಗಮನ ಹರಿಸುವುದು ಅತ್ಯಗತ್ಯವಾಗಿದೆ. ಆದರೆ ಅನೇಕರಿಗೆ ಕೆಲಸಕ್ಕೆ ಹೋಗುವ ತರಾತುರಿ, ಮಕ್ಕಳನ್ನು ಶಾಲೆಗೆ ಕಳುಹಿಸುವ ಒತ್ತಡದಿಂದಾಗಿ ಉಪಹಾರ ಸೇವಿಸಲು ಸಾಧ್ಯವೇ ಆಗೋದಿಲ್ಲ. ಇಂತಹ ಸಂದರ್ಭದಲ್ಲಿ ಅನೇಕರು ಬಾಳೆ ಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ಳುವುದುಂಟು.

ಈ ರೀತಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣು ಸೇವಿಸೋದು ಎಷ್ಟು ಸೇಫ್​ ಎಂದು ಎಂದಾದರೂ ಯೋಚಿಸಿದ್ದೀರೇ..? ಇಲ್ಲ ಎಂದಾದಲ್ಲಿ ಈ ಸ್ಟೋರಿಯನ್ನು ನೀವು ಓದಲೇಬೇಕು.

ರಾತ್ರಿ ಗಂಟೆಗಟ್ಟಲೇ ನಿದ್ದೆ ಮಾಡಿ ಬೆಳಗ್ಗೆ ಏಳುವ ನೀವು ಏನನ್ನು ಸೇವಿಸುತ್ತೀರಾ ಅನ್ನೋದು ನಿಮ್ಮ ಆರೋಗ್ಯವನ್ನು ರಕ್ಷಿಸಲೂಬಹುದು. ಹಾಳುಗೆಡವಲೂಬಹುದು. ಸುಲಭವಾಗಿ ಸಿಗುತ್ತೆ ಎಂಬ ಕಾರಣಕ್ಕೆ ಅನೇಕರು ಬೆಳಗ್ಗೆ ಬಾಳೆಹಣ್ಣನ್ನು ತಿಂದು ಹೊಟ್ಟೆ ತುಂಬಿಸಿಕೊಳ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು ಕೂಡ ಹೌದು.

ಬಾಳೆಹಣ್ಣನ್ನು ತಿನ್ನಬೇಕು ಎನಿಸಿದ್ರೆ ಸಾಕು ಅದನ್ನು ಹುಡುಕೋದು ಕಷ್ಟದ ಕೆಲಸವೇ ಅಲ್ಲ. ಒಂದು ವೇಳೆ ನೀವು ಫಿಟ್​ನೆಸ್​ ಪ್ರಿಯರಾಗಿದ್ದು ಬೆಳಗ್ಗಿನ ಉಪಹಾರ ತಯಾರಿಸುವ ವಿಚಾರದಲ್ಲಿ ಸೋಂಬೇರಿಗಳಾಗಿದ್ದರೆ ಬಾಳೆಹಣ್ಣು ನಿಮಗೆ ಉತ್ತಮ ಆಯ್ಕೆಯಾಗಿದೆ. ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಫೈಬರ್​, ಪೊಟ್ಯಾಷಿಯಂ, ಮ್ಯಾಗ್ನಿಷೀಯಂ ಅಂಶವಿದೆ. ಇದರಿಂದ ನಿಮ್ಮ ಜೀವ ನಿರೋಧ ಶಕ್ತಿ ಉತ್ತಮ ಆಗೋದ್ರ ಜೊತೆ ಜೊತೆಗೆ ಮೂಳೆಗಳೂ ಬಲಿಷ್ಠವಾಗುತ್ತದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ, ವಿಟಮಿನ್​ ಬಿ, ವಿಟಮಿನ್​ ಬಿ 6 ಇದೆ. ಬಾಳೆಹಣ್ಣಿನಲ್ಲಿರುವ ಸಿಹಿ ರುಚಿಯು ನಿಮಗೆ ಹೆಚ್ಚಿನ ಎನರ್ಜಿಯನ್ನು ನೀಡುತ್ತೆ. ಆದರೆ ಯಾವುದೇ ಕಾರಣಕ್ಕೂ ಬಾಳೆ ಹಣ್ಣೊಂದನ್ನೇ ನೀವು ಉಪಹಾರದಲ್ಲಿ ಸೇವನೆ ಮಾಡುವಂತಿಲ್ಲ..!

ಬಾಳೆಹಣ್ಣಿನಲ್ಲಿ ಅಗಾಧ ಪ್ರಮಾಣದಲ್ಲಿ ಪೋಷಕಾಂಶ ಅಡಗಿದೆ ಎಂಬ ಮಾತನ್ನು ತಳ್ಳಿ ಹಾಕುವಂತಿಲ್ಲ. ಆದರೆ ಇದರಲ್ಲಿರುವ ಸಕ್ಕರೆ ಅಂಶ ಮಧುಮೇಹಿಗಳಿಗೆ ಒಳ್ಳೆಯದಲ್ಲ. ಅಲ್ಲದೇ ಬಾಳೆಹಣ್ಣಿನಿಂದ ದೇಹಕ್ಕೆ ಸಿಕ್ಕ ಶಕ್ತಿಯು ಕೆಲವೇ ಸಮಯಗಳಲ್ಲಿ ಕರಗಿಬಿಡುತ್ತದೆ. ಇದೇ ಕಾರಣಕ್ಕೆ ನೀವು ಬಾಳೆ ಹಣ್ಣನ್ನು ಓಟ್ಸ್​​, ಇತರೆ ಹಣ್ಣುಗಳೊಂದಿಗೆ ಸೇವಿಸುವುದು ಹೆಚ್ಚು ಸೂಕ್ತ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

ಅಲ್ಲದೇ ಬಾಳೆಹಣ್ಣಿನಲ್ಲಿ ಮ್ಯಾಗ್ನೆಷಿಯಂ ಅತಿಯಾದ ಪ್ರಮಾಣದಲ್ಲಿದೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದ್ರೆ ಅದು ದೇಹದ ಜೀರ್ಣ ಕ್ರಿಯೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ.


Related Posts

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »